ತಮಿಳುನಾಡು: ಬಿಜೆಪಿ-ಕಾಂಗ್ರೆಸ್ ನಡುವೆ ಗೆಲುವು ಯಾರಿಗೆ?
ತಮಿಳುನಾಡು ವಿಧಾನಸಭೆ ಚುನಾವಣೆಯ ಫಲಿತಾಂಶ ಬಹುತೇಕ ಸ್ಪಷ್ಟವಾಗಿದೆ. ಸ್ಟ್ಯಾಲಿನ್ ನೇತೃತ್ವದ ಡಿಎಂಕೆ ಪಕ್ಷ ಸ್ಪಷ್ಟ ಬಹುಮತದತ್ತ ಮುಖ ಮಾಡಿದೆ. ಮತ ಎಣಿಕೆ ಪೂರ್ಣಗೊಳ್ಳುವ ಔಪಚಾರಿಕತೆ ಉಳಿದುಕೊಂಡಿದೆ ಅಷ್ಟೆ. ಆಡಳಿತಾರೂಢ ಎಐಎಡಿಎಂಕೆ ಪಕ್ಷ ಅಧಿಕಾರ ಕಳೆದುಕೊಳ್ಳುವುದು ಪಕ್ಕಾ ಆಗಿದೆ.
Recommended Video
ರಾಷ್ಟ್ರ ರಾಜಕಾರಣದಲ್ಲಿ ಪರಸ್ಪರ ಮುಖಾ-ಮುಖಿ ಗುದ್ದಾಡುವ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ತಮಿಳುನಾಡಿನಲ್ಲಿ ಪರಾವಲಂಭಿ ಪಕ್ಷಗಳೇ ಆಗಿವೆ. ಬಿಜೆಪಿಯು ಅಧಿಕಾರಾರೂಡ ಎಐಎಡಿಎಂಕೆ ಪಕ್ಷದ ಜೊತೆ ಮೈತ್ರಿ ಮಾಡಿಕೊಂಡಿದ್ದರೆ ಡಿಎಂಕೆ ಪಕ್ಷದ ಜೊತೆಗೆ ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿದೆ.
ತಮಿಳುನಾಡಿನಲ್ಲಿ ರಾಷ್ಟ್ರೀಯ ಪಕ್ಷಗಳ ಹೆಸರಿನಲ್ಲಿ ಚುನಾವಣೆ ನಡೆದಿಲ್ಲವಾದರೂ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಒಳ ಸ್ಪರ್ಧೆ ಇರುವುದು ಸುಳ್ಳಲ್ಲ. ಈ ಬಾರಿ ತಮಿಳುನಾಡಿನಲ್ಲಿ ಬಿಜೆಪಿ ಗಮನ ಸೆಳೆಯುವ ಪ್ರಚಾರವನ್ನೇ ಮಾಡಿತು. ಅಣ್ಣಾಮಲೈ, ಖುಷ್ಬು ಸೇರಿದಂತೆ ಹಲವು ಪರಿಚಿತ ಮುಖಗಳನ್ನು ಪಕ್ಷಕ್ಕೆ ಕರೆತಂದು ಪ್ರಚಾರ ಮಾಡಿತು.

ಇದೀಗ ಮತ ಎಣಿಕೆ ಆರಂಭವಾಗಿ ಐದು ಗಂಟೆಗಳ ನಂತರ ಮುಂದೆ ಬಂದಿರುವ ಫಲಿತಾಂಶದ ಪ್ರಕಾರ ಬಿಜೆಪಿಯು ನಾಲ್ಕು ಸ್ಥಾನದಲ್ಲಿ ಮುನ್ನಡೆ ಸಾಧಿಸಿದ್ದರೆ ಕಾಂಗ್ರೆಸ್ ಪಕ್ಷವು 13 ಸ್ಥಾನಗಳಲ್ಲಿ ಮುನ್ನಡೆಯಲ್ಲಿದೆ.
ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯು 20 ಸ್ಥಾನಗಳಲ್ಲಿ ಸ್ಪರ್ಧಿಸಿತ್ತು. ಅಣ್ಣಾಮಲೈ, ಖುಷ್ಬು ಸುಂದರ್, ಎಂಆರ್ ಗಾಂಧಿ ಇನ್ನೂ ಹಲವರು ಈ ಬಾರಿ ನಿರೀಕ್ಷೆ ಮೂಡಿಸಿದ್ದರು. ಆದರೆ ಈವರೆಗೆ ಬಂದಿರುವ ಫಲಿತಾಂಶದ ಪ್ರಕಾರ ಬಿಜೆಪಿಯು ನಾಲ್ಕು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. 2016 ರ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಒಂದೂ ಸ್ಥಾನವನ್ನು ಗೆದ್ದಿರಲಿಲ್ಲ.
ಇನ್ನು ಕಾಂಗ್ರೆಸ್ ಪಕ್ಷವು 25 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಿತ್ತು. ಈ ವರೆಗೆ ಬಂದಿರುವ ಫಲಿತಾಂಶದಂತೆ 13 ಸ್ಥಾನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದಾರೆ. 2016 ರ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಎಂಟು ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. ಆದರೆ ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ 40 ಸ್ಥಾನಗಳಲ್ಲಿ ಸ್ಪರ್ಧೆ ಮಾಡಿತ್ತು. ಈ ಬಾರಿ 25 ಸ್ಥಾನಗಳಿಗೆ ಸೀಮಿತವಾಗಿದೆ.
ಈ ಬಾರಿ ತಮಿಳುನಾಡಿನ ಐದು ಕ್ಷೇತ್ರಗಳಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ನೇರ ಎದುರಾಳಿಗಳಾಗಿವೆ. ದಕ್ಷಿಣ ಕೊಯಂಬತ್ತೂರು, ಕೋಲಚ್ಚೆಲ್ಲ, ವಿಲ್ವನಕೋಡು, ಉದಕಮಂಡಲಂ (ಊಟಿ), ಕರೈಕುಡಿ ಕ್ಷೇತ್ರಗಳಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ನೇರ ಸ್ಪರ್ಧೆ ಇದೆ. ಈ ಐದೂ ಕ್ಷೇತ್ರಗಳಲ್ಲಿ ಡಿಎಂಕೆ ಆಗಲಿ ಎಐಎಡಿಎಂಕೆ ಪಕ್ಷಗವಾಗಲಿ ಸ್ಪರ್ಧಿಸಿಲ್ಲ.
ಕೊಯಂಬತ್ತೂರು ದಕ್ಷಿಣದಲ್ಲಿ ಕಾಂಗ್ರೆಸ್ ಮುನ್ನಡೆಯಲ್ಲಿದೆ. ಉದಕಮಂಡಲಂನಲ್ಲಿ ಬಿಜೆಪಿ ಮುನ್ನಡೆಯಲ್ಲಿದೆ. ಕರೈಕುಡಿಯಲ್ಲಿ ಕಾಂಗ್ರೆಸ್ ಮುನ್ನಡೆಯಲ್ಲಿದೆ. ಇನ್ನೆರಡು ಕ್ಷೇತ್ರಗಳಲ್ಲಿ ಇತರೆ ಪಕ್ಷಗಳು ಮುನ್ನಡೆಯಲ್ಲಿವೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications