ತಮಿಳುನಾಡಿನಲ್ಲಿ ರಾಷ್ಟ್ರಪತಿ ಆಳ್ವಿಕೆ ತನ್ನಿ: ಸುಬ್ರಮಣಿಯನ್ ಸ್ವಾಮಿ ಪತ್ರ
ಚೆನ್ನೈ, ಅಕ್ಟೋಬರ್ 7: ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ಅನಾರೋಗ್ಯದ ಕಾರಣಕ್ಕೆ ತಮಿಳುನಾಡಿನ ಆಡಳಿತದಲ್ಲಿ ಅವ್ಯವಸ್ಥೆ ಕಾಣಿಸಿಕೊಳ್ಳಬಹುದು. ಅದ್ದರಿಂದ ರಾಷ್ಟ್ರಪತಿ ಆಳ್ವಿಕೆಯನ್ನು ತರಬೇಕು ಎಂದು ಕೇಂದ್ರ ಗೃಹ ಸಚಿವ ರಾಜ್ ನಾಥ್ ಸಿಂಗ್ ಅವರಿಗೆ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಪತ್ರ ಬರೆದಿದ್ದಾರೆ.
ಜಯಲಲಿತಾ ಅವರು ಇನ್ನೂ ಎಷ್ಟು ದಿನ ಆಸ್ಪತ್ರೆಯಲ್ಲಿ ಇರಬೇಕಾಗುತ್ತದೋ ಮತ್ತು ಅವರ ಆರೋಗ್ಯ ಸ್ಥಿತಿಯ ಬಗ್ಗೆಯೂ ಯಾವುದೇ ಮಾಹಿತಿ ಇಲ್ಲ. ಇದರಿಂದ ಆಡಳಿತದಲ್ಲಿ ಅವ್ಯವಸ್ಥೆ ಆಗಬಾರದು. ಆ ಕಾರಣಕ್ಕೆ ತಮಿಳುನಾಡಿನಲ್ಲಿ ರಾಷ್ಟ್ರಪತಿ ಆಳ್ವಿಕೆ ತರಬೇಕು ಎಂದು ಸುಬ್ರಮಣಿಯನ್ ಸ್ವಾಮಿ ಪತ್ರದಲ್ಲಿ ತಿಳಿಸಿದ್ದಾರೆ.[ಜಯಲಲಿತಾ ಅನಾರೋಗ್ಯ: ಹೈಕೋರ್ಟ್ ಗೆ ಹಾಕಿದ್ದ ಪಿಐಎಲ್ ವಜಾ]

ನಿವೃತ್ತ ಮುಖ್ಯಕಾರ್ಯದರ್ಶಿಗೆ ರಾಜ್ಯಭಾರ ನಡೆಸುವುದಕ್ಕೆ ಬಿಡಲಾಗಿದೆ. ಈ ಸಂದರ್ಭದಲ್ಲಿ ರಾಮನಾಥಪುರಂ, ತಿರುನಲ್ವೇಲಿ, ಮದುರೈ ಹಾಗೂ ಕನ್ಯಾಕುಮಾರಿಯಲ್ಲಿ ಐಎಸ್ ಐಎಸ್ ನ ಸ್ಲೀಪರ್ ಸೆಲ್ ಗಳು ಚುರುಕಾಗಿವೆ.
ದ್ರಾವಿಡಿಯನ್ ಕಳಗಂ ಸಹಾಯ ಹಾಗೂ ಸಹಕಾರದಲ್ಲಿ, ಇನ್ನೂ ಉಳಿದಿರುವ ಎಲ್ ಟಿಟಿಇ ಸದಸ್ಯರು, ಭೂಗತರಾಗಿರುವ ನಕ್ಸಲೈಟ್ಸ್ ರಾಜ್ಯದಲ್ಲಿ ದೊಡ್ಡ ಮಟ್ಟದ ಅವ್ಯವಸ್ಥೆ ಹಾಗೂ ಕಾನೂನಿಗೆ ಧಕ್ಕೆ ಉಂಟು ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಸ್ವಾಮಿ ಪತ್ರದಲ್ಲಿ ಬರೆದಿದ್ದಾರೆ.['ಅಮ್ಮ' ಹೆಸರಿನಲ್ಲಿ ರಾಜ್ಯಭಾರ ಮಾಡುತ್ತಿರುವವರು ಯಾರು?]

ವಿಧಾನಸಭೆಯನ್ನು ಅಮಾನತಿನಲ್ಲಿರಿಸಿ, ಸಂವಿಧಾನದ 356ನೇ ಪರಿಚ್ಛೇದವನ್ನು ಜಾರಿಗೊಳಿಸಬೇಕು. ಜಯಲಲಿತಾ ಅವರು ಮತ್ತೆ ಆಡಳಿತ ನಡೆಸುವವರೆಗೂ ಆರು ತಿಂಗಳ ಕಾಲ ದಕ್ಷಿಣ ಭಾಗದ ಜಿಲ್ಲೆಗಳಲ್ಲಿ ಹಾಗೂ ಚೆನ್ನೈನಲ್ಲಿ ಶಸ್ತ್ರಸಜ್ಜಿತ ಪಡೆ ಕಾಯ್ದೆಯನ್ನು ಜಾರಿಗೆ ತರಬೇಕು ಎಂದು ಹೇಳಿದ್ದಾರೆ.
ಜಯಲಲಿತಾ ಅವರು ಇನ್ನು ಕೆಲ ದಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪದೆಯಬೇಕಾಗುತ್ತದೆ ಎಂದು ಅಪೋಲೋ ಆಸ್ಪತ್ರೆಯವರು ಹೇಳಿರುವುದರಿಂದ ರಾಷ್ಟ್ರಪತಿ ಆಳ್ವಿಕೆ ತರುವುದು ಸಾಂವಿಧಾನಿಕ ಅಗತ್ಯವಷ್ಟೇ ಅಲ್ಲ, ತುರ್ತು ಅಗತ್ಯ ಕೂಡ ಎಂದು ಕೇಂದ್ರ ಗೃಹ ಸಚಿವರಿಗೆ ಬರೆದ ಪತ್ರದಲ್ಲಿ ಅವರು ತಿಳಿಸಿದ್ದಾರೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications