ಮದುವೆಗೆ ನಿರಾಕರಿಸಿದ್ದಕ್ಕೆ ಶಾಲೆಯಲ್ಲೇ ಟೀಚರ್ ಕತ್ತುಕೊಯ್ದ ದುಷ್ಕರ್ಮಿ
ಚೆನ್ನೈ, ಫೆಬ್ರವರಿ 22: ಮದುವೆಗೆ ನಿರಾಕರಿಸಿದ್ದಕ್ಕೆ ಖಾಸಗಿ ಶಾಲೆಯ ಶಿಕ್ಷಕಿಯನ್ನು ದುಷ್ಕರ್ಮಿಯೊಬ್ಬ ಶಾಲಾ ಕೊಠಡಿಯಲ್ಲಿಯೇ ಕತ್ತು ಕತ್ತರಿಸಿ ಕೊಂದ ಆಘಾತಕಾರಿ ಘಟನೆ ತಮಿಳುನಾಡಿನ ಕಡ್ಡಲೋರ್ ಜಿಲ್ಲೆಯಲ್ಲಿ ಶುಕ್ರವಾರ ನಡೆದಿದೆ.
ವಿರುಧಾಗಿರಿಕುಪ್ಪಂ ಪ್ರದೇಶದವನಾದ ರಾಜಶೇಖರ್ (24) ಎಂಬಾತ ಗಾಯತ್ರಿ ಮೆಟ್ರಿಕ್ಯುಲೇಷನ್ ಶಾಲೆಯಲ್ಲಿ ಶಿಕ್ಷಕಿಯಾಗಿದ್ದ ಎಸ್. ರಮ್ಯಾ ಎಂಬುವವರನ್ನು ಪ್ರೀತಿಸುತ್ತಿದ್ದ. ಆಕೆಯನ್ನು ಕಾಲೇಜು ದಿನಗಳಿಂದ ಬಲ್ಲ ಆತ, ಮದುವೆ ಮಾಡಿಕೊಡುವಂತೆ ರಮ್ಯಾ ಪೋಷಕರಿಗೆ ದುಂಬಾಲು ಬಿದ್ದಿದ್ದ. ಆದರೆ, ಆಕೆಯ ಪೋಷಕರು ನಿರಾಕರಿಸಿದ್ದರು. ಇದರಿಂದ ರಾಜಶೇಖರ್ ಕುಪಿತನಾಗಿದ್ದ ಎನ್ನಲಾಗಿದೆ.
ರಮ್ಯಾ ಶಾಲೆಗೆ ಬೇರೆ ಸಿಬ್ಬಂದಿಗಿಂತಲೂ ಬೇಗನೆ ಬರುತ್ತಿದ್ದರು. ಇದನ್ನು ಅರಿತಿದ್ದ ರಾಜಶೇಖರ್ ಶಾಲೆ ಪ್ರವೇಶಿಸಿದ್ದಾನೆ. ಕೊಠಡಿಯೊಂದರಲ್ಲಿ ಒಂಟಿಯಾಗಿ ಕುಳಿತಿದ್ದ ರಮ್ಯಾ ಜೊತೆ ವಾಗ್ವಾದ ನಡೆಸಿದ್ದಾನೆ. ಬಳಿಕ ಹರಿತವಾದ ಆಯುಧ ತೆಗೆದುಕೊಂಡು ಅವರ ಕತ್ತು ಮತ್ತು ಮುಖ ಕತ್ತರಿಸಿ ಹತ್ಯೆ ಮಾಡಿ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಳಿಗ್ಗೆ 8.30ರ ವೇಳೆಗೆ ಈ ಘಟನೆ ನಡೆದಿದೆ. ಶಾಲೆ ಆರಂಭವಾಗಲು ಸಮಯವಿದ್ದಿದ್ದರಿಂದ ಅಲ್ಲಿ ಸಿಬ್ಬಂದಿ ಕೂಡ ಯಾರೂ ಇರಲಿಲ್ಲ ಎನ್ನಲಾಗಿದೆ.
ಕೊಠಡಿ ಸ್ವಚ್ಛಗೊಳಿಸಲು ಬಂದ ಕೆಲಸದವರಿಗೆ ರಕ್ತದ ಮಡುವಿನಲ್ಲಿ ಬಿದ್ದಿದ್ದ ರಮ್ಯಾ ಅವರ ದೇಹ ಕಂಡುಬಂದಿದೆ. ಕೂಡಲೇ ಅವರು ಶಾಲೆಯ ಮುಖ್ಯಸ್ಥರಿಗೆ ತಿಳಿಸಿದ್ದಾರೆ. ಆರೋಪಿಯ ಪತ್ತೆಗೆ ಹುಡುಕಾಟ ನಡೆಸಲಾಗಿದೆ.
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ












Click it and Unblock the Notifications