ಗುಟ್ಕಾ ಹಗರಣ: ಚೆನ್ನೈನಲ್ಲಿ ಗಣ್ಯಾತಿಗಣ್ಯರ ಮನೆ ಮೇಲೆ ಸಿಬಿಐ ದಾಳಿ
ಚೆನ್ನೈ, ಸೆಪ್ಟೆಂಬರ್ 05: ಗುಟ್ಕಾ ಹಗರಣಕ್ಕೆ ಸಂಬಂಧಿಸಿದಂತೆ ಚೆನ್ನೈನ ವಿವಿಧೆಡೆಗಳಲ್ಲಿ ಸಿಬಿಐ ತಂಡವು ಇಂದು ದಾಳಿ ನಡೆಸಿದೆ. ತಮಿಳುನಾಡಿನ ಆರೋಗ್ಯ ಸಚಿವ ಸಿ. ವಿಜಯ ಭಾಸ್ಕರ್, ಡಿಜಿಪಿ ಟಿ.ಕೆ. ರಾಜೇಂದ್ರ ಹಾಗೂ ಇನ್ನಿತರ ಉನ್ನತ ಅಧಿಕಾರಿಗಳ ನಿವಾಸದ ಮೇಲೆ ದಾಳಿ ನಡೆಸಲಾಗಿದೆ.
ಬೆಳಗ್ಗೆ 7 ಗಂಟೆಗೆ ಆರಂಭವಾದ ದಾಳಿ ಏಕಕಾಲಕ್ಕೆ 40 ಕಡೆಗಳಲ್ಲಿ ಮುಂದುವರೆದಿದೆ.
ತಮಿಳುನಾಡಿನಲ್ಲಿ ಗುಟ್ಕಾ ಮಾರಾಟ ನಿಷೇಧಿಸಲಾಗಿದೆ. ಆದರೆ, ಅಕ್ರಮವಾಗಿ ತಂಬಾಕು ಮಾರಾಟಕ್ಕೆ ಉತ್ತೇಜನ ನೀಡಿರುವ ಆರೋಪಗಳು ಕೇಳಿ ಬಂದಿತ್ತು. ಈ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಸಿಬಿಐಗೆ ಏಪ್ರಿಲ್ ತಿಂಗಳಿನಲ್ಲಿ ಮದ್ರಾಸ್ ಹೈಕೋರ್ಟ್ ಸೂಚಿಸಿತ್ತು.

2016ರಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ಮಾಧವ್ ರಾವ್ ಅವರ ಕಚೇರಿಯಲ್ಲಿ ಡೈರಿ ಸಿಕ್ಕಿತ್ತು. ಸುಮಾರು 250 ಕೋಟಿ ರು ಗೂ ಅಧಿಕ ತೆರಿಗೆ ವಂಚನೆ ಜಾಲ ಕಂಡು ಬಂದಿತು. ಅಕ್ರಮ ಮಾರಾಟಕ್ಕಾಗಿ 40 ಕೋಟಿ ರುಗೂ ಅಧಿಕ ಮೊತ್ತದ ಲಂಚ ಅದಲು ಬದಲಾಗಿದೆ.
ಎಡಿಎಂ ಬ್ರ್ಯಾಂಡ್ ಗುಟ್ಕಾ ತಯಾರಿಸುವ ತಂಬಾಕು ಉದ್ಯಮಿ ಮಾಧವ್ ರಾವ್ ಅವರಿಗೆ ಸೇರಿದ ಆಸ್ತಿ ಮೇಲೆ ದಾಳಿ ನಡೆಸಿದ ನಂತರ ಅಲ್ಲಿ ಸಿಕ್ಕ ಡೈರಿಯಲ್ಲಿ ಲಂಚ ಪಡೆದಿದ್ದ ರಾಜಕೀಯ ನಾಯಕರು ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳ ಹೆಸರಿತ್ತು. ಕಾಳಸಂತೆಯಲ್ಲಿ ಮಾರಾಟ ಮಾಡಲು ವ್ಯವಸ್ಥಿತ ಜಾಲವನ್ನು ರೂಪಿಸಲಾಗಿತ್ತು.
ಮಾಜಿ ಪೊಲೀಸ್ ಆಯುಕ್ತ ಎಸ್. ಜಾರ್ಜ್, ಆಹಾರ ಸಂರಕ್ಷಣೆ ಇಲಾಖೆ ಮತ್ತು ಮಾರಾಟ ತೆರಿಗೆ ಅಧಿಕಾರಿಗಳ ನಿವಾಸ ಸೇರಿದಂತೆ 40 ಕಡೆಗಳಲ್ಲಿ ದಾಳಿ ಮಾಡಿ, ಅಪಾರ ಪ್ರಮಾಣದ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications