ಕಪ್ಪು ಶಿಲೀಂಧ್ರ ಸೋಂಕನ್ನು ಅಧಿಸೂಚಿತ ಸಾಂಕ್ರಾಮಿಕ ರೋಗ ಎಂದು ಘೋಷಿಸಿದ ತಮಿಳುನಾಡು
ಚೆನ್ನೈ, ಮೇ 20: ತಮಿಳುನಾಡು ಸರ್ಕಾರವು ಕಪ್ಪು ಶಿಲೀಂಧ್ರ ಅಥವಾ ಬ್ಲ್ಯಾಕ್ ಫಂಗಸ್ನ್ನು ಅಧಿಸೂಚಿತ ಸಾಂಕ್ರಾಮಿಕ ರೋಗ ಎಂದು ಘೋಷಿಸಿದೆ.
ಏತನ್ಮಧ್ಯೆ, ರಾಜ್ಯ ಆರೋಗ್ಯ ಇಲಾಖೆಯು ಮೊದಲ ಬಾರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದ ಕಪ್ಪು ಶಿಲೀಂಧ್ರ ಸೋಂಕಿತ ರೋಗಿಗಳ ಸಂಖ್ಯೆಯನ್ನು ಬಹಿರಂಗಪಡಿಸಿದೆ.
ಸಾಂಕ್ರಾಮಿಕ ಕಾಯ್ದೆಯಡಿ ಕಪ್ಪು ಶಿಲೀಂಧ್ರ ಅಧಿಸೂಚಿತ ಸಾಂಕ್ರಾಮಿಕ ರೋಗವೆಂದು ಘೋಷಿಸುವಂತೆ ಕೇಂದ್ರ ಆರೋಗ್ಯ ಸಚಿವಾಲಯವು ಎಲ್ಲಾ ರಾಜ್ಯಗಳಿಗೆ ಸೂಚಿಸಿದ ನಂತರ ಈ ಪ್ರಕಟಣೆ ಬಂದಿದೆ.

ಸಮಿತಿ ರಚನೆ
ಕಪ್ಪು ಶಿಲೀಂಧ್ರ ಪ್ರಕರಣಗಳ ತನಿಖೆಗಾಗಿ ಆರೋಗ್ಯ ಇಲಾಖೆಯಿಂದ ವೈದ್ಯಕೀಯ ಶಿಕ್ಷಣ ನಿರ್ದೇಶಕ ಡಾ. ಆರ್.ನಾರಾಯಣ ಬಾಬು ಅವರ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ ಎಂದು ಆರೋಗ್ಯ ಕಾರ್ಯದರ್ಶಿ ತಿಳಿಸಿದ್ದಾರೆ.

ರಾಜ್ಯದಲ್ಲಿ 9 ಮಂದಿಗೆ ಸೋಂಕು
ರಾಜ್ಯದಲ್ಲಿ ಇದುವರೆಗೆ 9 ಮಂದಿ ಸೋಂಕಿತರಿಗೆ ಚಿಕಿತ್ಸೆ ನೀಡಲಾಗಿದೆ. ಅವುಗಳಲ್ಲಿ ಏಳು ಮಧುಮೇಹ ಮತ್ತು ಎರಡು ಮಧುಮೇಹವಲ್ಲದವರು. ಏಳು ರೋಗಿಗಳಿಗೆ ದೃಷ್ಟಿ ಪರಿಣಾಮ ಬೀರಿದೆ. ಅವರೆಲ್ಲರಿಗೂ ಚಿಕಿತ್ಸೆ ನೀಡಲಾಗಿದೆ ಮತ್ತು ಅವರ ಆರೋಗ್ಯ ಸ್ಥಿರವಾಗಿದೆ. ಕಪ್ಪು ಶಿಲೀಂಧ್ರ ಸೋಂಕಿನಿಂದ ರಾಜ್ಯದಲ್ಲಿ ಇದುವರೆಗೆ ಯಾವುದೇ ಸಾವು ವರದಿಯಾಗಿಲ್ಲಎಂದು ಆರೋಗ್ಯ ಕಾರ್ಯದರ್ಶಿ ಜೆ ರಾಧಾಕೃಷ್ಣನ್ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ರಾಜ್ಯದ ಪ್ರಕರಣಗಳ ಬಗ್ಗೆ ಮಾಹಿತಿ
ಖಾಸಗಿ ಆಸ್ಪತ್ರೆಗಳು ಈ ರೋಗವನ್ನು ಸಾರ್ವಜನಿಕ ಆರೋಗ್ಯ ನಿರ್ದೇಶಕರಿಗೆ ತಿಳಿಸಿದ ನಂತರ ತಮಿಳುನಾಡಿನಲ್ಲಿ ವರದಿಯಾದ ಒಟ್ಟು ಮ್ಯೂಕಾರ್ಮೈಕೋಸಿಸ್ ಪ್ರಕರಣಗಳ ಬಗ್ಗೆ ರಾಜ್ಯವು ತಿಳಿದುಕೊಳ್ಳಲಿದೆ.ನಾವು ನಿಜವಾದ ಸಂಖ್ಯೆಗಳನ್ನು ಪಡೆದ ನಂತರ, ನಾವು ಮಾಹಿತಿ ಹಂಚಿಕೊಳ್ಳುತ್ತೇವೆ ಎಂದು ರಾಧಾಕೃಷ್ಣನ್ ಹೇಳಿದರು.

ತೆಲಂಗಾಣದಲ್ಲಿ ಬ್ಲ್ಯಾಕ್ ಫಂಗಸ್
ಕೊರೊನಾವೈರಸ್ ಸೋಂಕಿನಿಂದ ಗುಣಮುಖರಾದ ಜನರಲ್ಲಿ ಕಾಣಿಸಿಕೊಳ್ಳುವ ಬ್ಲ್ಯಾಕ್ ಫಂಗಸ್ ಅಥವಾ ಕಪ್ಪು ಶಿಲೀಂದ್ರ ರೋಗವನ್ನು ಸಾಂಕ್ರಾಮಿಕ ಪಿಡುಗು ಕಾಯ್ದೆ 1897ರ ವ್ಯಾಪ್ತಿಗೆ ಸೇರಿದೆ ತೆಲಂಗಾಣ ಸರ್ಕಾರ ಅಧಿಸೂಚನೆ ಹೊರಡಿಸಿದೆ. ದೇಶದ ಎಲ್ಲ ಸರ್ಕಾರಗಳು ಬ್ಲ್ಯಾಕ್ ಫಂಗಸ್ ರೋಗಿಗಳ ಪರೀಕ್ಷೆ, ತಪಾಸಣೆ ಮತ್ತು ರೋಗ ನಿರ್ಣಯಕ್ಕೆ ಸಂಬಂಧಿಸಿದಂತೆ ಪ್ರತ್ಯೇಕ ವ್ಯವಸ್ಥೆಯನ್ನು ಕಲ್ಪಿಸುವಂತೆ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆಯು ಸಲಹೆ ನೀಡಿದೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications