ಚುನಾವಣೆಗೂ ಮುನ್ನ ಅಮಿತ್ ಶಾ ಜೊತೆ ಇಪಿಎಸ್ ಮಹತ್ವದ ಚರ್ಚೆ
ಚೆನ್ನೈ, ಜನವರಿ 19: ತಮಿಳುನಾಡು ವಿಧಾನಸಭೆ ಚುನಾವಣೆ 2021ಗಾಗಿ ಆಡಳಿತಾರೂಢ ಎಐಎಡಿಎಂಕೆ ರಣತಂತ್ರ ಆರಂಭಿಸಿದೆ. ಚುನಾವಣಾ ಪೂರ್ವ ಸಮೀಕ್ಷೆಗಳು ಡಿಎಂಕೆ ಪರ ಫಲಿತಾಂಶ ನೀಡುತ್ತಿರುವುದು ಸಿಎಂ ಪಳನಿಸ್ವಾಮಿ ಅವರನ್ನು ಕಂಗಾಲಾಗಿಸಿದೆ. ಭಾರತೀಯ ಜನತಾ ಪಕ್ಷದ ಜೊತೆ ಚುನಾವಣಾ ಪೂರ್ವ ಮೈತ್ರಿ ಸಾಧಿಸಬೇಕೇ? ಬೇಡವೆ? ಎಂಬ ಜಿಜ್ಞಾಸೆಗೆ ಬಿದ್ದಿರುವ ಎಐಎಡಿಎಂಕೆ ವರಿಷ್ಠರು ಕೊನೆಗೂ ಬಿಜೆಪಿ ಜೊತೆ ಮಾತುಕತೆ ಆರಂಭಿಸಿರುವ ಸುದ್ದಿ ಬಂದಿದೆ.
ಬಿಜೆಪಿ ನೆರವಿಲ್ಲದೆ ಚುನಾವನೆ ಎದುರಿಸಿ, ಚುನಾವಣೆ ಫಲಿತಾಂಶ ನೋಡಿಕೊಂಡು ನಂತರ ಮೈತ್ರಿ ಮಾಡಿಕೊಳ್ಳುವ ಇರಾದೆ ಇಟ್ಟುಕೊಂಡಿದ್ದ ಇಪಿಎಸ್ ಬಣಕ್ಕೆ ಕೊಂಚ ಹಿನ್ನಡೆಯಾಗಿದೆ. ಹೀಗಾಗಿ, ಬಿಜೆಪಿ ಜೊತೆ ಹೈಕಮಾಂಡ್ ಜೊತೆ ಮಾತುಕತೆ ಆರಂಭಿಸಿದ್ದಾರೆ ಎಂಬ ಸುಳಿವು ಸಿಕ್ಕಿದೆ.
ಆದರೆ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಮೈತ್ರಿ ಬಗ್ಗೆ ಏನು ಮಾತನಾಡಿಲ್ಲ, ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಕೆಲ ವಿಷಯಗಳನ್ನು ಚರ್ಚಿಸಲಾಯಿತು ಎಂದು ಇಪಿಎಸ್ ಅವರ ಕಚೇರಿ ಸ್ಪಷ್ಟನೆ ನೀಡಿದೆ. ಪ್ರಧಾನಿ ಮೋದಿ ಅವರನ್ನು ಇಪಿಎಸ್ ಭೇಟಿಯಾಗಲಿದ್ದು, ದಿವಂಗತ ಜೆ ಜಯಲಲಿತಾ ಅವರ ಸ್ಮಾರಕ ನಿರ್ಮಾಣದ ಬಗ್ಗೆ ಚರ್ಚಿಸಲಿದ್ದಾರೆ ಎಂದು ಮೂಲಗಳು ಹೇಳಿವೆ.

ಆದರೆ, ಮುಖ್ಯವಾಗಿ ಟಿಟಿವಿ ದಿನಕರನ್ ನೇತೃತ್ವದ ಎಎಂಎಂಕೆ ಜೊತೆ ಎಐಎಡಿಎಂಕೆ ವಿಲೀನ ಸಾಧ್ಯತೆ, ಮತ ವಿಭಜನೆ ಬಗ್ಗೆ ಬಿಜೆಪಿ ವರಿಷ್ಠರ ಜೊತೆ ಚರ್ಚಿಸಲಿದ್ದಾರೆ. ವಿಕೆ ಶಶಿಕಲಾ ಜೈಲಿನಿಂದ ಹೊರ ಬಂದ ನಂತರ ರಾಜಕೀಯ ಚಿತ್ರಣ ಬದಲಾಗುವ ಸಾಧ್ಯತೆಯಿದ್ದು, ಆಂತರಿಕ ಕಿತ್ತಾಟದ ಲಾಭ ಡಿಎಂಕೆ ಆಗದಂತೆ ತಡೆಗಟ್ಟಲು ಯಾವ ರೀತಿ ನಡೆ ಇಡಬೇಕು ಎಂಬುದನ್ನು ಇಪಿಎಸ್ ಚರ್ಚಿಸಲಿದ್ದಾರೆ, ಇದು ಮುಂದಿನ ಚುನಾವಣೆ ದೃಷ್ಟಿಯಿಂದ ಮಹತ್ವದ್ದಾಗಿದೆ ಎಂದು ಪಕ್ಷದ ಮೂಲಗಳಿಂದ ತಿಳಿದು ಬಂದಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications