ಕಮಲ್ ಹಾಸನ್ಗೆ ಕುಟುಂಬಗಳನ್ನು ಒಡೆಯುವುದಷ್ಟೇ ಗೊತ್ತು: ಪಳನಿಸ್ವಾಮಿ
ಏರಿಯೂರು, ಡಿಸೆಂಬರ್ 18: ತಮಿಳುನಾಡು ಮುಖ್ಯಮಂತ್ರಿ ಕೆ ಪಳನಿಸ್ವಾಮಿ ಮಕ್ಕಳ್ ನೀದಿಮಯಂ ಪಕ್ಷದ ಸ್ಥಾಪಕ ಕಮಲ್ ಹಾಸನ್ ಅವರ ವಿರುದ್ಧ ಗುಡುಗಿದ್ದಾರೆ.
ಕಮಲ್ ಹಾಸನ್ ಅವರಿಗೆ ಕುಟುಂಬಗಳನ್ನು ಒಡೆಯುವುದೇ ಕೆಲಸ ಎಂದು ಪಳನಿಸ್ವಾಮಿ ಟೀಕಿಸಿದ್ದಾರೆ.
'ಬಿಗ್ ಬಾಸ್' ರಿಯಾಲಿಟಿ ಶೋ ಉಲ್ಲೇಖಿಸಿ ಕಮಲ್ ಅವರನ್ನು ಪಳನಿಸ್ವಾಮಿ ಈ ರೀತಿ ಟೀಕಿಸಿದ್ದಾರೆ. ಮನೆಗಳನ್ನು ಹಾಳು ಮಾಡುವುದೇ ಅವರ ಕೆಲಸವಾಗಿದೆ, ರಾಜಕೀಯಕ್ಕೆ ಅವರು ಸೂಕ್ತವಲ್ಲ ಎಂದು ಪಳನಿಸ್ವಾಮಿ ಲೇವಡಿ ಮಾಡಿದ್ದಾರೆ.
ಕಮಲ್ ಹಾಸನ್ ಗೆ ಯಾವುದೇ ವಯಕ್ತಿಕ ಪ್ರಭವಾವಿಲ್ಲ, ಮತಗಳನ್ನು ಪಡೆಲು ವಿವಿಧ ರಾಜಕೀಯ ಪಕ್ಷಗಳು ಎಂಜಿಆರ್ ಪರಂಪರೆಯ ಬಗ್ಗೆ ಮಾತನಾಡುತ್ತಾರೆ, ಕಮಲ್ ಕೂಡ ಅದೇ ದಾರಿಯಲ್ಲಿ ನಡೆಯುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಕಮಲ್ ಹಾಸನ್ ಮಾಜಿ ಮುಖ್ಯಮಂತ್ರಿ ದಿ. ಎಂ.ಜಿ. ರಾಮಚಂದ್ರನ್ ಅವರ ಪರಂಪರೆಯ ಬಗ್ಗೆ ಪ್ರಸ್ತಾಪಿಸಿದ ಹಾಗೂ ಸರ್ಕಾರವನ್ನು ಟೀಕಿಸಿದ ಬೆನ್ನಲ್ಲೇ ಪಳನಿಸ್ವಾಮಿ ಅವರು ಈ ರೀತಿ ಪ್ರತಿಕ್ರಿಯಿಸಿದ್ದಾರೆ.
ರಾಮಚಂದ್ರನ್ ಅವರಿಂದ ಸ್ಥಾಪಿತವಾಗಿರುವ ಎಐಎಡಿಎಂಕೆ ಮಾತ್ರವೇ ಅವರ ಪರಂಪರೆಗೆ ಹಕ್ಕುದಾರ ಎಂದು ಪ್ರತಿಪಾದಿಸಿರುವ ಪಳನಿಸ್ವಾಮಿ, ಹಾಸನ್ ಅವರು ಬೇರೊಬ್ಬರ ಮಗುವಿಗೆ ನಾಮಕರಣ ಮಾಡಬಹುದೇ ಎಂದು ಪ್ರಶ್ನಿಸಿದ್ದಾರೆ.
ಪಳನಿಸ್ವಾಮಿ ಹೇಳಿಕೆಗೆ ಕಮಲ್ ಹಾಸನ್ ತಿರುಗೇಟು ನೀಡಿದ್ದು, ಮುಖ್ಯಮಂತ್ರಿಯವರೂ ಬಿಗ್ ಬಾಸ್ ರಿಯಾಲಿಟಿ ಶೋ ನೋಡಿದ್ದಾರೆಂದರೆ ಬಹಳ ಸಂತೋಷ ಎಂದು ಪ್ರತಿಕ್ರಿಯಿಸಿದ್ದಾರೆ.
-
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ












Click it and Unblock the Notifications