ಜಲ್ಲಿಕಟ್ಟು ಪ್ರತಿಭಟನೆ ಕೇಸ್ಗಳನ್ನು ಹಿಂಪಡೆಯಲಿದೆ ತಮಿಳುನಾಡು ಸರ್ಕಾರ
ಚೆನ್ನೈ, ಫೆಬ್ರುವರಿ 05: ರಾಜ್ಯದಲ್ಲಿ ಜಲ್ಲಿಕಟ್ಟು ಪ್ರತಿಭಟನೆ ವೇಳೆ ದಾಖಲಿಸಲಾಗಿದ್ದ ಪ್ರಕರಣಗಳನ್ನು ಶೀಘ್ರವೇ ಹಿಂಪಡೆಯುವುದಾಗಿ ತಮಿಳುನಾಡು ಸಿಎಂ ಎಡಪ್ಪಾಡಿ ಕೆ ಪಳನಿಸ್ವಾಮಿ ಶುಕ್ರವಾರ ಘೋಷಿಸಿದ್ದಾರೆ.
ವಿಧಾನಸಭೆಯಲ್ಲಿ ಈ ಕುರಿತು ಘೋಷಣೆ ಮಾಡಿದ ಅವರು, "ಜಲ್ಲಿಕಟ್ಟು ಪ್ರತಿಭಟನೆ ವೇಳೆ ದಾಖಲಿಸಲಾಗಿದ್ದ ಹಲವು ಪ್ರಕರಣಗಳನ್ನು ಹಿಂಪಡೆಯಲಾಗುತ್ತದೆ. ಆದರೆ ಪೊಲೀಸರ ವಿರುದ್ಧ ಗಲಭೆ ನಡೆಸಿ ಹಿಂಸಾಚಾರದಲ್ಲಿ ತೊಡಗಿಕೊಂಡ ಪ್ರಕರಣಗಳನ್ನು ಹೊರತುಪಡಿಸಿ ಇತರೆ ಕೇಸ್ಗಳನ್ನು ಹಿಂತೆಗೆದುಕೊಳ್ಳಲಾಗುತ್ತದೆ" ಎಂದು ಆಶ್ವಾಸನೆ ನೀಡಿದರು.
"ಜಲ್ಲಿಕಟ್ಟು ಪ್ರತಿಭಟನೆ ಸಂದರ್ಭ ಹಲವು ಅಹಿತಕರ ಘಟನೆಗಳು ನಡೆದವು. ಹಲವು ಜನರ ವಿರುದ್ಧ ಪ್ರಕರಣಗಳು ದಾಖಲಾದವು. ಹಿಂಸಾಚಾರ ನಡೆಸಿದವರ ವಿರುದ್ಧ ಪ್ರಕರಣಗಳನ್ನು ಹೊರತುಪಡಿಸಿ ಬೇರೆ ಪ್ರಕರಣಗಳನ್ನು ವಾಪಸ್ ತೆಗೆದುಕೊಳ್ಳಲಿದ್ದೇವೆ" ಎಂದು ತಿಳಿಸಿದರು.

ಶತಮಾನಗಳ ಇತಿಹಾಸವಿರುವ ಜಲ್ಲಿಕಟ್ಟು ಕ್ರೀಡೆಯನ್ನು ತಮಿಳುನಾಡಿನಲ್ಲಿ ಜನವರಿ ಎರಡನೇ ವಾರ, ಸಂಕ್ರಾಂತಿ ಸಂದರ್ಭ ನಡೆಸಲಾಗುತ್ತದೆ. ಪ್ರಾಣಿ ದಯಾ ಸಂಘ ಜಲ್ಲಿಕಟ್ಟು ಆಚರಣೆ ಸಂಬಂಧ ಅರ್ಜಿ ಸಲ್ಲಿಸಿದ ನಂತರ 2014ರಲ್ಲಿ ಸುಪ್ರೀಂ ಕೋರ್ಟ್ ಈ ಕ್ರೀಡೆ ಮೇಲೆ ನಿಷೇಧ ಹೇರಿತ್ತು. ಆದರೆ ಜಲ್ಲಿಕಟ್ಟು ನಮ್ಮ ಸಂಸ್ಕೃತಿಯ ಭಾಗ ಎಂದು ತಮಿಳುನಾಡು ಜನರು ಜಲ್ಲಿಕಟ್ಟು ಆಚರಣೆಗೆ ಒತ್ತಾಯಿಸಿ 2017ರಲ್ಲಿ ಪ್ರತಿಭಟನೆ ಕೈಗೊಂಡ ನಂತರ ಈ ನಿಷೇಧವನ್ನು ತೆರವುಗೊಳಿಸಲಾಯಿತು.
ತಮಿಳುನಾಡಿನಲ್ಲಿ ಕೆಲವೇ ತಿಂಗಳುಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಎಐಎಡಿಎಂಕೆ ಸರ್ಕಾರ ತಮಿಳುನಾಡಿನ ಜನರಿಗೆ ಹಲವು ಆಶ್ವಾಸನೆಗಳನ್ನು ನೀಡುತ್ತಿದೆ. ಶುಕ್ರವಾರ ನಡೆದ ವಿಧಾನಸಭೆ ಅಧಿವೇಶನದಲ್ಲಿಯೂ ರಾಜ್ಯದಲ್ಲಿ ಕೊರೊನಾ ಲಸಿಕೆಗಳನ್ನು ಉಚಿತವಾಗಿ ನೀಡಲಾಗುವುದು ಎಂಬುದನ್ನು ಪಳನಿಸ್ವಾಮಿ ಮತ್ತೆ ಪುನರುಚ್ಚರಿಸಿದ್ದಾರೆ. ತಮಿಳುನಾಡನ್ನು ಕೊರೊನಾ ಮುಕ್ತ ರಾಜ್ಯವನ್ನಾಗಿ ರೂಪಿಸಲಾಗುವುದು ಎಂದು ಭರವಸೆ ನೀಡಿದ್ದಾರೆ. ಜೊತೆಗೆ 12,100 ಕೋಟಿ ರೂ ಮೊತ್ತದ ಕೃಷಿ ಸಾಲ ಮನ್ನಾ ಮಾಡುವುದಾಗಿ ಘೋಷಿಸಿದ್ದಾರೆ. ಇದು ತಕ್ಷಣವೇ ಜಾರಿಗೆ ಬರುವುದಾಗಿಯೂ ತಿಳಿಸಿದ್ದಾರೆ.
-
ಮೂರು ವರ್ಷ ಮುಗಿದಿದೆ, ಸಚಿವ ಸಂಪುಟ ಬದಲಿಸಿ: ಹೈಕಮಾಂಡ್ಗೆ ಮನವಿ ಸಲ್ಲಿಸಲು ಟಿ.ಬಿ.ಜಯಚಂದ್ರ ಸಜ್ಜು -
ರಾಜ್ಯದ 5000ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಕಲುಷಿತ ನೀರು: ಗ್ಯಾರಂಟಿ ಗುಂಗಿನಲ್ಲಿರುವ ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಕಿಡಿ -
ಕೆಲವೇ ಗಂಟೆಗಳಲ್ಲಿ ಇರಾನ್ ಬಂದರುಗಳಿಗೆ ಅಮೆರಿಕದಿಂದ ಕಡಲ ದಿಗ್ಬಂಧನ? ಯುದ್ಧದ ಭೀತಿಯಲ್ಲಿ ಕೊಲ್ಲಿ ರಾಷ್ಟ್ರಗಳು -
Siddaramaiah: ಜನರ ದಾರಿತಪ್ಪಿಸುವ ಬಿಜೆಪಿಯನ್ನು ನಂಬಬೇಡಿ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾರಣವೇನು -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ












Click it and Unblock the Notifications