ಸಿವೋಟರ್ ಸಮೀಕ್ಷೆ, ತಮಿಳುನಾಡಿನಲ್ಲಿ ಮತ್ತೆ 'ಅಮ್ಮ' ದರ್ಬಾರ್
ನವದೆಹಲಿ, ಏಪ್ರಿಲ್ 02: ಐದು ರಾಜ್ಯಗಳ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಚುನಾವಣಾ ಪೂರ್ವ ಸಮೀಕ್ಷೆಗಳು ಒಂದೊಂದಾಗಿ ಹೊರ ಬರುತ್ತಿದ್ದು, ಟೈಮ್ಸ್ ನೌ ಟಿವಿ- ಸಿವೋಟರ್ ಸಮೀಕ್ಷೆ ಪ್ರಕಾರ ತಮಿಳುನಾಡಿನಲ್ಲಿ ಮತ್ತೊಮ್ಮೆ ಜಯಲಲಿತಾ ಅವರು ಸರ್ಕಾರ ಸ್ಥಾಪಿಸಲಿದ್ದಾರೆ.
ಇದಲ್ಲದೆ ಪಶ್ಚಿಮ ಬಂಗಾಳದಲ್ಲಿ ಟಿಎಂಸಿಯೇ ಪುನಃ ಅಧಿಕಾರ ಪಡೆಯಲಿದೆ. ತಮಿಳುನಾಡಿನಲ್ಲಿ ಎಐಎಡಿಎಂಕೆ ಮತ್ತೆ ಅಧಿಕಾರಕ್ಕೆ ಬರಲಿದ್ದು, ಜಯಲಲಿತಾ ಸಿಎಂ ಆಗಿ ದಾಖಲೆಯ ಆರನೇ ಬಾರಿಗೆ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಸಮೀಕ್ಷೆ ವರದಿ ಹೇಳಿದೆ. [ಕೇರಳದಲ್ಲಿ ಬಿಜೆಪಿ ಮೈತ್ರಿಕೂಟಕ್ಕೆ 1 ಸ್ಥಾನ]
ಇದೊಂದು ರೀತಿ ಎಐಎಡಿಎಂಕೆಗೂ ಅಚ್ಚರಿ ಮೂಡಿಸುವ ವಿಷಯವಾಗಿದ್ದು, ಪಕ್ಷದ ಸ್ಥಾಪಕ ಎಂಜಿ ರಾಮಚಂದ್ರನ್ ಅವರ ಕಾಲದಿಂದಲೂ ಸತತವಾಗಿ ಅಧಿಕಾರ ಪುನಃ ಸ್ಥಾಪನೆ ಸಾಧ್ಯವಾಗಿರಲಿಲ್ಲ.[ಐದು ರಾಜ್ಯಗಳ ಅಸೆಂಬ್ಲಿ ಚುನಾವಣೆ ದಿನಾಂಕ ಘೋಷಣೆ]

234 ಸದಸ್ಯರನ್ನು ಹೊಂದಿರುವ ತಮಿಳುನಾಡು ಅಸೆಂಬ್ಲಿಯಲ್ಲಿ ಎಐಎಡಿಎಂಕೆ 130ಸ್ಥಾನ ಗಳಿಸಲಿದೆ, ಡಿಎಂಕೆ 70 ಸೀಟು ಪಡೆಯಲಿದೆ. ವಿಜಯ ಕಾಂತ್ ಅವರ ಡಿಎಂಡಿಕೆ ಪೀಪಲ್ ವೆಲ್ ಫೇರ್ ಫ್ರಂಟ್ 14 ಸ್ಥಾನ ಪಡೆಯಲಿದೆ ಎಂದು ಸಮೀಕ್ಷೆ ತಿಳಿಸಿದೆ.[ಪಂಚರಾಜ್ಯಗಳ ಚುನಾವಣೆ: ಹೊರಬಿದ್ದ ಮತ್ತೊಂದು ಸಮೀಕ್ಷೆ]
ಎಐಎಡಿಎಂಕೆ ಮತ ಹಂಚಿಕೆ ಶೇಕಡವಾರು ಶೇ 30ರಷ್ಟು ಸಿಗಲಿದೆ. ಡಿಎಂಕೆ-ಕಾಂಗ್ರೆಸ್ 32%, ಡಿಎಂಡಿಕೆ 8% ಮತ ಪಡೆಯಲಿದೆ. ಬಿಜೆಪಿ ಈ ಬಾರಿಯೂ ಮುಖಭಂಗ ಅನುಭವಿಸಲಿದೆ ಎಂದು ತಿಳಿದು ಬಂದಿದೆ.

2011 ರಲ್ಲಿ ಮತ ಹಂಚಿಕೆ
2011 ರಲ್ಲಿ ಮತ ಹಂಚಿಕೆ
* ಎಡಿಎಂಕೆ : 52%
* ಡಿಎಂಕೆ : 40%
* ಬಿಜೆಪಿ : 2%
* ಇತರೆ: 6%

ಪುದುಚೇರಿಯಲ್ಲಿ ಕಾಂಗ್ರೆಸ್- ಡಿಎಂಕೆ
ಪುದುಚೇರಿಯಲ್ಲಿ ಕಾಂಗ್ರೆಸ್- ಡಿಎಂಕೆ: 30 ಅಸೆಂಬ್ಲಿ ಸ್ಥಾನಗಳ ಪೈಕಿ 17 ಸ್ಥಾನಗಳು ಕಾಂಗ್ರೆಸ್ ಹಾಗೂ ಡಿಎಂಕೆ ಪಲಾಗಲಿದೆ. ಸದ್ಯಕ್ಕೆ ಎಐಎನ್ ಆರ್ ಕಾಂಗ್ರೆಸ್ ಅಧಿಕಾರದಲ್ಲಿದ್ದು, ಮುಂಬರುವ ಚುನಾವಣೆಯಲ್ಲಿ ಕೇವಲ 7 ಸ್ಥಾನ ಪಡೆಯಲಿದೆ.

ಮಾರ್ಚ್ ತಿಂಗಳಿನಲ್ಲಿ ನಡೆಸಿದ ಸಮೀಕ್ಷೆ
ಸಿವೋಟರ್ ಮಾರ್ಚ್ ತಿಂಗಳಿನಲ್ಲಿ ನಡೆಸಿದ ಸಮೀಕ್ಷೆಯಲ್ಲಿ ಎಐಎಡಿಎಂಕೆಗೆ 116 ಸ್ಥಾನ ಲಭಿಸಲಿದೆ ಎನ್ನಲಾಗಿತ್ತು. ಡಿಎಂಕೆಗೆ 101 ಸ್ಥಾನ ಸಿಗುವ ನಿರೀಕ್ಷೆ ಇದೆ ಎಂದು ತಿಳಿದು ಬಂದಿತ್ತು. ಶೇಕಡಾವಾರು ಮತಗಳ ಪೈಕಿ
* ಎಐಎಡಿಎಂಕೆಗೆ 39% from 41% ,
* ಡಿಎಂಕೆ: 32% from 40%,
* ಬಿಜೆಪಿ: 4% from 5%

ಮತಯಂತ್ರದಲ್ಲಿ NOTA (ನೋಟಾ) ಬಟನ್/ಚಿನ್ಹೆ
ತಮಿಳುನಾಡು (234 ಕ್ಷೇತ್ರಗಳು) 5.8 ಕೋಟಿ ಮತದಾರರು
* ಏಪ್ರಿಲ್ 22ರಿಂದ ಚುನಾವಣೆ ಪ್ರಕ್ರಿಯೆ ಆರಂಭ.
* ಮೇ 16, ಸೋಮವಾರದಂದು ಮತದಾನ.
* ಏಪ್ರಿಲ್ 22ರಿಂದ ಚುನಾವಣೆ ಪ್ರಕ್ರಿಯೆ ಆರಂಭ.
* ಮೇ 16, ಸೋಮವಾರದಂದು ಮತದಾನ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications