ತಮಿಳುನಾಡಿನಲ್ಲಿ ರಾಷ್ಟ್ರಪತಿ ಆಳ್ವಿಕೆ ತನ್ನಿ: ಸುಬ್ರಮಣಿಯನ್ ಸ್ವಾಮಿ ಪತ್ರ
ಚೆನ್ನೈ, ಅಕ್ಟೋಬರ್ 7: ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ಅನಾರೋಗ್ಯದ ಕಾರಣಕ್ಕೆ ತಮಿಳುನಾಡಿನ ಆಡಳಿತದಲ್ಲಿ ಅವ್ಯವಸ್ಥೆ ಕಾಣಿಸಿಕೊಳ್ಳಬಹುದು. ಅದ್ದರಿಂದ ರಾಷ್ಟ್ರಪತಿ ಆಳ್ವಿಕೆಯನ್ನು ತರಬೇಕು ಎಂದು ಕೇಂದ್ರ ಗೃಹ ಸಚಿವ ರಾಜ್ ನಾಥ್ ಸಿಂಗ್ ಅವರಿಗೆ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಪತ್ರ ಬರೆದಿದ್ದಾರೆ.
ಜಯಲಲಿತಾ ಅವರು ಇನ್ನೂ ಎಷ್ಟು ದಿನ ಆಸ್ಪತ್ರೆಯಲ್ಲಿ ಇರಬೇಕಾಗುತ್ತದೋ ಮತ್ತು ಅವರ ಆರೋಗ್ಯ ಸ್ಥಿತಿಯ ಬಗ್ಗೆಯೂ ಯಾವುದೇ ಮಾಹಿತಿ ಇಲ್ಲ. ಇದರಿಂದ ಆಡಳಿತದಲ್ಲಿ ಅವ್ಯವಸ್ಥೆ ಆಗಬಾರದು. ಆ ಕಾರಣಕ್ಕೆ ತಮಿಳುನಾಡಿನಲ್ಲಿ ರಾಷ್ಟ್ರಪತಿ ಆಳ್ವಿಕೆ ತರಬೇಕು ಎಂದು ಸುಬ್ರಮಣಿಯನ್ ಸ್ವಾಮಿ ಪತ್ರದಲ್ಲಿ ತಿಳಿಸಿದ್ದಾರೆ.[ಜಯಲಲಿತಾ ಅನಾರೋಗ್ಯ: ಹೈಕೋರ್ಟ್ ಗೆ ಹಾಕಿದ್ದ ಪಿಐಎಲ್ ವಜಾ]

ನಿವೃತ್ತ ಮುಖ್ಯಕಾರ್ಯದರ್ಶಿಗೆ ರಾಜ್ಯಭಾರ ನಡೆಸುವುದಕ್ಕೆ ಬಿಡಲಾಗಿದೆ. ಈ ಸಂದರ್ಭದಲ್ಲಿ ರಾಮನಾಥಪುರಂ, ತಿರುನಲ್ವೇಲಿ, ಮದುರೈ ಹಾಗೂ ಕನ್ಯಾಕುಮಾರಿಯಲ್ಲಿ ಐಎಸ್ ಐಎಸ್ ನ ಸ್ಲೀಪರ್ ಸೆಲ್ ಗಳು ಚುರುಕಾಗಿವೆ.
ದ್ರಾವಿಡಿಯನ್ ಕಳಗಂ ಸಹಾಯ ಹಾಗೂ ಸಹಕಾರದಲ್ಲಿ, ಇನ್ನೂ ಉಳಿದಿರುವ ಎಲ್ ಟಿಟಿಇ ಸದಸ್ಯರು, ಭೂಗತರಾಗಿರುವ ನಕ್ಸಲೈಟ್ಸ್ ರಾಜ್ಯದಲ್ಲಿ ದೊಡ್ಡ ಮಟ್ಟದ ಅವ್ಯವಸ್ಥೆ ಹಾಗೂ ಕಾನೂನಿಗೆ ಧಕ್ಕೆ ಉಂಟು ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಸ್ವಾಮಿ ಪತ್ರದಲ್ಲಿ ಬರೆದಿದ್ದಾರೆ.['ಅಮ್ಮ' ಹೆಸರಿನಲ್ಲಿ ರಾಜ್ಯಭಾರ ಮಾಡುತ್ತಿರುವವರು ಯಾರು?]

ವಿಧಾನಸಭೆಯನ್ನು ಅಮಾನತಿನಲ್ಲಿರಿಸಿ, ಸಂವಿಧಾನದ 356ನೇ ಪರಿಚ್ಛೇದವನ್ನು ಜಾರಿಗೊಳಿಸಬೇಕು. ಜಯಲಲಿತಾ ಅವರು ಮತ್ತೆ ಆಡಳಿತ ನಡೆಸುವವರೆಗೂ ಆರು ತಿಂಗಳ ಕಾಲ ದಕ್ಷಿಣ ಭಾಗದ ಜಿಲ್ಲೆಗಳಲ್ಲಿ ಹಾಗೂ ಚೆನ್ನೈನಲ್ಲಿ ಶಸ್ತ್ರಸಜ್ಜಿತ ಪಡೆ ಕಾಯ್ದೆಯನ್ನು ಜಾರಿಗೆ ತರಬೇಕು ಎಂದು ಹೇಳಿದ್ದಾರೆ.
ಜಯಲಲಿತಾ ಅವರು ಇನ್ನು ಕೆಲ ದಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪದೆಯಬೇಕಾಗುತ್ತದೆ ಎಂದು ಅಪೋಲೋ ಆಸ್ಪತ್ರೆಯವರು ಹೇಳಿರುವುದರಿಂದ ರಾಷ್ಟ್ರಪತಿ ಆಳ್ವಿಕೆ ತರುವುದು ಸಾಂವಿಧಾನಿಕ ಅಗತ್ಯವಷ್ಟೇ ಅಲ್ಲ, ತುರ್ತು ಅಗತ್ಯ ಕೂಡ ಎಂದು ಕೇಂದ್ರ ಗೃಹ ಸಚಿವರಿಗೆ ಬರೆದ ಪತ್ರದಲ್ಲಿ ಅವರು ತಿಳಿಸಿದ್ದಾರೆ.
-
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ












Click it and Unblock the Notifications