ಜಯಲಲಿತಾಗೆ ಸಿಂಗಪುರದಲ್ಲಿ ಹೆಚ್ಚಿನ ಚಿಕಿತ್ಸೆ

ಚೆನ್ನೈ, ಸೆ. 24: ತಮಿಳರ ಪಾಲಿನ 'ಅಮ್ಮ' ಮುಖ್ಯಮಂತ್ರಿ ಜೆ ಜಯಲಲಿತಾ ಅವರು ಹೆಚ್ಚಿನ ಚಿಕಿತ್ಸೆಗಾಗಿ ಸಿಂಗಪುರಕ್ಕೆ ತೆರಳಲಿದ್ದಾರೆ ಎಂಬ ಸುದ್ದಿ ಬಂದಿದೆ. ಜಯಲಲಿತಾ ಅವರಿಗೆ ಸದ್ಯ ಇಲ್ಲಿನ ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಗುರುವಾರ ತಡರಾತ್ರಿ ಆಸ್ಪತ್ರೆಗೆ ದಾಖಲಾದ ಜಯಲಲಿತಾ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದರೂ ಹೆಚ್ಚಿನ ಚಿಕಿತ್ಸೆ ಅಗತ್ಯವಿದೆ. ಹೀಗಾಗಿ ಸಿಂಗಪುರದ ಮೌಂಟ್ ಎಲಿಜಬೆತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲು ಆಪ್ತರು ಬಯಸಿದ್ದಾರೆ. [ಜಯಾ ಸಿಂಗಪುರಕ್ಕೆ ಹೋಗ್ಲಿ ಎಂದಿದ್ದು ಬದ್ಧವೈರಿ ಸ್ವಾಮಿ!]

ನಿತ್ರಾಣರಾಗಿದ್ದ ಜಯಲಲಿತಾ ಅವರಿಗೆ ಇದ್ದ ಸುಸ್ತು, ಜ್ವರ ಕಡಿಮೆಯಾಗಿದೆ. ಆದರೆ, ಸಿಂಗಪುರಕ್ಕೆ ಹೋಗುವುದು ಏಕೆ? ಬೇಡ ಇಲ್ಲೇ ಚಿಕಿತ್ಸೆ ಕೊಡಿ ಎಂದು ಜಯಲಲಿತಾ ಅವರು ಹಠ ಮಾಡುತ್ತಿದ್ದಾರಂತೆ.[ಜಯಲಲಿತಾ ಅವರ ಕಿಡ್ನಿ ಕಾರ್ಯ ನಿರ್ವಹಿಸುತ್ತಿಲ್ಲವೇ?]

Tamil Nadu CM Jayalalithaa to fly to Singapore for treatment
ಜಯಲಲಿತಾ ಅವರ ಆರೋಗ್ಯ ಸುಧಾರಣೆಗಾಗಿ ಶುಭ ಹಾರೈಕೆಗಳ ಮಹಾಪೂರವೇ ಹರಿದು ಬರುತ್ತಿದೆ. ಜಯಲಲಿತಾ ಅವರಿಗೆ ಏನೇನು ಕಾಯಿಲೆ ಇದೆ ಎಂಬುದರ ಬಗ್ಗೆ ಊಹಾಪೋಹ ಸುದ್ದಿಗಳು ಹಬ್ಬುತ್ತಲೇ ಇರುತ್ತದೆ. ಇಲ್ಲಿ ತನಕ ಎಐಎಡಿಎಂಕೆ ಕೂಡಾ ಈ ಬಗ್ಗೆ ಗುಟ್ಟು ಬಿಟ್ಟುಕೊಟ್ಟಿಲ್ಲ.

ಆದರೆ, ಜಯಲಲಿತಾ ಅವರಿಗೆ ಅಧಿಕ ರಕ್ತದೊತ್ತಡ, ಬೆನ್ನು ನೋವು, ಮಧುಮೇಹ ಕಾಯಿಲೆ ಇದೆ. ಇದಕ್ಕೆಲ್ಲ ಇಲ್ಲೇ ಚಿಕಿತ್ಸೆ ಸಿಕ್ಕರೂ ಬಹುವರ್ಷಗಳಿಂದ ಕಾಡುತ್ತಿರುವ ಕಿಡ್ನಿ ಸಮಸ್ಯೆಗೆ ಹೆಚ್ಚಿನ ಚಿಕಿತ್ಸೆಗಾಗಿ ಸಿಂಗಪುರ ಅಥವಾ ಅಮೆರಿಕಕ್ಕೆ ತೆರಳುವುದು ಅನಿವಾರ್ಯವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+