ಅಭಿನಂದನ್ ಗೆ ಪರಮ ವೀರ ಚಕ್ರ ನೀಡುವಂತೆ ತಮಿಳುನಾಡಿನಿಂದ ಶಿಫಾರಸು
ಚೆನ್ನೈ, ಮಾರ್ಚ್ 08: ಭಾರತೀಯ ವಾಯುಸೇನೆಯ ವಿಂಗ್ ಕಮಾಂಡರ್, ಪೈಲಟ್ ಅಭಿನಂದನ್ ವರ್ತಮಾನ್ ಅವರಿಗೆ ದೇಶದ ಅತ್ಯುನ್ನುತ ಸೇನಾ ಪದಕ ಪರಮ ವೀರ ಚಕ್ರ ನೀಡಿ ಗೌರವಿಸುವಂತೆ ತಮಿಳುನಾಡು ಸರ್ಕಾರದ ಪರವಾಗಿ ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.
ಬಾಲಕೋಟ್ ವೈಮಾನಿಕ ದಾಳಿ ಬಳಿಕ ಪಾಕಿಸ್ತಾನದ ಎಫ್ 16 ಯುದ್ಧ ವಿಮಾನವನ್ನು ಅಟ್ಟಿಸಿಕೊಂಡು ದಾಳಿ ನಡೆಸಿದ್ದ ಮಿಗ್ 21 ಬೈಸನ್ ವಿಮಾನದ ಪೈಲಟ್ ಅಭಿನಂದನ್ ಅವರ ಸಾಹಸವನ್ನು ಎಲ್ಲರೂ ಕೊಂಡಾಡುತ್ತಿದ್ದಾರೆ. ಎಫ್ 16 ಹೊಡೆದುರುಳಿಸುವ ಭರದಲ್ಲಿ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಸೆರೆ ಸಿಕ್ಕಿದ್ದ ಅಭಿನಂದನ್ ಅವರು ಸುಮಾರು 60 ಗಂಟೆಗಳ ಕಾಲ ಶತ್ರು ರಾಷ್ಟ್ರದ ಹಿಡಿತದಲ್ಲಿದ್ದರು.

ಆದರೂ, ದೇಶಕ್ಕೆ ಮಾರಕವಾಗಬಲ್ಲ ಯಾವುದೇ ಮಾಹಿತಿಯನ್ನು ಹೊರ ಹಾಕದೆ, ಧೈರ್ಯ ಸಂಯಮ ಮೆರೆದಿದ್ದಾರೆ. ಹೀಗಾಗಿ, ಅವರಿಗೆ ಅತ್ಯುನ್ನತ ಮಿಲಿಟರಿ ಗೌರವ ಸಿಗಬೇಕಿದೆ ಎಂದು ಪತ್ರದಲ್ಲಿ ಬರೆಯಲಾಗಿದೆ.
Chief Minister of Tamil Nadu, Edappadi K. Palaniswami writes to Prime Minister Narendra Modi requesting Param Veer Chakra (country's highest military honour) for Wing Commander Abhinandan Varthaman. (File pic) pic.twitter.com/6HVzrumn7F
— ANI (@ANI) March 8, 2019
ಪರಮ್ ವೀರ್ ಚಕ್ರ ಇಲ್ಲಿ ತನಕ 21 ಬಾರಿ ನೀಡಲಾಗಿದೆ.ಯುನೈಟೆಡ್ ಸ್ಟೇಟ್ಸ್ ನ ಮೆಡಲ್ ಆಫ್ ಹಾನರ್ ಹಾಗೂ ಯುನೈಟೆಡ್ ಕಿಂಗ್ಡಮ್ ನ ವಿಕ್ಟೋರಿಯಾ ಕ್ರಾಸ್ ಗೆ ಸಮಾನದ ಮಿಲಿಟರಿ ಗೌರವ ಇದ್ದಾಗಿದೆ. ಈ ಪೈಕಿ 14 ಮಂದಿ ಹುತಾತ್ಮರಿಗೆ ಹಾಗೂ 16 ಮಂದಿ ಭಾರತ- ಪಾಕಿಸ್ತಾನ ಯುದ್ಧದಲ್ಲಿ ಕಾದಾಡಿದ ಯೋಧರಿಗೆ ಲಭಿಸಿದೆ. 21 ಪ್ರಶಸ್ತಿ ವಿಜೇತರ ಪೈಕಿ 20 ಮಂದಿ ಭಾರತೀಯ ಭೂ ಸೇನೆಗೆ ಸೇರಿದ್ದರೆ, ಒಬ್ಬರು(ಫ್ಲೈಯಿಂಗ್ ಆಫೀಸರ್ ನಿರ್ಮಲ್ ಜಿತ್ ಸಿಂಗ್ ಶೆಖೋನ್) ಮಾತ್ರ ಭಾರತೀಯ ವಾಯುಸೇನೆಗೆ ಸೇರಿದವರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications