ಗರ್ಭಿಣಿಗೆ ಎಚ್ ಐವಿ ಸೋಂಕಿನ ರಕ್ತ ನೀಡಿದ ಸರ್ಕಾರಿ ಆಸ್ಪತ್ರೆ!
ಚೆನ್ನೈ, ಡಿಸೆಂಬರ್ 26: ತಮಿಳುನಾಡಿನ ವಿರುಧುನಗರ್ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 24 ವರ್ಷ ವಯಸ್ಸಿನ ಗರ್ಭಿಣಿಯೊಬ್ಬರಿಗೆ ಎಚ್ ಐವಿ ಸೋಂಕು ತಗುಲಿದ ರಕ್ತವನ್ನು ನೀಡಿದ ಘಟನೆ ಇತ್ತೀಚೆಗೆ ನಡೆದಿದೆ.
ಇದೀಗ ಗರ್ಭಿಣಿ ಎಚ್ಐವಿ ಸೋಂಕಿತೆಯಾಗಿದ್ದು, ಜೀವನ ಪೂರ್ತಿ ನರಕ ಅನುಭವಿಸಬೇಕಾಗಿದೆ. ಆಕೆಯ ಗರ್ಭದಲ್ಲಿರುವ ಶಿಶುವಿಗೂ ಎಚ್ ಐವಿ ತಗುಲುವ ಸಾಧ್ಯತೆ ಇದೆ ಎಂದು ವೈದ್ಯರು ಕಳವಳ ವ್ಯಕ್ತಪಡಿಸಿದ್ದಾರೆ.
ಎಚ್ ಐವಿ ತ್ತು ಹೆಪಟೈಟಿಸ್ ಬಿ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬ ರಕ್ತದಾನ ಮಾಡಿದ್ದ. ಆದರೆ ಆತನ ರಕ್ತವನ್ನು ಸರಿಯಾಗಿ ಪರೀಕ್ಷಿಸದೆ ಗರ್ಭಿಣಿಯೊಬ್ಬರಿಗೆ ನೀಡುವ ಮೂಲಕ ಅಚಾತುರ್ಯವೆಸಗಿದ್ದಾರೆ ಸರ್ಕಾರಿ ಆಸ್ಪತ್ರೆ ಸಿಬ್ಬಂದಿ.

ಘಟನೆಯ ನಂತರ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದ್ದು, ಎಚ್ ಐವಿ ಪೀಡಿತ ಮಹಿಳೆಗೆ ಪರಿಹಾರ ಮತ್ತು ಉದ್ಯೋಗ ನೀಡುವ ಭರವಸೆ ನೀಡಲಾಗಿದೆ. ಆದರೆ ಜೀವನ ಪರ್ಯಂತ ಈ ಸೋಂಕಿನಿಂದಲೇ ಉಳಿಯಬೇಕಾದ ಶಾಪದಿಂದ ಮಾತ್ರ ಆಕೆ ಹೊರಬರಲು ಸಾಧ್ಯವಿಲ್ಲ!
ರಕ್ತದಾನ ಮಾಡಿದ ಯುವಕನಿಗೂ ತನಗೆ ಕಾಯಿಲೆ ಇರುವ ಬಗ್ಗೆ ತಿಳಿದಿರಲಿಲ್ಲ. ಇದೀಗ ಆತನಿಗೂ ಚಿಕಿತ್ಸೆ ನೀಡಲಾಗುತ್ತಿದೆ.
ಕಳೆದ ಫೆಬ್ರವರಿಯಲ್ಲಿ ಉತ್ತರ ಪ್ರದೇಶದ ಉನ್ನಾವೋದಲ್ಲಿ ನಕಲಿ ವೈದ್ಯನೊಬ್ಬ ಒಂದೇ ಸಿರೀಂಜಿನಲ್ಲಿ ಹಲವರಿಗೆ ಚುಚ್ಚುಮದ್ದು ನೀಡಿ ಎಚ್ ಐವಿ ಸೋಂಕು ತಗುಲುವಂತೆ ಮಾಡಿದ ಘಟನೆ ವರದಿಯಾಗಿದ್ದನ್ನು ಇಲ್ಲಿ ಸ್ಮರಿಸಬಹುದು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications