ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪಳನಿಸ್ವಾಮಿ ಬಹುಮತ ಸಾಬೀತಿಗೆ ಇಲ್ಲ ಚಿನ್ನಮ್ಮನ ಆಶಿರ್ವಾದ!

ತಮಿಳುನಾಡು ಸಿಎಂ ಪಳನಿಸ್ವಾಮಿ ನಾಳೆ (ಫೆ 18) ವಿಧಾನಸಭೆಯಲ್ಲಿ ಬಹುಮತ ಸಾಬೀತು ಪಡಿಸಬೇಕಾಗಿದ್ದು ಶುಕ್ರವಾರ ಸಂಜೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಬಂದು ಶಶಿಕಲಾ ಆಶಿರ್ವಾದ ಪಡೆಯಲಿದ್ದಾರೆ ಎನ್ನಲಾಗಿತ್ತು. ಆದರೆ ಅವರು ಬರುತ್ತಿಲ್ಲ.

By ವಿಕಾಸ್ ನಂಜಪ್ಪ
|
Google Oneindia Kannada News

ಚೆನ್ನೈ, ಫೆಬ್ರವರಿ 17: ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ ಬಹುಮತ ಸಾಬೀತಿಗೂ ಮುನ್ನ ಶಶಿಕಲಾರನ್ನು ಭೇಟಿಯಾಗುತ್ತಿಲ್ಲ. ಪಳನಿಸ್ವಾಮಿ ನಾಳೆ (ಫೆ 18) ವಿಧಾನಸಭೆಯಲ್ಲಿ ಬಹುಮತ ಸಾಬೀತು ಪಡಿಸಬೇಕಾಗಿದ್ದು ಶುಕ್ರವಾರ ಸಂಜೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಬಂದು ಶಶಿಕಲಾ ಆಶಿರ್ವಾದ ಪಡೆಯಲಿದ್ದಾರೆ ಎನ್ನಲಾಗಿತ್ತು. ಆದರೆ ಅವರು ಬರುತ್ತಿಲ್ಲ.

ಹೀಗಾಗಿ ಚಿನ್ನಮ್ಮ ಆಶೀರ್ವಾದ ಇಲ್ಲದೆ ಕೆ ಪಳನಿಸ್ವಾಮಿ ಬಹುಮತ ಸಾಬೀತು ಪಡಿಸಲು ಹೊರಟಿದ್ದಾರೆ. ಬಹುಮತ ಸಾಬೀತು ಪಡಿಸಲೆಂದೇ ಶನಿವಾರ ವಿಶೇಷ ಅಧಿವೇಶನ ಕರೆಯಲಾಗಿದ್ದು ಪಳನಿಸ್ವಾಮಿ ಅಗ್ನಿ ಪರೀಕ್ಷೆ ಎದುರಿಸಲಿದ್ದಾರೆ.[ಪಳನಿಸ್ವಾಮಿ ಬಹುಮತ ಸಾಬೀತುಪಡಿಸಲು ಮುಹೂರ್ತ ನಿಗದಿ!]

 Tamil Nadu CM Palanisamy unlikely to meet Sasikala before floor test

ಒಂದೊಮ್ಮೆ ಜೈಲಿನಲ್ಲಿರುವ ಶಶಿಕಲಾರನ್ನು ಭೇಟಿಯಾದರೆ ಬಹುಮತ ಸಾಬೀತಿಗೂ ಮುನ್ನ ಡಿಎಂಕೆ ಮತ್ತು ಒ ಪನ್ನೀರ್ ಸೆಲ್ವಂ ಬಣಕ್ಕೆ ಸರಕಾರದ ವಿರುದ್ಧ ಮುಗಿಬೀಳಲು ಅವಕಾಶ ನೀಡಿದಂತಾಗುತ್ತದೆ. ಹೀಗಾಗಿ ಶಶಿಕಲಾರನ್ನು ಭೇಟಿಯಾಗದೇ ಇರಲು ತೀರ್ಮಾನಿಸಲಾಗಿದೆ.[ಎಡಪ್ಪಾಡಿ ಪಳನಿಸ್ವಾಮಿ, ಜಯಲಲಿತಾ ಆಪ್ತ ವಲಯಕ್ಕೆ ಲಗ್ಗೆ ಇಟ್ಟಿದ್ದು ಹೀಗೆ!]

English summary
Newly sworn in chief minister of Tamil Nadu Palanisamy will not meet AIADMK's General Secretary Sasikala Natarajan who is currently lodged in the Bengaluru central jail. It was expected that Palanisamy would meet Sasikala on Friday after he took over the office or Chief Minister on Thursday evening but the same is unlikely till the floor test.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X