39 ಕೋಟಿ ರೂ ವೆಚ್ಚದಲ್ಲಿ ಕರುಣಾನಿಧಿ ಸ್ಮಾರಕ ನಿರ್ಮಾಣ ಘೋಷಣೆ
ಚೆನ್ನೈ, ಆಗಸ್ಟ್ 24: ಡಿಎಂಕೆ ನಾಯಕ ಹಾಗೂ ಮಾಜಿ ಸಿಎಂ ದಿವಂಗತ ಎಂ. ಕರುಣಾನಿಧಿ ಸ್ಮರಣಾರ್ಥ ಚೆನ್ನೈನ ಮರಿನಾದಲ್ಲಿನ ಕಾಮರಾಜರ್ ಸಲೈನಲ್ಲಿ 39 ಕೋಟಿ ರೂಪಾಯಿ ವೆಚ್ಚದಲ್ಲಿ ಸ್ಮಾರಕ ನಿರ್ಮಾಣ ಮಾಡುವುದಾಗಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಮಂಗಳವಾರ ಘೋಷಣೆ ಮಾಡಿದ್ದಾರೆ.
'ಆಧುನಿಕ ತಮಿಳುನಾಡು' ನಿರ್ಮಾಣಕ್ಕೆ ಕರುಣಾನಿಧಿ ಅವರು ನೀಡಿರುವ ಕೊಡುಗೆಯ ಸ್ಮರಣಾರ್ಥ ಸ್ಮಾರಕ ನಿರ್ಮಾಣ ಮಾಡುತ್ತಿರುವುದಾಗಿ ಸ್ಟಾಲಿನ್ ತಿಳಿಸಿದ್ದಾರೆ.
ಪ್ರಸಿದ್ಧ ಮರೀನಾ ಕಡಲ ತೀರದಲ್ಲಿ ಎರಡು ಎಕರೆ 23 ಗುಂಟೆಯಲ್ಲಿ ಈ ಸ್ಮಾರಕ ನಿರ್ಮಾಣ ಮಾಡಲಾಗುವುದು ಎಂದು ರಾಜ್ಯ ವಿಧಾನಸಭೆಗೆ ಸ್ಟಾಲಿನ್ ವಿವರ ನೀಡಿದರು.

ತಮಿಳುನಾಡಿನಲ್ಲಿ ಸಮಾಜ ಕಲ್ಯಾಣ, ಸಾರಿಗೆ, ಸಾಹಿತ್ಯ, ಶಿಕ್ಷಣ, ನಗರೀಕರಣ ಮತ್ತು ಮೂಲಸೌಕರ್ಯ ಅಭಿವೃದ್ಧಿಯಂಥ ವಿವಿಧ ಕ್ಷೇತ್ರಗಳಿಗೆ ಕರುಣಾನಿಧಿಯವರು ನೀಡಿದ ಕೊಡುಗೆ ಸ್ಮರಿಸಿದ ಸ್ಟಾಲಿನ್, ನನ್ನ ತಂದೆ ಹಾಗೂ ಡಿಎಂಕೆ ಧುರೀಣ ಕರುಣಾನಿಧಿ ಅವರು 'ಆಧುನಿಕ ತಮಿಳುನಾಡಿನ ಶಿಲ್ಪಿ' ಎಂದು ಕರೆದಿದ್ದಾರೆ.
ಅರ್ಧ ಶತಮಾನದವರೆಗೂ ಸುದ್ದಿಯಲ್ಲಿದ್ದ ಕರುಣಾನಿಧಿ ಅವರು ಆಗಸ್ಟ್ 7, 2018ರಲ್ಲಿ ಚಿರನಿದ್ರೆಗೆ ಜಾರಿದರು ಎಂದ ಸ್ಟಾಲಿನ್, ಅವರ ಸಾವಿಗೂ ಮುನ್ನ ತಮಿಳು ಸಮುದಾಯಕ್ಕಾಗಿ ಅವರು ಸಾಕಷ್ಟು ಕಾರ್ಯಗಳನ್ನು ಮಾಡಿದರು ಎಂದು ಹೇಳಿದರು.
'ಕರುಣಾನಿಧಿಯವರಂಥ ನಾಯಕನನ್ನು ದೇಶದಲ್ಲೇ ಕಾಣಲು ಸಾಧ್ಯವಿಲ್ಲ. ಚುನಾವಣೆಯಲ್ಲಿ ಹದಿಮೂರು ಬಾರಿ ಸ್ಪರ್ಧಿಸಿದರೂ ಒಂದು ಬಾರಿ ಕೂಡ ಸೋಲನ್ನು ಕಂಡಿಲ್ಲ. ತಮ್ಮ 80 ವರ್ಷದ ರಾಜಕೀಯ ಜೀವನದಲ್ಲಿ 60 ವರ್ಷ ವಿಧಾನಸಭಾ ಸದಸ್ಯರಾಗಿದ್ದರು' ಎಂದರು.
'ತಾಯ್ನಾಡು ತಮಿಳುನಾಡಿಗಾಗಿ ಅವರು ಮಾಡಿದ ಮಹಾನ್ ಕಾರ್ಯವನ್ನು ಗುರುತಿಸಲು ಹಾಗೂ ಅವರ ಸಾಧನೆಗಳನ್ನು ಭವಿಷ್ಯದ ಪೀಳಿಗೆಗೆ ತೋರಲು ಡಿಎಂಕೆ ಸಂಸ್ಥಾಪಕ ಅಣ್ಣಾದೊರೈ ಅವರ ಸ್ಮಾರಕದ ಪಕ್ಕದಲ್ಲೇ ಕರುಣಾನಿಧಿ ಅವರ ಸ್ಮಾರಕವನ್ನು 39 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣ ಮಾಡಲಾಗುವುದು' ಎಂದು ಸ್ಟಾಲಿನ್ ವಿವರಿಸಿದರು.
ಈ ಸ್ಮಾರಕ ಕರುಣಾನಿಧಿ ಅವರ ಜೀವನಚರಿತ್ರೆಯನ್ನು ತಿಳಿಸುವಂತಿರುತ್ತದೆ. ತಮಿಳುನಾಡು ರಾಜಕೀಯ, ಅಭಿವೃದ್ಧಿಯಲ್ಲಿ ಅವರ ಪಾತ್ರವನ್ನು ಸ್ಮರಿಸುವಂತಿರುತ್ತದೆ ಎಂದಿದ್ದಾರೆ.
1957ರಿಂದ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಕರುಣಾನಿಧಿಯವರು ನಾಲ್ಕು ಬಾರಿ ಮುಖ್ಯಮಂತ್ರಿಯಾಗಿದ್ದವರು. 2018ರಲ್ಲಿ ತಮ್ಮ 94ನೇ ವಯಸ್ಸಿನಲ್ಲಿ ಸಾವನ್ನಪ್ಪಿದರು. ಅವರು ಸತ್ತ ನಂತರದ ಮೂರನೇ ವರ್ಷದಲ್ಲಿ ಸ್ಮಾರಕ ನಿರ್ಮಾಣ ಘೋಷಣೆಯನ್ನು ಅವರ ಪುತ್ರ, ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್ ಮಾಡಿದ್ದಾರೆ.
ಘೋಷಣೆಗೆ ವಿರೋಧ ಪಕ್ಷ ಸ್ವಾಗತ
ಈ ಘೋಷಣೆಯನ್ನು ವಿರೋಧಪಕ್ಷ ಎಐಎಡಿಎಂಕೆ ಸ್ವಾಗತಿಸಿದೆ. 'ರಾಜ್ಯಕ್ಕೆ ಹಲವು ಕಲ್ಯಾಣ ಯೋಜನೆಗಳನ್ನು ಕರುಣಾನಿಧಿಯವರು ತಂದರು. ಕರುಣಾನಿಧಿ ಸಿನಿಮಾ ಡೈಲಾಗ್ಗಳು ಕೂಡ ರಾಜ್ಯದಲ್ಲಿ ಹಿಂದುಳಿದ ಸಮುದಾಯ ಮುಂದೆ ಬರಲು ಸಹಾಯ ಮಾಡಿದವು. ಅವರ ನಾಯಕತ್ವದಲ್ಲಿ ಡಿಎಂಕೆ ಹಾಗೂ ಎಐಎಡಿಎಂಕೆ ಸಾಕಷ್ಟು ಪಾಠಗಳನ್ನು ಕಲಿತಿವೆ' ಎಂದು ಒ ಪನ್ನೀರ್ಸೆಲ್ವಂ ಹೊಗಳಿದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications