ವಣ್ಣಿಯಾರ್ ಸಮುದಾಯಕ್ಕೆ ಶೇ 10.5ರಷ್ಟು ಮೀಸಲಾತಿ: ಮಸೂದೆ ಅಂಗೀಕಾರ
ಚೆನ್ನೈ, ಫೆಬ್ರವರಿ 26: ವಣ್ಣಿಯಾರ್ ಸಮುದಾಯಕ್ಕೆ ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣದಲ್ಲಿ ಶೇ 10.5ರಷ್ಟು ಮೀಸಲಾತಿ ನೀಡುವ ಮಹತ್ವದ ಮಸೂದೆಯನ್ನು ತಮಿಳುನಾಡು ವಿಧಾನಸಭೆಯಲ್ಲಿ ಶುಕ್ರವಾರ ಅಂಗೀಕರಿಸಲಾಯಿತು. ಕೇಂದ್ರ ಚುನಾವಣಾ ಆಯೋಗವು ವಿಧಾನಸಭೆ ಚುನಾವಣೆ ಘೋಷಣೆ ಮಾಡುವ ಕೆಲವೇ ನಿಮಿಷಗಳ ಮುನ್ನ ಈ ಮಸೂದೆ ಅಂಗೀಕಾರವಾಗಿದೆ.
ಅತಿ ಹಿಂದುಳಿದ ವರ್ಗಗಳು ಹಾಗೂ ಡಿನೋಟಿಫೈಡ್ ಸಮುದಾಯಗಳ ಶೇ 20ರಷ್ಟು ಮೀಸಲಾತಿಯ ಒಳಗೆ ಈ ಮೀಸಲಾತಿ ನೀಡಲಾಗಿದೆ. ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ ಅವರು ಈ ಮಸೂದೆ ಮಂಡಿಸಿದರು. ಅದನ್ನು ಸದನದಲ್ಲಿ ಅವಿರೋಧವಾಗಿ ಅಂಗೀಕರಿಸಲಾಯಿತು.
ಆದರೆ ಡಿಎಂಕೆ ಹಾಗೂ ಅದರ ಮಿತ್ರಪಕ್ಷಗಳು ಅಧಿವೇಶನವನ್ನು ಬಹಿಷ್ಕರಿಸಿದ್ದರಿಂದ ಸದನದಲ್ಲಿ ವಿರೋಧಪಕ್ಷಗಳ ಸದಸ್ಯರು ಹಾಜರಿರಲಿಲ್ಲ. ಈ ಮಸೂದೆಯು ಡಿನೋಟಿಫೈಡ್ ಸಮುದಾಯಗಳಿಗೆ ಶೇ 7ರಷ್ಟು ಮತ್ತು ಅತಿ ಹಿಂದುಳಿದ ವರ್ಗಗಳಿಗೆ ಶೇ 2.5ರಷ್ಟು ಆಂತರಿಕ ಮೀಸಲಾತಿಯನ್ನು ಒದಗಿಸಲಿದೆ.

ಈ ಮಸೂದೆಯು ವಣ್ಣಿಯಾರ್ ಸಮುದಾಯಕ್ಕೆ ಖಾಸಗಿ ಶಿಕ್ಷಣ ಸಂಸ್ಥೆಗಳು ಸೇರಿದಂತೆ ರಾಜ್ಯದಲ್ಲಿನ ಎಲ್ಲ ಶಿಕ್ಷಣ ಸಂಸ್ಥೆಗಳಲ್ಲಿ ಹಾಗೂ ರಾಜ್ಯ ಸರ್ಕಾರಿ ಸೇವೆಗಳ ಹುದ್ದೆಗಳ ನೇಮಕಾತಿಯಲ್ಲಿ ವಿಶೇಷ ಮೀಸಲಾತಿ ನೀಡಲಿದೆ.
ಚುನಾವಣೆ ದಿನಾಂಕ ಘೋಷಣೆಗೂ ಮುನ್ನ ತರಾತುರಿಯಲ್ಲಿ ಈ ಮಸೂದೆಯನ್ನು ಅಂಗೀಕರಿಸಿಲಾಗಿದೆ. ಜತೆಗೆ ರೈತರು ಮತ್ತು ಬಡವರಿಗೆ ಸಹಕಾರಿ ಬ್ಯಾಂಕ್ಗಳಿಂದ ನೀಡಿದ ಚಿನ್ನದ ಮೇಲಿನ ಸಾಲವನ್ನು ಮನ್ನಾ ಮಾಡುವುದಾಗಿಯೂ ಪಳನಿಸ್ವಾಮಿ ಶುಕ್ರವಾರ ಘೋಷಿಸಿದ್ದರು.
ಚುನಾವಣೆ ದಿನಾಂಕ ಘೋಷಣೆಯಾದ ಬಳಿಕ ಮಾದರಿ ನೀತಿ ಸಂಹಿತೆ ಅನ್ವಯವಾಗುವುದರಿಂದ ಹೊಸ ಘೋಷಣೆಗಳನ್ನು ಮಾಡುವಂತಿಲ್ಲ. ಈ ಗಡಿಬಿಡಿಯ ನಿರ್ಧಾರಗಳನ್ನು ಟೀಕಿಸಿ ಸಾಮಾಜಿಕ ಜಾಲತಾಣದಲ್ಲಿ ಪಳನಿಸ್ವಾಮಿ ಅವರನ್ನು 'ಒಂದು ಗಂಟೆ ಸಿಎಂ' ಎಂದು ವ್ಯಂಗ್ಯ ಮಾಡಲಾಗುತ್ತಿದೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications