ತಮಿಳುನಾಡಿನಲ್ಲಿ ಅಕ್ಟೋಬರ್ 1 ರಿಂದ ಶಾಲೆಗಳು ಪುನರಾರಂಭ: ಮಾರ್ಗಸೂಚಿಯಲ್ಲೇನಿದೆ?
ಚೆನ್ನೈ, ಸೆಪ್ಟೆಂಬರ್ 24: ತಮಿಳುನಾಡಿನಲ್ಲಿ ಅಕ್ಟೋಬರ್ 1 ರಿಂದ ಶಾಲೆಗಳು ಪುನರಾರಂಭಗೊಳ್ಳಲಿದೆ.
10 ರಿಂದ 12ನೇ ತರಗತಿ ವಿದ್ಯಾರ್ಥಿಗಳು ಶಾಲಾ, ಕಾಲೇಜುಗಳಿಗೆ ತೆರಳಬಹುದು ಎಂದು ಹೇಳಲಾಗಿದೆ. ತಮಿಳುನಾಡು ಸರ್ಕಾರವು ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದ್ದು, ವಿದ್ಯಾರ್ಥಿಗಳು ತಮ್ಮ ಸ್ವಿಚ್ಛೆಯಂತೆ ಶಾಲೆಗಳಿಗೆ ತೆರಳಬಹುದು.
ವಿದ್ಯಾರ್ಥಿಗಳಿಗೆ ಶಿಕ್ಷಕರ ಮಾರ್ಗದರ್ಶನ ಬೇಕಿದ್ದರೆ, ಪೋಷಕರು ಲಿಖಿತ ರೂಪದಲ್ಲಿ ಅರ್ಜಿ ಸಲ್ಲಿಸಬೇಕು. ಕಂಟೈನ್ಮೆಂಟ್ ಜೋನ್ಗಳಲ್ಲಿರುವ ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ಶಾಲೆಗೆ ಹೋಗುವಂತಿಲ್ಲ.

ಸರ್ಕಾರದ ಮಾರ್ಗ ಸೂಚಿ ಇಂತಿವೆ:
-10 ರಿಂದ 12ನೇ ತರಗತಿಯವರೆಗೆ ವಿದ್ಯಾರ್ಥಿಗಳು ಶಾಲೆ, ಕಾಲೇಜುಗಳಿಗೆ ತೆರಳಲು ಅವಕಾಶ, ಶಿಕ್ಷಕರು ಎರಡು ಬ್ಯಾಚ್ಗಳಲ್ಲಿ ಪಾಠ ಮಾಡಬೇಕು. ಮೊದಲ ಬ್ಯಾಚ್ ಸೋಮವಾರ, ಮಂಗಳವಾರ, ಬುಧವಾರ ಶಾಲೆಗೆ ಬಂದರೆ ಮತ್ತೊಂದು ಬ್ಯಾಚ್ ಗುರುವಾರ, ಶುಕ್ರವಾರ, ಶನಿವಾರ ಶಾಲೆಗೆ ಬರಬೇಕು ಎಂದು ತಿಳಿಸಿದೆ.
-ಶಾಲೆಯಲ್ಲಿರುವ ಫರ್ನಿಚರ್, ಬಾಗಿಲುಗಳು, ಕಿಟಕಿಗಳಿಗೆ ಶೇ.1ರಷ್ಟು ಸೋಡಿಯಂ ಹೈಪೋಕ್ಲೋರೈಟ್ ಸೊಲ್ಯೂಷನ್ ನೀಡಬೇಕು, ಪ್ರತಿ ದಿನ ಬೆಳಗ್ಗೆ ಇದನ್ನು ಮಾಡಬೇಕು.
-ವಿದ್ಯಾರ್ಥಿಗಳು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು, ಒಟ್ಟೊಟ್ಟಿಗೆ ಓಡಾಡುವುದನ್ನು ಕೂಡ ನಿಷೇಧಿಸಲಾಗಿದೆ.
-6 ಅಡಿಗಳವರೆಗೆ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು. ಸ್ಟಾಫ್ರೂಂ, ಕಚೇರಿ ಪ್ರದೇಶದಲ್ಲಿ ಕೂಡ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು.
-ಮಾಸ್ಕ್ಗಳನ್ನು ಧರಿಸುವುದು ಕಡ್ಡಾಯವಾಗಿದೆ.ಹಾಗೆಯೇ ಪದೇ ಪದೇ ಮಾಸ್ಕ್ನ್ನು ಕೂಡ ಮುಟ್ಟುತ್ತಿರಬಾರದು.
-ಪ್ರತಿ ಶಾಲೆಗಳಲ್ಲಿ ಥರ್ಮಲ್ ಸ್ಕ್ರೀನಿಂಗ್ ಅಳವಡಿಸಿರಬೇಕು
-ಒಬ್ಬ ವಿದ್ಯಾರ್ಥಿಯ ನೋಟ್ಬುಕ್, ಪೆನ್, ಪೆನ್ಸಿಲ್, ರಬ್ಬರ್, ನೀರಿನ ಬಾಟಲಿಗಳನ್ನು ಮತ್ತೊಬ್ಬ ವಿದ್ಯಾರ್ಥಿ ಮುಟ್ಟಕೂಡದು.
Recommended Video
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಸಾಮಾಜಿಕ ಜಾಲತಾಣದ ಕರೆಗೆ ಓಗೊಟ್ಟ ಹೆಚ್.ಡಿ.ಕುಮಾರಸ್ವಾಮಿ: ನಂಜನಗೂಡಿನ ಹುಲ್ಲಳ್ಳಿಯ ನೊಂದ ಕುಟುಂಬಕ್ಕೆ ಅಭಯ -
ಡಿವಿಜಿ ಒಡನಾಡಿ,ರಾಷ್ಟ್ರೋತ್ಥಾನದ ಮಾಜಿ ಅಧ್ಯಕ್ಷ ಎಸ್ಆರ್ ರಾಮಸ್ವಾಮಿ ನಿಧನ












Click it and Unblock the Notifications