ಕೊರೊನಾ ವೈದ್ಯಕೀಯ ಅವಶ್ಯಕತೆ ಪೂರೈಸಲು ತಮಿಳುನಾಡು ಸರ್ಕಾರದಿಂದ ಮಹತ್ವದ ಹೆಜ್ಜೆ
ಚೆನ್ನೈ, ಮೇ 18: ಕೊರೊನಾ ವೈರಸ್ ವಿರುದ್ಧದ ಹೋರಾಟಕ್ಕೆ ಲಸಿಕೆ, ಅಮ್ಲಜನಕ ಸೇರಿದಂತೆ ಅವಶ್ಯಕ ವಸ್ತುಗಳ ಕೊರತೆ ಸಾಕಷ್ಟು ಹಿನ್ನಡೆಯನ್ನುಂಟು ಮಾಡಿದೆ. ಹೀಗಾಗಿ ಇವುಗಳನ್ನು ರಾಜ್ಯದಲ್ಲಿಯೇ ಉತ್ಪಾದಿಸುವ ಬಗ್ಗೆ ತಮಿಳುನಾಡು ಸರ್ಕಾರ ಮಹತ್ವದ ಹೆಜ್ಜೆಯಿಟ್ಟಿದೆ.
ಆಕ್ಸಿಜನ್, ಆಕ್ಸಿಜನ್ ಕಾನ್ಸಂಟ್ರೇಟರ್ಸ್, ಕೋವಿಡ್ ಲಸಿಕೆ, ಆಧುನಿಕ ಸಲಕರಣೆಗಳು ಹಾಗೂ ಕೊರೊನಾ ವೈರಸ್ಗೆ ಸಂಬಂಧಿಸಿದ ಇತರೆ ಔಷಧಿಗಳನ್ನು ತಮಿಳುನಾಡಿಲ್ಲಿಯೇ ಉತ್ಪಾದನೆ ಮಾಡಿ ಇವುಗಳ ಕೊರತೆಗೆ ಶಾಶ್ವತ ಪರಿಹಾರವನ್ನು ಕಂಡುಕೊಳ್ಳಲು ಸರ್ಕಾರ ಮುಂದಾಗಿದೆ. ಈ ವಿಚಾರವಾಗಿ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಮಂಗಳವಾರ ನಿರ್ದೇಶನ ನೀಡಿದ್ದಾರೆ. ದೇಶ ಹಾಗೂ ವಿದೇಶಿ ಕಂಪನಿಗಳಿಂದ ತಮಗಿರುವ ಆಸಕ್ತಿಯನ್ನು ಮೇ 31ರ ಒಳಗೆ ವ್ಯಕ್ತಪಡಿಸಲು ಆಹ್ವಾನಿಸಿದೆ.
ಈ ಬಗ್ಗೆ ಸರ್ಕಾರ ಅಧಿಕೃತ ಪ್ರಕಟಣೆಯನ್ನು ಹೊರಡಿಸಿದ್ದು ದೇಶ ವಿದೇಶಗಳಿಂದ ಬರುವ ಕಂಪನಿಗಳ ಆಸಕ್ತಿಯ ಅಭಿಪ್ರಾಯವನ್ನು ಪರಿಶೀಲನೆ ನಡೆಸಲಾಗುತ್ತದೆ ಮತ್ತು ಜೀವರಕ್ಷಕ ಔಷಧಿಗಳು, ಆಮ್ಲಜನಕ ಸ್ಥಾವರ ಸ್ಥಾಪನೆ ಹಾಗೂ ವ್ಯಾಕ್ಸಿನ್ ಉತ್ಪಾದನೆಗೆ ಮೂಲಸೌಕರ್ಯಗಳನ್ನು ಕೈಗೊಳ್ಳುವುದಾಗಿ ತಿಳಿಸಿದೆ.

ಕೈಗಾರಿಕಾ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ತಮಿಳುನಾಡು ಕೈಗಾರಿಕಾ ಅಭಿವೃದ್ಧಿ ನಿಗಮ ಈ ಜೀವ ರಕ್ಷಕ ಔಷಧ ಮತ್ತು ಇತರ ಉಪಕರಣಗಳನ್ನು ಉತ್ಪಾದಿಸಲು ಮುಂದೆ ಬರುವ ಕಂಪನಿಗಳಿಗೆ ಎಲ್ಲಾ ಸಹಾಯವನ್ನು ನೀಡಲಿದೆ. ಕನಿಷ್ಠ 50 ಕೋಟಿ ರೂ. ಹೂಡಿಕೆ ಮಾಡಲು ಸಿದ್ಧವಾಗಿರುವ ಕಂಪನಿಗಳೊಂದಿಗೆ ತಮಿಳುನಾಡು ಕೈಗಾರಿಕಾ ಅಭಿವೃದ್ಧಿ ನಿಗಮ ಜಂಟಿ ಉದ್ಯಮ ಆಧಾರದ ಮೇಲೆ ಉತ್ಪಾದನಾ ಘಟಕಗಳನ್ನು ಸ್ಥಾಪಿಸಲಿದೆ.
-
ಮದ್ಯಪಾನದ ಅಭ್ಯಾಸವನ್ನು ನಿಯಂತ್ರಿಸಲು ಬಯಸುತ್ತೀರಾ? ತಜ್ಞರ ಸರಳ ಸಲಹೆಗಳು ಇಲ್ಲಿವೆ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
ಬೆಂಗಳೂರಿನಲ್ಲಿ ಇಂದು ಶ್ರೀ ಎಂ ಅವರ "ಉಪನಿಷತ್ತುಗಳು ಮತ್ತು ಜೆ.ಕೃಷ್ಣಮೂರ್ತಿ" ಹೊಸ ಕೃತಿ ಬಿಡುಗಡೆ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Duet Songs: ಆಶಾ ಭೋಸ್ಲೆ-ಲತಾ ಮಂಗೇಶ್ಕರ್ ಸಹೋದರಿಯರ ಕಂಠಸಿರಿಯಲ್ಲಿ ಅರಳಿದ ಮಾಧುರ್ಯ: ಒಟ್ಟಿಗೆ ಹಾಡಿದ ಹಿಟ್ ಹಾಡುಗಳಿವು -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
ಎಪಿಎಂಸಿಯಲ್ಲಿ ಮೂಟೆಗಳು ಮೈಮೇಲೆ ಬಿದ್ದರೂ ಪವಾಡಸದೃಶ್ಯದಂತೆ ಬದುಕಿದ ಮಹಿಳೆ Video Viral











Click it and Unblock the Notifications