ತಮಿಳುನಾಡಿನಲ್ಲಿ ಶಾಲೆ-ಕಾಲೇಜು, ಚಿತ್ರಮಂದಿರ ಪುನಾರಂಭ
ಚೆನ್ನೈ, ನವೆಂಬರ್.01: ತಮಿಳುನಾಡಿನಲ್ಲಿಕೊರೊನಾವೈರಸ್ ಸೋಂಕಿನ ಹರಡುವಿಕೆ ಪ್ರಮಾಣ ಕೊಂಚ ತಗ್ಗಿದೆ. ಈ ಹಿನ್ನೆಲೆ ಶಾಲಾ-ಕಾಲೇಜು, ಸಿನಿಮಾ ಥಿಯೇಟರ್, ಮೃಗಾಲಯ ಮತ್ತು ಅಮ್ಯೂಸ್ ಮೆಂಟ್ ಪಾರ್ಕ್ ಗಳನ್ನು ತೆರೆಯುವುದಕ್ಕೆ ರಾಜ್ಯ ಸರ್ಕಾರವು ಅನುಮತಿ ನೀಡಿದೆ.
ರಾಜ್ಯಾದ್ಯಂತ ನವೆಂಬರ್ ತಿಂಗಳಿನಲ್ಲಿ ಪ್ರಮಾಣಿಕ ಕಾರ್ಯಾಚರಣೆ ವಿಧಾನಗಳ ಅಡಿಯಲ್ಲಿ ಸೇವೆಗಳ ಪುನಾರಂಭಕ್ಕೆ ಸರ್ಕಾರವು ಸಮ್ಮತಿಸಿದೆ. ಉಪ ನಗರ ರೈಲ್ವೆ ಸೇವೆಯನ್ನು ಕೇಂದ್ರ ಸರ್ಕಾರದ ತೀರ್ಮಾನದಂತೆ ಪುನಾರಂಭಿಸಲು ಅನುಮತಿ ನೀಡಲಾಗಿದೆ.
ತಮಿಳುನಾಡಿನಲ್ಲಿ ನವೆಂಬರ್.16ರಿಂದ ಶಾಲೆ, ಕಾಲೇಜು, ಸಂಶೋಧನಾ ಕಚೇರಿಗಳು, ಶೈಕ್ಷಣಿಕ ಸಂಸ್ಥೆಗಳು ಮತ್ತು ಹೋಟೆಲ್ ಗಳನ್ನು ಪುನಾರಂಭಿಸಲು ಅನುಮತಿ ನೀಡಲಾಗಿದೆ ಎಂದು ಮುಖ್ಯಮಂತ್ರಿ ಕೆ.ಪಳನಿಸ್ವಾಮಿ ಅಧಿಕೃತವಾಗಿ ಘೋಷಿಸಿದ್ದಾರೆ. ಆದರೆ 9 ರಿಂದ 12ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಮಾತ್ರ ಶಾಲೆ ಆರಂಭಿಸುವುದಕ್ಕೆ ಸೂಚಿಸಲಾಗಿದೆ.

ಶೇ.50ರಷ್ಟು ಮಾತ್ರ ಗ್ರಾಹಕರಿಗೆ ಅವಕಾಶ:
ರಾಜ್ಯದಲ್ಲಿರುವ ಸಿನಿಮಾ ಥಿಯೇಟರ್, ಮಲ್ಟಿಫ್ಲೆಕ್ಸ್, ಮೃಗಾಲಯ ಮತ್ತು ಅಮ್ಯೂಸ್ ಮೆಂಟ್ ಪಾರ್ಕ್ ಗಳು ನವೆಂಬರ್.10ರಿಂದಲೇ ಪುನಾರಂಭಕ್ಕೆ ಅನುಮತಿ ನೀಡಲಾಗಿದೆ. ಆದರೆ ಶೇ.50ರಷ್ಟು ಜನರ ಪ್ರವೇಶಕ್ಕೆ ಮಾತ್ರ ಅವಕಾಶವನ್ನು ನೀಡಲಾಗಿದೆ. 200 ಸೀಟ್ ಗಳ ಒಂದು ಚಿತ್ರ ಮಂದಿರದಲ್ಲಿ ಕೇವಲ 100 ಜನರಿಗೆ ಮಾತ್ರ ಟಿಕೆಟ್ ವಿತರಿಸುವುದಕ್ಕೆ ಅನುಮತಿ ನೀಡಲಾಗಿದೆ. ಪ್ರಮಾಣಿಕ ಕಾರ್ಯಾಚರಣೆ ವಿಧಾನಗಳ ಪಾಲನೆಯನ್ನು ಕಡ್ಡಾಯಗೊಳಿಸಲಾಗಿದೆ.
ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಹೆಚ್ಚಾಗಿರುವ ಕಂಟೇನ್ಮೆಂಟ್ ಝೋನ್ ಗಳಿಗೆ ಈ ನಿಯಮಗಳು ಅನ್ವಯ ಆಗುವುದಿಲ್ಲ. ಕಂಟೇನ್ಮೆಂಟ್ ಝೋನ್ ಗಳಲ್ಲಿ ಶಾಲಾ-ಕಾಲೇಜು, ಮೃಗಾಲಯ, ಚಿತ್ರಮಂದಿರ ಮತ್ತು ಹೋಟೆಲ್ ಗಳನ್ನು ಎಂದಿನಂತೆ ಮುಚ್ಚಿರುತ್ತವೆ ಎಂದು ಸರ್ಕಾರವು ಸ್ಪಷ್ಟಪಡಿಸಿದೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications