ತಮಿಳುನಾಡು ಚುನಾವಣೆ: ಮತದಾನ,ಎಣಿಕೆ ನಡುವೆ ದೀರ್ಘ ಅಂತರದ ಬಗ್ಗೆ ಕಳವಳ
ಚೆನ್ನೈ,ಮಾರ್ಚ್ 2: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಮತದಾನ ಹಾಗೂ ಎಣಿಕೆ ಕಾರ್ಯದ ನಡುವೆ ಇರುವ ದೀರ್ಘ ಅಂತರದ ಕುರಿತು ರಾಜಕೀಯ ಪಕ್ಷಗಳು ಕಳವಳ ವ್ಯಕ್ತಪಡಿಸಿವೆ.
ಏಪ್ರಿಲ್ 6 ರಂದು ನಡೆಯಲಿದ್ದು, ಮೇ 2ಕ್ಕೆ ಮತ ಎಣಿಕೆ ಕಾರ್ಯ ನಡೆಯಲಿದೆ.ತಮಿಳುನಾಡು ವಿಧಾನಸಭಾ ಚುನಾವಣೆಯ ಮತದಾನ ಮತ್ತು ಎಣಿಕೆ ನಡುವೆ ಧೀರ್ಘ ಅಂತರ ಇರುವ ಬಗ್ಗೆ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಕಳವಳ ವ್ಯಕ್ತಪಡಿಸಿದ್ದು, ಈ ಅಂತರವನ್ನು ಕಡಿಮೆ ಮಾಡುವಂತೆ ಮುಖ್ಯ ಚುನಾವಣಾಧಿಕಾರಿ ಸತ್ಯಬ್ರಹತ ಸಾಹೂ ಅವರನ್ನು ಒತ್ತಾಯಿಸಿದ್ದಾರೆ.
ಪೋಸ್ಟಲ್ ಬ್ಯಾಲೆಟ್ ಸೌಕರ್ಯಗಳ ಬಗ್ಗೆ ಚುನಾವಣಾ ಆಯೋಗ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಎಐಎಡಿಎಂಕೆಯ ಪೊಲಾಚಿ ವಿ ಜಯರಾಮನ್ ಹೇಳಿದರು. ಮತದಾನ ಮತ್ತು ಎಣಿಕೆ ದಿನಗಳ ನಡುವಿನ ನಡುವೆ ಧೀರ್ಘ ಅಂತರವನ್ನು ಗಣನೀಯವಾಗಿ ಕಡಿಮೆ ಮಾಡಬೇಕು ಎಂದು ಅಖಿಲ ಭಾರತ ತೃಣಮೂಲ ಕಾಂಗ್ರೆಸ್ ಪ್ರತಿನಿಧಿ ಒತ್ತಾಯಿಸಿದರು.

ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ. 12ನೇ ಮಾರ್ಚ್ ಅಧಿಸೂಚನೆ ಪ್ರಕಟ. 19ನೇ ಮಾರ್ಚ್ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ. 20 ಮಾರ್ಚ್ ನಾಮಪತ್ರ ಪರಿಶೀಲನೆ. ನಾಮಪತ್ರ ಹಿಂಪಡೆಯಲು ಮಾರ್ಚ್ 22 ಕೊನೆ ದಿನ. ಚುನಾವಣೆ 6ನೇ ಏಪ್ರಿಲ್. ಕನ್ಯಾಕುಮಾರಿ ಲೋಕಸಭೆ ಕ್ಷೇತ್ರದ ಚುನಾವಣೆ ಕೂಡ ಏ. 6ರಂದು ನಡೆಯಲಿದೆ.
ಎಐಎಡಿಎಂಕೆ ಮತ್ತು ಬಿಜೆಪಿ ಮೈತ್ರಿಕೂಟ ಹಾಗೂ ಡಿಎಂಕೆ ಮತ್ತು ಕಾಂಗ್ರೆಸ್ ಮೈತ್ರಿಕೂಟಗಳು ಪ್ರಮುಖವಾಗಿ ಸೆಣಸಾಟ ನಡೆಸುವ ನಿರೀಕ್ಷೆಯಿದೆ. ಕಮಲ ಹಾಸನ್ ಅವರ ಪಕ್ಷ ಸೇರಿದಂತೆ ಇತರೆ ಪಕ್ಷಗಳೂ ಚುನಾವಣೆಯ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ.
ಮುಖ್ಯ ಚುನಾವಣಾಧಿಕಾರಿ ನೇತೃತ್ವದಲ್ಲಿ ನಡೆದ ಸರ್ವ ಪಕ್ಷಗಳ ಸಭೆಯಲ್ಲಿ ವಿವಿಧ ವಿಷಯಗಳನ್ನು ಎತ್ತಿದ ರಾಜಕೀಯ ಪಕ್ಷಗಳು, 80ಕ್ಕಿಂತ ಹೆಚ್ಚು ಮತದಾರರಿಗೆ ಪೋಸ್ಟಲ್ ಬ್ಯಾಲೆಟ್ ಸೌಕರ್ಯವನ್ನು ಹೆಚ್ಚಿಸುವುದು, ಮತದಾರರಿಗೆ ಹಂಚಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದು ಸೇರಿದಂತೆ ಮತ್ತಿತರ ಸಲಹೆಗಳನ್ನು ನೀಡಿದವು.
-
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು












Click it and Unblock the Notifications