ತಮಿಳುನಾಡಿನ ಶೇ. 23 ಜನರಲ್ಲಿ ಕೋವಿಡ್ ಪ್ರತಿಕಾಯ ಪತ್ತೆ
ಚೆನ್ನೈ, ಜೂ. 09: ಈ ವರ್ಷದ ಏಪ್ರಿಲ್ನಲ್ಲಿ ತಮಿಳುನಾಡಿನಲ್ಲಿ ನಡೆಸಿದ ಎರಡನೇ ಸಮೀಕ್ಷೆಯ ಪ್ರಕಾರ ಕನಿಷ್ಠ ಶೇ. 23 ರಷ್ಟು ಜನರ ದೇಹದಲ್ಲಿ SARS-CoV-2 ಪ್ರತಿಕಾಯಗಳನ್ನು ಅಭಿವೃದ್ಧಿಯಾಗಿದೆ ಎಂದು ತಿಳಿದುಬಂದಿದೆ. ಕಳೆದ ವರ್ಷ ಅಕ್ಟೋಬರ್-ನವೆಂಬರ್ನಲ್ಲಿ ನಡೆಸಿದ ಮೊದಲ ಸಮೀಕ್ಷೆಯಲ್ಲಿ ಶೇ.31 ರಷ್ಟು ಕಡಿಮೆಯಾಗಿದೆ.
ಚೆನ್ನೈ ಹೊರತುಪಡಿಸಿ ಎಲ್ಲಾ ಜಿಲ್ಲೆಗಳಲ್ಲಿ ಸಾರ್ವಜನಿಕ ಆರೋಗ್ಯ ಮತ್ತು ಔಷಧ ನಿಯಂತ್ರಣ ನಿರ್ದೇಶನಾಲಯವು ಈ ಅಧ್ಯಯನವನ್ನು ನಡೆಸಿದೆ. ಇನ್ನು ಈಗಾಗಲೇ ಎರಡು ಸಮೀಕ್ಷೆಗಳನ್ನು ಗ್ರೇಟರ್ ಚೆನ್ನೈ ಕಾರ್ಪೊರೇಷನ್ ಮಾಡಿದೆ.
ಈ ಬಗ್ಗೆ ಮಾಹಿತಿ ನೀಡಿರುವ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಎಪಿಡೆಮಿಯಾಲಜಿ ಉಪನಿರ್ದೇಶಕ ಡಾ.ಪ್ರಭದೀಪ್ ಕೌರ್, "ಪ್ರತಿಕಾಯಗಳು ಕೆಲವೇ ತಿಂಗಳುಗಳವರೆಗೆ ದೇಹದಲ್ಲಿ ಇರುತ್ತವೆ ಎಂದು ನಮಗೆ ತಿಳಿದಿದೆ. ಆದ್ದರಿಂದ ಮೊದಲ ಅಲೆಯ ಆರಂಭಿಕ ಭಾಗದಲ್ಲಿ ಸೋಂಕಿಗೆ ಒಳಗಾದ ಜನರು ಈಗ ಎರಡನೇ ಅಲೆಯ ಸಂದರ್ಭದಲ್ಲಿ ಪ್ರತಿಕಾಯಗಳನ್ನು ಹೊಂದಿಲ್ಲದಿರಬಹುದು" ಎಂದು ಹೇಳಿದ್ದಾರೆ.

"ಇದು ಭಾರತದಲ್ಲಿ ಮತ್ತು ಪ್ರಪಂಚದಾದ್ಯಂತದ ಇತರ ಸಮೀಕ್ಷೆಗಳಿಂದ ತಿಳಿದು ಬಂದಿದೆ. ನಾವು ಜನಸಂಖ್ಯೆಯ ಆಧಾರದಲ್ಲಿ ಈ ಸಮೀಕ್ಷೆ ನಡೆಸಿದ ಕಾರಣ ಸೋಂಕಿಗೆ ಒಳಗಾಗಿ ಪ್ರತಿಕಾಯ ಅಭಿವೃದ್ದಿ ಪಟ್ಟಿದೆಯೇ ಅಥವಾ ಲಸಿಕೆ ಹಾಕಿ ಪ್ರತಿಕಾಯ ಅಭಿವೃದ್ದಿ ಪಟ್ಟಿದೆಯೇ ಎಂದು ಹೇಳಲಾಗುವುದಿಲ್ಲ" ಎಂದು ತಿಳಿಸಿದ್ದಾರೆ.
ಪರೀಕ್ಷಿಸಿದ 22,904 ಮಾದರಿಗಳಲ್ಲಿ, 5,316 ಜನರಲ್ಲಿ ಕೊರೊನಾ ವೈರಸ್ ವಿರುದ್ಧ ಐಜಿಜಿ ಪ್ರತಿಕಾಯಗಳು ಕಾಣಿಸಿಕೊಂಡಿದೆ. ಭಾರತೀಯ ಮೂಲದ ಬಿ .1.617.2 (ಡೆಲ್ಟಾ) ಸೇರಿದಂತೆ ವಿವಿಧ ಕೊರೊನಾ ರೂಪಾಂತರಗಳು ತಮಿಳುನಾಡಿನಲ್ಲಿ ಪತ್ತೆಯಾಗಿವೆ ಎಂದು ವರದಿಯಲ್ಲಿ ತಿಳಿಸಲಾಗಿದೆ.
ಸುಮಾರು 756 ಕ್ಲಸ್ಟರ್ಗಳಿಂದ ಸಮೀಕ್ಷೆಗಾಗಿ ಪ್ರತಿ ಕ್ಲಸ್ಟರ್ನ ಹಳ್ಳಿ, ಗ್ರಾಮೀಣ ಪ್ರದೇಶ, ರಸ್ತೆ ಮತ್ತು ನಗರ ಪ್ರದೇಶದಿಂದ ಸುಮಾರು 30 ಮಂದಿಯನ್ನು ಯಾದೃಚ್ಛೀಕವಾಗಿ ಆಯ್ಕೆ ಮಾಡಿ ಪರೀಕ್ಷೆ ನಡೆಸಲಾಗಿದೆ ಎಂದು ವರದಿ ವಿವರಸಿದೆ. ಇನ್ನು ಕಳೆದ ವರ್ಷ ನಡೆಸಿದ ಮೊದಲ ಸಮೀಕ್ಷೆ ಸಂದರ್ಭ 22,690 ರಕ್ತದ ಮಾದರಿಗಳನ್ನು ಸಂಗ್ರಹಿಸಲಾಗಿದ್ದು, ಆ ಪೈಕಿ 6,995 ಮಾದರಿಯಲ್ಲಿ ಪ್ರತಿಕಾಯಗಳು ಕಂಡು ಬಂದಿದೆ.
ಮೊದಲ ಅಲೆ ಸಂದರ್ಭದಲ್ಲಿ ಆಗಸ್ಟ್ 2020 ರ ಗರಿಷ್ಠ ಪ್ರಕರಣಗಳು ವರದಿಯಾದ ನಾಲ್ಕು ವಾರಗಳ ಅವಧಿಯಲ್ಲಿ ಮೊದಲ ಸಮೀಕ್ಷೆಯನ್ನು ಪ್ರಾರಂಭಿಸಲಾಗಿದೆ ಎಂದು ವರದಿ ತಿಳಿಸಿದೆ. ಈ ಸಂದರ್ಭದಲ್ಲಿ ಎರಡನೇ ಅಲೆ ಆರಂಭದ ಸಂದರ್ಭ ಸಮೀಕ್ಷೆ ಆರಂಭಿಸಲಾಗಿದೆ.
(ಒನ್ಇಂಡಿಯಾ ಸುದ್ದಿ)
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications