12,110 ಕೋಟಿ ರೂ ಕೃಷಿ ಸಾಲ ಮನ್ನಾ ಘೋಷಿಸಿದ ಸರ್ಕಾರ
ಚೆನ್ನೈ, ಫೆಬ್ರವರಿ 5: ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿಯೇ ತಮಿಳುನಾಡಿನ 16 ಲಕ್ಷಕ್ಕೂ ಅಧಿಕ ರೈತರ ಕೃಷಿ ಸಾಲಗಳನ್ನು ಮನ್ನಾ ಮಾಡುವುದಾಗಿ ಎಐಎಡಿಎಂಕೆ ಸರ್ಕಾರ ಘೋಷಿಸಿದೆ. ಸಹಕಾರಿ ಬ್ಯಾಂಕುಗಳಿಂದ ರೈತರು ಪಡೆದ ಒಟ್ಟು 12,110 ಕೋಟಿ ರೂ ಮೊತ್ತದ ಕೃಷಿ ಸಾಲಗಳನ್ನು ಮನ್ನಾ ಮಾಡುವುದಾಗಿ ತಮಿಳುನಾಡು ಮುಖ್ಯಮಂತ್ರಿ ಇ. ಪಳನಿಸ್ವಾಮಿ ಅವರು ವಿಧಾನಸಭೆಯಲ್ಲಿ ಶುಕ್ರವಾರ ತಿಳಿಸಿದರು.
ಕೊರೊನಾ ವೈರಸ್ ಪಿಡುಗು, ಎರಡು ಸತತ ಚಂಡಮಾರುತಗಳು ಹಾಗೂ ಅಕಾಲಿಕ ಮಳೆಯ ಕಾರಣಗಳಿಂದ ರೈತರ ಬದುಕು ಕಠಿಣವಾಗಿದ್ದು, ಬೆಳೆ ನಷ್ಟ ಅನುಭವಿಸುತ್ತಿದ್ದಾರೆ. ಅವರು ಕೃಷಿಯಲ್ಲಿ ಪುನಶ್ಚೇತನ ಕಂಡುಕೊಳ್ಳಲು ಸಹಾಯ ಮಾಡುವುದು ಮುಖ್ಯವಾಗಿದೆ ಎಂದು ಪಳನಿಸ್ವಾಮಿ ಹೇಳಿದರು.
ಈ ಸಾಲಮನ್ನಾ ತಕ್ಷಣದಿಂದಲೇ ಜಾರಿಯಾಗಲಿದ್ದು, ಸರ್ಕಾರದ ಖಜಾನೆಗಾಗಿ ಅದಕ್ಕೆ ಅಗತ್ಯವಾದ ಅನುದಾನವನ್ನು ತೆಗೆದಿರಿಸಲಾಗುವುದು ಎಂದು ತಿಳಿಸಿದರು. ಭರವಸೆಗಳನ್ನು ಈಡೇರಿಸುವ ಪಕ್ಷವೆಂದರೆ ಎಐಎಡಿಎಂಕೆ ಮಾತ್ರ. ಮತ್ತಷ್ಟು ಹೊಸ ಕಲ್ಯಾಣಕ್ರಮಗಳನ್ನು ಸರ್ಕಾರ ಜಾರಿಗೊಳಿಸಲಿದೆ ಎಂದರು.

ಒಂದೆರಡು ತಿಂಗಳಿನಲ್ಲಿಯೇ ತಮಿಳುನಾಡಿನಲ್ಲಿ ಚುನಾವಣೆ ನಡೆಯಲಿದ್ದು, ಅದಕ್ಕೂ ಮೊದಲೇ ಕೃಷಿ ವಲಯದ ಮತಗಳನ್ನು ಒಲಿಸಿಕೊಳ್ಳಲು ಎಐಡಿಎಂಕೆ ಕೃಷಿ ಸಾಲದ ಕ್ರಮ ತೆಗೆದುಕೊಂಡಿದೆ.
ಎಂಕೆ ಸ್ಟಾಲಿನ್ ನೇತೃತ್ವದ ವಿರೋಧಪಕ್ಷ ಡಿಎಂಕೆ ವಿರುದ್ಧ ವಾಗ್ದಾಳಿ ನಡೆಸಿದ ಪಳನಿಸ್ವಾಮಿ, ಪ್ರತಿ ರೈತರಿಗೂ ಎರಡು ಎಕರೆ ಭೂಮಿ ನೀಡುವುದಾಗಿ ಡಿಎಂಕೆ ಭರವಸೆ ನೀಡಿತ್ತು. ಆದರೆ ಆ ಮಾತನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ ಎಂದು ಎಂ. ಕರುಣಾನಿಧಿ ಅವರು ಮುಖ್ಯಮಂತ್ರಿಯಾಗಿದ್ದಾಗ ಆರಂಭಿಸಿದ್ದ ಯೋಜನೆಯ ಬಗ್ಗೆ ಪ್ರಸ್ತಾಪಿಸಿದರು.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications