ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬೆಂಕಿ ನಂದಿಸುವ ವೇಳೆ ಕಟ್ಟಡ ಕುಸಿದು ಇಬ್ಬರು ಅಗ್ನಿಶಾಮಕ ಸಿಬ್ಬಂದಿ ಸಾವು

|
Google Oneindia Kannada News

ಮಧುರೈ,ನವೆಂಬರ್ 14: ಬೆಂಕಿ ನಂದಿಸುವ ವೇಳೆ ಕಟ್ಟಡ ಕುಸಿದು ಬಿದ್ದು ಇಬ್ಬರು ಅಗ್ನಿಶಾಮಕ ಸಿಬ್ಬಂದಿ ಸಾವನ್ನಪ್ಪಿರುವ ಘಟನೆ ಮಧುರೈನಲ್ಲಿ ಶನಿವಾರ ನಡೆದಿದೆ.

ಈ ಕುರಿತು ಪೊಲೀಸರು ಮಾಹಿತಿ ನೀಡಿದ್ದು, ಮಧುರೈನಲ್ಲಿ ಹಳೆಯ ಕಟ್ಟಡವೊಂದರಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿತ್ತು.

ಮುಂಬೈ ಕಟ್ಟಡ ದುರಂತದಲ್ಲಿ 41 ಸಾವು; ತಲೆ ಮರೆಸಿಕೊಂಡ ಮಾಲೀಕಮುಂಬೈ ಕಟ್ಟಡ ದುರಂತದಲ್ಲಿ 41 ಸಾವು; ತಲೆ ಮರೆಸಿಕೊಂಡ ಮಾಲೀಕ

ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ಸಿಬ್ಬಂದಿಗೆ ಬೆಂಕಿಯನ್ನು ನಂದಿಸಲು ಪ್ರಯತ್ನಿಸುತ್ತಿದ್ದಾಗ ಇದ್ದಕ್ಕಿದ್ದಂತೆ ಕಟ್ಟಡ ಕುಸಿದಿದೆ ಎಂದು ತಿಳಿಸಿದ್ದಾರೆ.

Tamil Nadu: Two Firemen Killed In Madurai Building Collapse

ಮೃತ ಅಗ್ನಿ ಶಾಮಕ ಸಿಬ್ಬಂದಿ ಕೆ.ಶಿವರಾಜನ್ ಮತ್ತು ಪಿ ಕೃಷ್ಣಮೂರ್ತಿ ಅವರ ನಿಧನಕ್ಕೆ ಮುಖ್ಯಮಂತ್ರಿ ಪಳನಿಸ್ವಾಮಿ ಅವರು ಸಂತಾಪ ಸೂಚಿಸಿದ್ದು, ಅವರ ಕುಟುಂಬಕ್ಕೆ ತಲಾ 25 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಅಲ್ಲದೆ ಮೃತ ಸಿಬ್ಬಂದಿಯ ಸಂಬಂಧಿಕರೊಬ್ಬರಿಗೆ ಅರ್ಹತೆಯ ಆಧಾರದ ಮೇಲೆ ಸರ್ಕಾರಿ ಕೆಲಸ ನೀಡಲಾಗುವುದು ಎಂದು ಸಿಎಂ ಹೇಳಿದ್ದಾರೆ.

ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಸಿಬ್ಬಂದಿಯನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಇನ್ನಿಬ್ಬರು ಅಗ್ನಿಶಾಮಕ ಸಿಬ್ಬಂದಿ ಗಾಯಗೊಂಡಿದ್ದಾರೆ, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆಯ ವೆಚ್ಚವಾಗಿ 3 ಲಕ್ಷ ರೂ. ನೀಡಿದ್ದಾರೆ.

English summary
Two firemen were killed in a building collapse here on Saturday while trying to put out a fire, police said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X