ನೀಟ್ ವಿರುದ್ಧ 'ಸುಪ್ರೀಂ' ಮೆಟ್ಟಿಲೇರಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ
ಚೆನ್ನೈ, ಸೆಪ್ಟೆಂಬರ್ 1: 'ನೀಟ್' (NEET) ಪರೀಕ್ಷೆ ವಿರುದ್ಧ ಕಾನೂನು ಸಮರ ನಡೆಸುತ್ತಿದ್ದ ತಮಿಳುನಾಡಿನ ವಿದ್ಯಾರ್ಥಿನಿ ಅನಿತಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆಕೆಯ ಆತ್ಮಹತ್ಯೆ ಹಲವರಿಗೆ ಆಘಾತ ತಂದಿದೆ. ತಮಿಳುನಾಡಿನ ಅರಿಯಲೂರು ಮೂಲದ ಅನಿತಾ NEET 2017 ತಮಿಳುನಾಡಿನಲ್ಲಿ ಜಾರಿ ಮಾಡುವುದರ ವಿರುದ್ಧ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು.
ಆಕೆ ಹನ್ನೆರಡನೇ ತರಗತಿ ಪರೀಕ್ಷೆಯಲ್ಲಿ 1200 ಅಂಕಗಳಿಗೆ 1176 ಅಂಕ ಪಡೆದಿದ್ದರು. ಕಾರ್ಮಿಕರೊಬ್ಬರ ಮಗಳಾದ ಅನಿತಾ ತೀರಾ ಬಡ ಕುಟುಂಬದ ಹಿನ್ನೆಲೆಯವರಾಗಿದ್ದರು. ತಮಿಳುನಾಡು ರಾಜ್ಯದ ಪಠ್ಯಕ್ರಮವನ್ನು ವ್ಯಾಸಂಗ ಮಾಡಿದ ವಿದ್ಯಾರ್ಥಿಗಳಿಗೆ ಸಿಬಿಎಸ್ ಇ ಪಠ್ಯಕ್ರಮ ಅನುಸರಿಸಿದ ನೀಟ್ ಪರೀಕ್ಷೆ ಕಷ್ಟವಾಗುತ್ತದೆ ಎಂಬುದು ಅನಿತಾ ಅವರ ವಾದವಾಗಿತ್ತು. ಇದಕ್ಕೆ ಇತರ ವಿದ್ಯಾರ್ಥಿಗಳ ಬೆಂಬಲ ಸಹ ಇತ್ತು.

ವೈದ್ಯಕೀಯ ಸೀಟು ಸಿಗದ ಕಾರಣಕ್ಕೆ ಆತ್ಮಹತ್ಯೆಯಂಥ ನಿರ್ಧಾರ ತೆಗೆದುಕೊಂಡ ಅನಿತಾ ಬಗ್ಗೆ ಅನೇಕರು ಮರುಕ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿಗಳ ಹಿತ ಕಾಪಾಡಲು ತಮಿಳುನಾಡು ಸರಕಾರ ವಿಫಲವಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ. ತಮಿಳುನಾಡು ಸರಕಾರ ನೀಟ್ ಪರೀಕ್ಷೆಯಿಂದ ವಿದ್ಯಾರ್ಥಿಗಳಿಗೆ ವಿನಾಯಿತಿ ಸಿಗುವಂತೆ ಸುಗ್ರೀವಾಜ್ಞೆ ಹೊರಡಿಸಿತ್ತು.
ಆದರೆ, ಅದಕ್ಕೆ ರಾಷ್ಟ್ರಪತಿಗಳ ಅಂಕಿತ ಪಡೆಯುವಲ್ಲಿ ವಿಫಲವಾಗಿತ್ತು. ಈ ಮಧ್ಯೆ ನೀಟ್ ಪರೀಕ್ಷೆಯ ಅಂಕಗಲ ಆಧಾರದಲ್ಲಿಯೇ ಪ್ರವೇಶ ಪ್ರಕ್ರಿಯೆ ಶುರು ಮಾಡುವಂತೆ ಸುಪ್ರೀಂ ಕೋರ್ಟ್ ತಿಳಿಸಿತ್ತು. ಆಗಸ್ಟ್ ಆರಂಭದಲ್ಲಿ ಉತ್ತಮ ಅಂಕ ಪಡೆದವರ ಪಟ್ಟಿ ಬಿಡುಗಡೆ ಮಾಡಿದ ತಮಿಳುನಾಡು ಸರಕಾರ, ಎಂಬಿಬಿಎಸ್ ಹಾಗೂ ಬಿಡಿಎಸ್ ಕೋರ್ಸ್ ಗಳಿಗೆ ಪ್ರವೇಶ ಪ್ರಕ್ರಿಯೆ ಆರಂಭಿಸಿತ್ತು.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ












Click it and Unblock the Notifications