ರಾಷ್ಟ್ರೀಯ ಶಿಕ್ಷಣ ನೀತಿ: ಮೂರು ಭಾಷೆಯ ಸೂತ್ರ ತಿರಸ್ಕರಿಸಿದ ತಮಿಳುನಾಡು
ಚೆನ್ನೈ, ಆಗಸ್ಟ್ 03: ಹೊಸ ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ) ಯಲ್ಲಿ ಪ್ರಸ್ತಾಪಿಸಲಾದ ಕೇಂದ್ರದ ಮೂರು ಭಾಷೆಯ ಸೂತ್ರವನ್ನು ತಮಿಳುನಾಡು ಸರ್ಕಾರ ತಿರಸ್ಕರಿಸಿದೆ.
ಸೋಮವಾರ ಈ ಕುರಿತು ನಿರ್ಧಾರ ಪ್ರಕಟಿಸಿರುವ ತಮಿಳುನಾಡು ಮುಖ್ಯಮಂತ್ರಿ ಪಳನಿಸ್ವಾಮಿ 'ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಅನುಸರಿಸುತ್ತಿರುವ ಎರಡು ಭಾಷೆಯ ನೀತಿಯನ್ನು ಬದಲಾಯಿಸುವುದಿಲ್ಲ' ಎಂದು ಹೇಳಿದ್ದಾರೆ.
ಈ ಸಂಬಂಧ ರಾಜ್ಯದಲ್ಲಿ ಕ್ಯಾಬಿನೆಟ್ ಸಭೆ ನಡೆಸಿದ ಸಿಎಂ ಪಳನಿಸ್ವಾಮಿ ಚರ್ಚೆಯ ಬಳಿಕ 'ರಾಜ್ಯದಲ್ಲಿ ಹಲವು ದಶಕಗಳಿಂದ ಎರಡು ಭಾಷೆಯ ನೀತಿಯನ್ನು ಅನುಸರಿಸುತ್ತಿದೆ. ಅದರಲ್ಲಿ ಯಾವುದೇ ಬದಲಾವಣೆ ತರುವುದು ಬೇಡ. ಮೂರು ಭಾಷೆ ಸೂತ್ರದಲ್ಲಿ ನಮಗೆ ವಿನಾಯಿತಿ ನೀಡಿ' ಎಂದು ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ.

'ತಮಿಳುನಾಡು ಕೇಂದ್ರದ ಮೂರು ಭಾಷಾ ನೀತಿಯನ್ನು ಎಂದಿಗೂ ಅನುಮತಿಸುವುದಿಲ್ಲ. ರಾಜ್ಯದಲ್ಲಿ ದ್ವಿಭಾಷಾ ನೀತಿಯೊಂದಿಗೆ (ತಮಿಳು ಮತ್ತು ಇಂಗ್ಲಿಷ್) ಶಿಕ್ಷಣ ಮುಂದುವರಿಯುತ್ತದೆ' ಎಂದು ಮುಖ್ಯಮಂತ್ರಿ ಕೇಂದ್ರಕ್ಕೆ ಸಂದೇಶ ರವಾನಿಸಿದ್ದಾರೆ.
'ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿನ ಮೂರು ಭಾಷೆಯ ಸೂತ್ರವು ನೋವಿನಿಂದ ಕೂಡಿದೆ ಮತ್ತು ದುಃಖಕರವಾಗಿದೆ. ಪ್ರಧಾನಿ (ನರೇಂದ್ರ ಮೋದಿ) ಮೂರು ಭಾಷೆಯ ನೀತಿಯನ್ನು ಮರುಪರಿಶೀಲಿಸಬೇಕು' ಎಂದು ಸಿಎಂ ಮನವಿ ಮಾಡಿದರು. ಈ ವಿಷಯದಲ್ಲಿ ರಾಜ್ಯಗಳು ತಮ್ಮದೇ ಆದ ನೀತಿಯನ್ನು ಜಾರಿಗೆ ತರಲು ಕೇಂದ್ರವು ಅವಕಾಶ ನೀಡಬೇಕು ಎಂದು ವಿನಂತಿಸಿದ್ದಾರೆ.
-
School Land Bill: ಸರ್ಕಾರಿ ಶಾಲೆಗಳ ಭೂರಕ್ಷಣ ವಿಧೇಯಕ ಜಾರಿ; ಕನ್ನಡದ ಹಿತದೃಷ್ಠಿಯಿಂದ ಮಹತ್ವದ ಹೆಜ್ಜೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
ಸರ್ಕಾರಿ PU ಕಾಲೇಜುಗಳ ಮೂಲಸೌಕರ್ಯ ಅಭಿವೃದ್ಧಿಗೆ ಬರೋಬ್ಬರಿ 9,383 ರೂ. ಲಕ್ಷ ಅನುದಾನ ಮಂಜೂರು -
ಶಾಲಾ ಮಕ್ಕಳ ಮೊಬೈಲ್ ಬಳಕೆ ನಿರ್ಬಂಧ: 'ಡಿಜಿಟಲ್ ಕರಡು ನೀತಿ' ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ -
UPSC ಪೂರ್ವಭಾವಿ ಪರೀಕ್ಷೆ ಮುಗಿದ ತಕ್ಷಣವೇ ಕೀ ಉತ್ತರಗಳ ಬಿಡುಗಡೆಗೆ ಕೇಂದ್ರ ಸರ್ಕಾರದ ನಿರ್ಧಾರ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
CBSE ಶಾಲೆಗಳಲ್ಲಿ ಋತುಚಕ್ರ ನೈರ್ಮಲ್ಯ ಕಡ್ಡಾಯ: ಸುಪ್ರೀಂ ಕೋರ್ಟ್ ಆದೇಶದ ಬೆನ್ನಲ್ಲೇ ಹೊಸ ನಿಯಮ ಜಾರಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ











Click it and Unblock the Notifications