ರಜನಿ ಬೆಂಬಲಕ್ಕೆ ಕಮಲ್! ತಮಿಳುನಾಡು ರಾಜಕೀಯದಲ್ಲಿ ಬದಲಾವಣೆಯ ಗಾಳಿ
Recommended Video
ಚೆನ್ನೈ, ನವೆಂಬರ್ 15: "ತಮಿಳುನಾಡು ರಾಜಕೀಯದಲ್ಲಿ ನಿರ್ವಾತ ಸೃಷ್ಟಿಯಾಗಿದೆ" ಎಂಬ ಸೂಪರ್ ಸ್ಟಾರ್ ರಜನೀಕಾಂತ್ ಅವರ ಹೇಳಿಕೆಗೆ ಬೆಂಬಲ ನೀಡಿದ ಬಹುಭಾಷಾ ನಟ ಕಮಲ್ ಹಾಸನ್, "ತಮಿಳುನಾಡು ಸಮರ್ಥ ನಾಯಕರ ಕೊರತೆ ಎದುರಿಸುತ್ತಿದೆ" ಎಂದಿದ್ದಾರೆ.
ಈ ಇಬ್ಬರು ಮಹಾನ್ ನಟರು ಇದ್ದಕ್ಕಿದ್ದಂತೆಯೇ ಒಂದೇ ರೀತಿಯ ಹೇಳಿಕೆ ನೀಡುತ್ತಿರುವುದಕ್ಕೆ, ತಮಿಳುನಾಡಿನ ರಾಜಕೀಯದ ಕುರಿತು ಕಳವಳ ವ್ಯಕ್ತಪಡಿಸುತ್ತಿರುವುದಕ್ಕೆ ಕಾರಣವಿದೆ.
ಮಾಜಿ ಮುಖ್ಯಮಂತ್ರಿಗಳಾಗಿದ್ದ ಜಯಲಲಿತಾ ಮತ್ತು ಕರುಣಾನಿಧಿ ಅವರ ನಿಧನದ ನಂತರ ತಮಿಳುನಾಡಿನ ರಾಜಕೀಯದಲ್ಲಿ ದೊಡ್ಡದೊಂದು ನಿರ್ವಾತ ಸೃಷ್ಟಿಯಾಗಿದ್ದು ನೂರಕ್ಕೆ ನೂರು ಪ್ರತಿಶತ ಸತ್ಯ.
ಆದರೆ ಆ ನಿರ್ವಾತವನ್ನು ತುಂಬುವವರ್ಯಾರು ಎಂದರೆ ರಾಜ್ಯದ ಎರಡು ಪ್ರಮುಖ ರಾಜಕೀಯ ಪಕ್ಷಗಳಾದ ಎಐಎಡಿಎಂಕೆಯಲ್ಲಾಗಲೀ, ಡಿಎಂಕೆಯಲ್ಲಾಗಲೀ ಒಂದೇ ಒಂದು ಸಮರ್ಥ ಮುಖವೂ ಗೋಚರವಾಗುವುದಿಲ್ಲ!

ನಮ್ಮಲ್ಲಿ ಮಹಾನ್ ನಾಯಕರಿದ್ದರು, ಆದರೆ ಈಗಿಲ್ಲ!
"ನಮ್ಮ ರಾಜ್ಯಕ್ಕೆ ಉತ್ತಮ ನಾಯಕತ್ವ ನೀಡುವ ಒಬ್ಬನೇ ಒಬ್ಬ ಮುಖಂಡನೂ ಇಲ್ಲ. ನಮ್ಮಲ್ಲಿ ಅತ್ಯುತ್ತಮ ನಾಯಕರಿದ್ದರು ಎಂಬುದನ್ನು ಯಾರೂ ಅಲ್ಲಗಳೆಯುವುದಿಲ್ಲ. ಆದರೆ ಈಗಿನ ಬಗ್ಗೆ ಯೋಚಿಸುವುದಕ್ಕೆ ಹೋದರೆ ಅಂಥ ಒಬ್ಬ ನಾಯಕರೂ ನಮ್ಮ ಜೊತೆಯಿಲ್ಲ" ಎಂದು ಕಮಲ್ ಹಾಸನ್ ಹೇಳಿದ್ದಾರೆ.

ನಾಯಕರೂ ಬೇಕಾಗಿದ್ದಾರೆ!
"ತಮಿಳುನಾಡು ಸದ್ಯಕ್ಕೆ ಉತ್ತಮ ನಾಯಕರ ಕೊರತೆಯಿಂದ ಬಳಲುತ್ತಿದೆ. ರಾಜಕೀಯ ನಿರ್ವಾತ ಎದ್ದು ಕಾಣುತ್ತಿದೆ" ಎಂದು ರಜನೀಕಾಂತ್ ಕಳೆದ ವಾರ ಹೇಳಿಕೆ ನೀಡಿದ್ದರು. ಅವರ ಈ ಹೇಳಿಕೆಯಿಂದ ಎಐಎಡಿಎಂಕೆ ಮತ್ತು ಡಿಎಂಕೆ ಎರಡೂ ಪಕ್ಷಗಳೂ ಇರಿಸುಮುರಿಸು ಅನುಭವಿಸಿದ್ದವು. ತಲೈವ ಹೇಳಿಕೆಗೆ ತಮ್ಮ ವಿರೋಧವನ್ನೂ ವ್ಯಕ್ತಪಡಿಸಿದ್ದವು.

ವಿರೋಧ ವ್ಯಕ್ತಪಡಿಸದ ನಾಯಕರು
ಉಭಯ ನಟರ ಹೇಳಿಕೆಗೆ ಭಾರೀ ವಿರೋಧ ವ್ಯಕ್ತಪಡಿಸಿದ ರಾಜಕೀಯ ನಾಯಕರು, "ಕಮಲ್ ಹಾಸನ್ ಅವರಿಗೆ ತಮ್ಮ ರಾಜಕೀಯ ಭವಿಷ್ಯ ಕೊನೆಯಾಗುತ್ತಿದೆ ಎಂಬ ಆತಂಕ ಎದುರಾಗಿದೆ. ಆದ್ದರಿಂದಲೇ ಇಂಥ ಹೇಳಿಕೆ ನೀಡಿದ್ದಾರೆ" ಎಂದಿದ್ದರು. ಜೊತೆಗೆ ರಜನೀಕಾಂತ್ ಅವರು ಬಿಜೆಪಿಗೆ ಸೇರುತ್ತಾರೆ ಎಂಬ ವದಂತಿಯೂ ಇದ್ದು, ತಮ್ಮ ರಾಜಕೀಯ ಭವಿಷ್ಯಕ್ಕಾಗಿ ಅವರು ಇಂಥ ಹೇಳಿಕೆ ನೀಡಿದ್ದಾರೆ ಎಂದೂ ಹೇಳಲಾಗಿತ್ತು.

ವದಂತಿ ತಳ್ಳಿ ಹಾಕಿದ ಸೂಪರ್ ಸ್ಟಾರ್
"ನಾನು ಬಿಜೆಪಿ ಸೇರುತ್ತೇನೆ ಎಂಬ ವದಂತಿಗೆ ಅರ್ಥವಿಲ್ಲ. ಬಿಜೆಪಿ ನನ್ನನ್ನು ಸೆಳೆಯಲು ಪ್ರಯತ್ನಿಸುತ್ತಿದೆ ಎಂಬ ವದಂತಿ ಎಷ್ಟು ಸುಳ್ಳೋ, ಎಷ್ಟು ಸತ್ಯವೋ ಗೊತ್ತಿಲ್ಲ. ಆದರೆ ನಾನು ಯಾರ ಬಲೆಗೂ ಬೀಳುವುದಕ್ಕೆ ಇಷ್ಟಪಡುವುದಿಲ್ಲ" ಎಂದು ರಜನೀಕಾಂತ್ ಸಮಜಾಯಿಷಿ ನೀಡಿದ್ದರು.

ಜಯಲಲಿತಾ, ಕರುಣಾನಿಧಿ ಸಾವು
ಅನಾರೋಗ್ಯದ ಕಾರಣ 2016 ರ ಸೆಪ್ಟೆಂಬರ್ ನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಎಐಎಡಿಎಂಕೆ ನಾಯಕಿ, ಮಾಜಿ ಮುಖ್ಯಮಂತ್ರಿ ಜಯಲಲಿತಾ ಡಿಸೆಂಬರ್ 5, 2016 ರಂದು ಇಹಲೋಕ ತ್ಯಜಿಸಿದ್ದರು. ಡಿಎಂಕೆ ನಾಯಕ ಕರುಣಾನಿಧಿ ಅವರು 2018 ರ ಆಗಸ್ಟ್ 7ರಂದು ವಯೋಸಹಜ ಅನಾರೋಗ್ಯದ ಕಾರಣ ನಿಧನರಾಗಿದ್ದರು. ಅವರಿಬ್ಬರ ಮರಣಾನಂತರ ತಮಿಳುನಾಡು ರಾಜಕೀಯದಲ್ಲಿ ನಿರ್ವಾತ ಸೃಷ್ಟಿಯಾಗಿತ್ತು. ಅಭಿಮಾನಿಗಳ ಹೃದಯದ್ದಲ್ಲಿ 'ಅಮ್ಮಾ' ಆಗಿ ನೆಲೆನಿತಿದ್ದ ಜಯಲಲಿತಾ, 'ಕಲೈನಾರ್' ಆಗಿ ನೆಲೆ ನಿಂತಿದ್ದ ಕರುಣಾನಿಧಿ ಅವರ ಸ್ಥಾನವನ್ನು ಮತ್ತೊಬ್ಬರು ತುಂಬುವುದಕ್ಕೆ ಸಾಧ್ಯವೇ ಇಲ್ಲ ಎಂಬಂಥ ಪರಿಸ್ಥಿತಿ ನಿರ್ಮಾಣವಾಗಿದೆ.

ಬದಲಾವಣೆಯ ಗಾಳಿ?
ನಟ ಕಮಲ್ ಹಾಸನ್ ಅವರು ಮಕ್ಕಳ್ ನೀತಿ ಮಯ್ಯಂ ಹೆಸರಿನಲ್ಲಿ ಈಗಾಗಲೇ ತಮ್ಮದೆ ಆದ ಒಂದು ರಾಜಕೀಯ ಪಕ್ಷ ಕಟ್ಟಿದ್ದಾರೆ. ರಜನೀಕಾಂತ್ ಅವರೂ ರಾಜಕೀಯ ಪ್ರವೇಶಿಸಬಹುದು ಎಂಬ ವದಂತಿ ಹಬ್ಬಿದೆ. ತಮ್ಮ ರಾಜ್ಯದಲ್ಲಿ ಉಂಟಾಗಿರುವ ರಾಜಕೀಯ ನಿರ್ವಾತವನ್ನು ತುಭಲು, ರಾಜಕೀಯದಲ್ಲಿ ಬದಲಾವನೆಯ ಗಾಳಿ ಬೀಸುವಂತೆ ಮಾಡಲು ಈ ಇಬ್ಬರು ಸ್ಟಾರ್ ನಟರು ಮುಂದಾಗುತ್ತಾರಾ?
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications