ಕೆರೆಯಲ್ಲ ಈ ಬಾರಿ ಸಮುದ್ರದಲ್ಲೇ ಉಕ್ಕುತಿದೆ ವಿಷಕಾರಿ ನೊರೆ!
ಚೆನ್ನೈ, ಡಿಸೆಂಬರ್.02: ಸಿಲಿಕಾನ್ ಸಿಟಿಗೂ ಕಸದ ಸಮಸ್ಯೆಗೂ ಬಿಡಲಾರದ ನಂಟು. ಇಲ್ಲಿ ಮೂರು ತಿಂಗಳಿಗೊಮ್ಮೆ, ಆರು ತಿಂಗಳಿಗೊಮ್ಮೆ ಕಸದ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಬೆಳ್ಳಂದೂರು, ವರ್ತೂರು ಕೆರೆಗಳಲ್ಲಿ ನೊರೆ ಉಕ್ಕಿ ಬರುತ್ತದೆ. ಇದು ಬೆಂಗಳೂರಿನ ಮಂದಿಗೆ ಕಾಮನ್ ಆಗಿ ಬಿಟ್ಟಿದೆ.
ಕಸದ ಸಮಸ್ಯೆಯಿಂದ ಕೆರೆಗಳಲ್ಲಿ ನೊರೆ ಕಾಣಿಸಿಕೊಳ್ಳುವುದನ್ನೆಲ್ಲ ಕೇಳಿದ್ದೀರಾ, ನೋಡಿದ್ದೀರ. ಆದರೆ, ಇದೇ ಕಸದ ಸಮಸ್ಯೆಯಿಂದ ಸಮುದ್ರದಲ್ಲೇ ನೊರೆ ಉಕ್ಕಿ ಬಂದಿರುವ ಘಟನೆಯೊಂದು ಇದೀಗ ಬೆಳಕಿಗೆ ಬಂದಿದೆ.

ಹೌದು, ತಮಿಳುನಾಡು ರಾಜಧಾನಿ ಚೆನ್ನೈನ ಮರೀನಾ ಬೀಚ್ ಕಲುಷಿತಗೊಂಡಿದೆ. ಪ್ರವಾಸಿಗರ ಪಾಲಿನ ಸ್ವರ್ಗ, ದೇಶದ ಅತಿದೊಡ್ಡ ಸಮುದ್ರ ಎನಿಸಿಕೊಂಡಿದ್ದ ಮರೀನಾ ಬೀಚ್ ನ ಶ್ರೀನಿವಾಸಪುರಂನ ಬಳಿ ಈಗ ನೊರೆ ಉಕ್ಕಿ ಬರುತ್ತಿದೆ.

ಚೆನ್ನೈನಲ್ಲಿ ಮರೀನಾ ಬೀಚ್ ಸುತ್ತಮುತ್ತಲಿನಲ್ಲಿರುವ ಆಸ್ಪತ್ರೆ ಹಾಗೂ ಕಾರ್ಖಾನೆಗಳ ಕಲುಷಿತ ನೀರನ್ನು ಸಮುದ್ರಕ್ಕೆ ಬಿಡಲಾಗುತ್ತಿದೆ. ಇದರಿಂದ ಸಮುದ್ರದಲ್ಲಿ ನೊರೆ ಉಕ್ಕುತ್ತಿದ್ದು, ಕೆಟ್ಟ ವಾಸನೆಯಿಂದ ಜನರು ನಿತ್ಯ ಪರದಾಡುವಂತಾ ಪರಿಸ್ಥಿತಿ ನಿರ್ಮಾಣವಾಗಿದೆ.

ಇದರ ಜೊತೆಗೆ ಕಳೆದ ಕೆಲ ದಿನಗಳಿಂದ ಚೆನ್ನೈ ಸೇರಿದಂತೆ ತಮಿಳುನಾಡಿನ ಹಲವೆಡೆ ಭಾರಿ ಮಳೆಯಾಗುತ್ತಿದೆ. ಇದೂ ಕೂಡಾ ಸಮುದ್ರದಲ್ಲಿ ನೊರೆ ಕಾಣಿಸಿಕೊಳ್ಳಲು ಕಾರಣ ಎಂದು ಕೆಲವು ಪರಿಸರವಾದಿಗಳು ಹೇಳುತ್ತಿದ್ದಾರೆ. ಮರೀನಾ ಬೀಚ್ ನಲ್ಲಿ ನೊರೆ ಉಕ್ಕುತ್ತಿದ್ದು ಈಗಿನ ಪರಿಸ್ಥಿತಿ ಹೇಗಿದೆ ಎನ್ನುವುದನ್ನು ಈ ಚಿತ್ರಗಳೇ ಹೇಳುತ್ತಿವೆ ನೋಡಿ.
-
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಸಾಮಾಜಿಕ ಜಾಲತಾಣದ ಕರೆಗೆ ಓಗೊಟ್ಟ ಹೆಚ್.ಡಿ.ಕುಮಾರಸ್ವಾಮಿ: ನಂಜನಗೂಡಿನ ಹುಲ್ಲಳ್ಳಿಯ ನೊಂದ ಕುಟುಂಬಕ್ಕೆ ಅಭಯ












Click it and Unblock the Notifications