ತಮಿಳುನಾಡಲ್ಲಿ ಪೊಂಗಲ್: ಜಲ್ಲಿಕಟ್ಟು ಸ್ಪರ್ಧೆಗೆ 2,100 ಹೋರಿಗಳು ಸಜ್ಜು
ಚೆನ್ನೈ, ಜನವರಿ.14: ತಮಿಳುನಾಡಿನಲ್ಲಿ ಸಾಂಪ್ರಾದಾಯಕ ಹಬ್ಬಕ್ಕೆ ಭರ್ಜರಿ ಭರಪೂರ ಸಿದ್ಧತೆಗಳನ್ನು ನಡೆಸಲಾಗುತ್ತಿದೆ. ಕರ್ನಾಟಕದಲ್ಲಿ ಸಂಕ್ರಾಂತಿ ಹಬ್ಬವನ್ನೇ ತಮಿಳುನಾಡಿನಲ್ಲಿ ಪೊಂಗಲ್ ಎಂದು ಆಚರಿಸಲಾಗುತ್ತದೆ. ಜನವರಿ.15ರಿಂದ ಮೂರು ದಿನಗಳ ಕಾಲ ನಡೆಯುವ ಜಲ್ಲಿಕಟ್ಟು ಸ್ಪರ್ಧೆಯೇ ಈ ಹಬ್ಬದ ಕೇಂದ್ರ ಬಿಂದು ಆಗಿದೆ.
ಚೆನ್ನೈ ಸೇರಿದಂತೆ ತಮಿಳುನಾಡಿನ ಮೂರು ಕಡೆಗಳಲ್ಲಿ ಪೊಂಗಲ್ ಹಬ್ಬದ ಪ್ರಯುಕ್ತ ಜಲ್ಲಿಕಟ್ಟು ಸ್ಪರ್ಧೆ ಆಯೋಜಿಸಲಾಗಿದೆ. ಜಲ್ಲಿಕಟ್ಟು ಎಂದರೆ ಹೋರಿಗಳನ್ನು ಎದುರಿಸುವ ಸ್ಪರ್ಧೆಯಾಗಿದ್ದು, ಈ ಹಬ್ಬಕ್ಕೆ ತಮಿಳುನಾಡಿನಲ್ಲಿ ವಿಶೇಷ ಪ್ರಾಧಾನ್ಯತೆಯನ್ನು ನೀಡಲಾಗುತ್ತದೆ.
ಜಲ್ಲಿಕಟ್ಟು ಆಚರಣೆಯಲ್ಲಿ ಅಪ್ರಾಪ್ತರಿಗೆ ಮೊದಲಿನಿಂದಲೂ ಪ್ರವೇಶ ನಿಷೇಧಿಸಲಾಗಿದೆ. ಈ ಬಾರಿ ಕಟ್ಟುನಿಟ್ಟಾಗಿ ಅಪ್ರಾಪ್ತರನ್ನು ಜಲ್ಲಿಕಟ್ಟಿನಿಂದ ದೂರ ಇರಿಸಲು ಜಿಲ್ಲಾಡಳಿತ ಕಠಿಣ ಕ್ರಮ ತೆಗೆದುಕೊಂಡಿದೆ. 21 ವರ್ಷದೊಳಗಿನ ಯುವಕರು ಜಲ್ಲಿಕಟ್ಟು ಸ್ಪರ್ಧೆಯಲ್ಲಿ ಭಾಗವಹಿಸುವಂತಿಲ್ಲ ಎಂದು ಮಧುರೈ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಮೂರು ಕಡೆಗಳಲ್ಲಿ ಒಂದೊಂದು ದಿನ ಆಚರಣೆ
ಪ್ರತಿವರ್ಷವು ಪೊಂಗಲ್ ಹಬ್ಬದ ಸಂಭ್ರಮವನ್ನು ಆಚರಿಸಲು ಮೂರು ದಿನಗಳ ಕಾಲ ಜಲ್ಲಿಕಟ್ಟು ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಜನವರಿ.15ರಂದು ಅವನಿಯಪುರಂನಲ್ಲಿ ಜಲ್ಲಿಕಟ್ಟು ಸ್ಪರ್ಧೆ ನಡೆಯಲಿದ್ದು ಅದಕ್ಕಾಗಿ 750 ಕೋಣಗಳನ್ನು ಅಣಿಗೊಳಿಸಲಾಗಿದೆ. ಜನವರಿ.16ರಂದು ಪಲಮೇಡುನಲ್ಲಿ ಜಲ್ಲಿಕಟ್ಟು ಸ್ಪರ್ಧೆಗಾಗಿ 650 ಕೋಣಗಳು ಸಜ್ಜುಗೊಂಡಿವೆ. ಇನ್ನು, 17ರಂದು ಅಲಂಕನಲ್ಲೂರ ಗ್ರಾಮದಲ್ಲಿ ಜರುಗುವ ಜಲ್ಲಿಕಟ್ಟು ಸ್ಪರ್ಧೆಯಲ್ಲಿ 700 ಕೋಣಗಳು ಭಾಗವಹಿಸಲಿದೆ.

ಜಲ್ಲಿಕಟ್ಟು ಅನಾಹುತ ತಪ್ಪಿಸಲು ಜಿಲ್ಲಾಧಿಕಾರಿ ಕ್ರಮ
ಮಧುರೈನಲ್ಲಿ ನಡೆಯುವ ಜಲ್ಲಿಕಟ್ಟು ಸ್ಪರ್ಧೆಯಲ್ಲಿ ಭಾಗವಹಿಸಬೇಕಾದರೆ ವಿಶೇಷ ಷರತ್ತುನ್ನು ವಿಧಿಸಲಾಗಿದೆ. ಈ ಬಾರಿ ಜಲ್ಲಿಕಟ್ಟು ಸ್ಪರ್ಧೆಯಲ್ಲಿ ನಡೆಯುವ ಅನಾಹುತಗಳನ್ನು ತಪ್ಪಿಸಲೆಂದೇ ಜಿಲ್ಲಾಡಳಿತ ಕಠಿಣ ಕ್ರಮಗಳನ್ನು ತೆಗೆದುಕೊಂಡಿದೆ.

ಫಿಟ್ ನೆಸ್ ಸರ್ಟಿಫಿಕೇಟ್ ಉಳ್ಳವರಿಗೆ ಮಾತ್ರ ಅವಕಾಶ
ಇನ್ನು, ಮಧುರೈ ಜಿಲ್ಲೆಯ ಪಲಮಾಡು ಮತ್ತು ಅಲಂಗನಲ್ಲೂರಿನಲ್ಲಿ ಈ ಬಾರಿ ಜಲ್ಲಿಕಟ್ಟು ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಸ್ಪರ್ಧೆಯಲ್ಲಿ ಭಾಗವಹಿಸುವವರು ಸ್ವತಃ ತಾವೇ ಹೋಗಿ ವೈದ್ಯರಿಂದ ಫಿಟ್ ನೆಸ್ ಸರ್ಟಿಫಿಕೇಟ್ ನ್ನು ಪಡೆದುಕೊಂಡಿರಬೇಕು. ಈ ಫಿಟ್ ನೆಸ್ ಸರ್ಟಿಫಿಕೇಟ್ ಉಳ್ಳವರಿಗೆ ಮಾತ್ರ ಅವಕಾಶ ನೀಡುವುದಾಗಿ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ವಿಶೇಷ ಬಸ್ ಗಳ ವ್ಯವಸ್ಥೆ ಕಲ್ಪಿಸಿದ ಸರ್ಕಾರ
ಪೊಂಗಲ್ ಆಚರಣೆ ಜೊತೆಗೆ ಜಲ್ಲಿಕಟ್ಟು ಸ್ಪರ್ಧೆಯನ್ನು ಕಣ್ತುಂಬಿಕೊಳ್ಳಲು ಬಯಸುವ ಪ್ರವಾಸಿಗರಿಗೆ ವಿಶೇಷ ಬಸ್ ವ್ಯವಸ್ಥೆ ಜೊತೆಗೆ ಪ್ಯಾಕೇಜ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಎಸಿ ಕೋಚ್ ಬಸ್ ಹಾಗೂ ವಸತಿ ವ್ಯವಸ್ಥೆ ಒಬ್ಬರಿಗೆ 4,550 ರುಪಾಯಿ ನಿಗದಿಗೊಳಿಸಿದ್ದು, ಶೇರಿಂಗ್ ಆದರೆ 4300 ರೂಪಾಯಿ ಹಾಗೂ ಮಕ್ಕಳಿಗೆ 3450 ರುಪಾಯಿ ನಿಗದಿ ಮಾಡಲಾಗಿದೆ. ಎಸಿ ಬಸ್ ಹಾಗೂ ಎಸಿ ವಸತಿ ವ್ಯವಸ್ಥೆ ಕಲ್ಪಿಸಲು ಒಬ್ಬರಿಗೆ 4750 ರುಪಾಯಿ ನಿಗದಿಗೊಳಿಸಲಾಗಿದ್ದು, ಶೇರಿಂದ್ ಅದರೆ 4500 ಹಾಗೂ ಮಕ್ಕಳಿಗೆ 3600 ರುಪಾಯಿ ನಿಗದಿಗೊಳಿಸಲಾಗಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications