ಆನ್ಲೈನ್ ಜೂಜು ನಿಷೇಧಕ್ಕೆ ಮುಂದಾದ ತಮಿಳುನಾಡು
ಚೆನ್ನೈ, ನ.6: ದುಡ್ಡು ನೀಡಿ ಆನ್ ಲೈನ್ ಗೇಮ್, ಫ್ಯಾಂಟಸಿ ಲೀಗ್, ಆಪ್ ಆಧಾರಿತ ಗೇಮಿಂಗ್ ನಿಷೇಧಕ್ಕೆ ತಮಿಳುನಾಡು ಸರ್ಕಾರ ಮುಂದಾಗಿದೆ.
ಆನ್ಲೈನ್ ಜೂಜು ಪ್ರಚಾರ ಮಾಡುತ್ತಿರುವ ಈ ಸೆಲೆಬ್ರಿಟಿಗಳಿಂದ ಜನ ಸಾಮಾನ್ಯರಿಗೆ ತೊಂದರೆಯಾಗಿವೆ ಸಾವು ನೋವು ಸಂಭವಿಸಿದೆ ಎಂದು ಸೆಲೆಬ್ರಿಟಿಗಳಿಗೆ ಮದ್ರಾಸ್ ಹೈಕೋರ್ಟ್ ನೋಟಿಸ್ ನೀಡಿರುವ ಸುದ್ದಿ ಗೊತ್ತಿರಬಹುದು.
ದುಡ್ಡು ಕೊಟ್ಟು ಆಡುವಂಥ ಎಲ್ಲಾ ಬಗೆಯ ಆನ್ ಲೈನ್ ಗೇಮಿಂಗ್ ಮೇಲೆ ನಿಷೇಧ ಹೇರಲು ಸರ್ಕಾರ ಅಗತ್ಯ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಕೆ ಪಳನಿಸ್ವಾಮಿ ಅವರು ಕೊಯಮತ್ತೂರಿನಲ್ಲಿ ನಡೆದ ಸಮಾರಂಭವೊಂದರಲ್ಲಿ ಹೇಳಿದರು.

ಆನ್ ಲೈನ್ ರಮ್ಮಿ ಮುಂತಾದ ಆಟದ ಚಟಕ್ಕೆ ಬಿದ್ದು ಅನೇಕ ಮಂದಿ ಹಣ ಕಳೆದುಕೊಂಡಿದ್ದಲ್ಲದೆ, ಕೆಲ ಆತ್ಮಹತ್ಯೆ ಪ್ರಕರಣಗಳು ನಡೆದಿವೆ ಈ ಬಗ್ಗೆ ಸರ್ಕಾರ ಯಾವ ಕ್ರಮ ತೆಗೆದುಕೊಂಡಿದೆ ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ ಸಿಎಂ ಪಳನಿಸ್ವಾಮಿ ಈ ರೀತಿ ಉತ್ತರಿಸಿದರು.
ಶೀಘ್ರದಲ್ಲೇ ಈ ಕುರಿತಂತೆ ಕಾನೂನು ರೂಪಿಸಿ, ಅಗತ್ಯ ಕ್ರಮ ಜರುಗಿಸಲಾಗುತ್ತದೆ. ಇಂಥ ಗೇಮಿಂಗ್, ಬೆಟ್ಟಿಂಗ್ ನಲ್ಲಿ ತೊಡಗಿದವರ ವಿರುದ್ಧ ಕ್ರಿಮಿನಲ್ ಕೇಸ್ ಹಾಕಿ, ಜೈಲಿಗೆ ಹಾಕಲಾಗುವುದು ಎಂದು ಹೇಳಿದರು.
ಇಂಟರ್ನೆಟ್ ಬಳಕೆ ಹೆಚ್ಚಳವಾಗುತ್ತಿದ್ದಂತೆ ಅನೇಕ ಮಂದಿ ಆನ್ ಲೈನ್ ಆಟಗಳಿಗೆ ದಾಸರಾಗುತ್ತಿದ್ದಾರೆ.ಚಟಕ್ಕೆ ಬಿದ್ದು ಹಣ ಕಳೆದುಕೊಳ್ಳುವುದು ಹೆಚ್ಚಾಗುತ್ತಿದೆ ಎಂಬ ವರದಿ ಬಂದಿದೆ. ಈ ಬಗ್ಗೆ ಸರ್ಕಾರ ಸೂಕ್ತ ಕ್ರಮ ಜರುಗಿಸಲಿದೆ ಎಂದು ಹೇಳಿದರು.
ಆಂಧ್ರಪ್ರದೇಶದಲ್ಲಿಆನ್ ಲೈನ್ ಗೇಮಿಂಗ್, ಆನ್ ಲೈನ್ ಬೆಟ್ಟಿಂಗ್ ನಿಷೇಧಿಸಲಾಗಿದೆ. ಈ ಕುರಿತಂತೆ ಕೂಡಲೇ ಕ್ರಮ ಜರುಗಿಸಿದ್ದು, ಕೇಂದ್ರ ಮಾಹಿತಿ ಮತ್ತು ಟೆಲಿಕಾಂ ಸಚಿವ ರವಿ ಶಂಕರ್ ಪ್ರಸಾದ್ ಅವರಿಗೆ ಅಕ್ಟೋಬರ್ 27ರಂದೇ ಪತ್ರ ಬರೆದಿದ್ದು, ಆನ್ ಲೈನ್ ಗೇಮಿಂಗ್ ಹಾವಳಿಯಿಂದ ಅನೇಕ ಸಾಮಾಜಿಕ ಪಿಡುಗು ಆರಂಭವಾಗಿದ್ದು, ಹಣ, ಪ್ರಾಣ ಎಲ್ಲವೂ ಹೋಗಿದೆ. ಬೆಟ್ಟಿಂಗ್ ಯಾವುದೇ ಮಾದರಿಯಾದರೂ ಅದರಿಂದ ನಷ್ಟ ಹೊಂದುವವರೇ ಅಧಿಕ ಎಂದು ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ ಹೇಳಿದ್ದಾರೆ
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications