ತಮಿಳುನಾಡು: 15 ಲಕ್ಷ ಮೌಲ್ಯದ ಚಿನ್ನವನ್ನು ಎಟಿಎಂ ಡಸ್ಟ್ಬಿನ್ಗೆ ಎಸೆದ ಮಹಿಳೆ
ಚೆನ್ನೈ ಜುಲೈ 6: ಖಿನ್ನತೆ ಮತ್ತು ನಿದ್ದೆಗೆಡುವ ಅಸ್ವಸ್ಥತೆಯಿಂದ ಬಳಲುತ್ತಿದ್ದ 35 ವರ್ಷದ ಮಹಿಳೆಯೊಬ್ಬರು ಸೋಮವಾರ ಕುಂದ್ರತ್ತೂರ್ ಮುರುಗನ್ ಕೊಯಿಲ್ ರಸ್ತೆಯಲ್ಲಿರುವ ಎಟಿಎಂನ ಡಸ್ಟ್ಬಿನ್ಗೆ 15 ಲಕ್ಷ ರೂಪಾಯಿ ಮೌಲ್ಯದ 43 ಚಿನ್ನಾಭರಣಗಳನ್ನು ಎಸೆದಿದ್ದಾರೆ. ಕುಂದ್ರತ್ತೂರು ಪೊಲೀಸರು ಎಟಿಎಂನ ಭದ್ರತಾ ಸಿಬ್ಬಂದಿಗೆ ಅಲರ್ಟ್ ನೀಡಿದ ನಂತರ ಈ ವಿಷಯ ಬೆಳಕಿಗೆ ಬಂದಿದೆ.
ಟೈಮ್ಸ್ ಆಫ್ ಇಂಡಿಯಾದ ವರದಿಯ ಪ್ರಕಾರ, ಭದ್ರತಾ ಸಿಬ್ಬಂದಿ ಡಸ್ಟ್ಬಿನ್ನೊಳಗೆ ಚೀಲವನ್ನು ಗಮನಿಸಿ ಅದನ್ನು ತೆರೆದರು. ಬ್ಯಾಗ್ನೊಳಗೆ ಚಿನ್ನಾಭರಣ ತುಂಬಿದ್ದನ್ನು ಕಂಡು ಬೆಚ್ಚಿಬಿದ್ದಿದ್ದಾರೆ. ಸಿಬ್ಬಂದಿ ತಕ್ಷಣ ಎಟಿಎಂನ ಬ್ಯಾಂಕ್ ಮ್ಯಾನೇಜರ್ಗೆ ಮಾಹಿತಿ ನೀಡಿದ್ದು, ಬ್ಯಾಂಕ್ ಕುಂದ್ರತ್ತೂರು ಠಾಣೆಗೆ ದೂರು ನೀಡಿದ್ದಾರೆ.

ದೂರಿನ ಆಧಾರದ ಮೇಲೆ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಮಹಿಳೆ ಚೀಲವನ್ನು ಎಸೆದಿರುವುದು ಕಂಡುಬಂದಿದೆ. ಸೋಮವಾರ ನಸುಕಿನ ವೇಳೆಯಲ್ಲಿ ತಮ್ಮ 35 ವರ್ಷದ ಮಗಳು ನಿದ್ರಾ ನಡಿಗೆಯ ಅಸ್ವಸ್ಥತೆಯಿಂದ ತಮ್ಮ ಮನೆಯಿಂದ ನಾಪತ್ತೆಯಾಗಿದ್ದಾರೆ ಎಂದು ದಂಪತಿಯಿಂದ ಪೊಲೀಸರು ದೂರನ್ನು ಸ್ವೀಕರಿಸಿದ್ದಾರೆ. ಆದರೆ, ಕೆಲವೇ ಗಂಟೆಗಳಲ್ಲಿ ಮಗಳು ಮನೆಗೆ ಮರಳಿದ್ದಾಳೆ ಎಂದು ದಂಪತಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಆದರೂ, ಪೊಲೀಸರು ತಮ್ಮ ಮಗಳು ಮತ್ತು ಆಭರಣಗಳನ್ನು ಗುರುತಿಸಿದ ದಂಪತಿಗಳಿಗೆ ದೃಶ್ಯಾವಳಿಗಳನ್ನು ತೋರಿಸಿದರು. ಬಳಿಕ ಪೊಲೀಸರು ಚಿನ್ನಾಭರಣವನ್ನು ದಂಪತಿಗೆ ಹಸ್ತಾಂತರಿಸಿದ್ದಾರೆ. ಕುಂದ್ರತ್ತೂರು ಇನ್ಸ್ಪೆಕ್ಟರ್ ಚಂದ್ರು ಅವರು ಭದ್ರತಾ ಸಿಬ್ಬಂದಿಯ ಸಮಯಪ್ರಜ್ಞೆ ಮತ್ತು ಪ್ರಾಮಾಣಿಕತೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸೆಕ್ಯೂರಿಟಿ ಗಾರ್ಡ್ ಸಕಾಲದಲ್ಲಿ ಎಚ್ಚರಿಕೆ ವಹಿಸದಿದ್ದರೆ ಸರಿಯಾದ ಸಮಯಕ್ಕೆ ಚಿನ್ನಾಭರಣ ವಶಪಡಿಸಿಕೊಳ್ಳುತ್ತಿರಲಿಲ್ಲ ಎಂದು ಅವರು ಶ್ಲಾಘಿಸಿದ್ದಾರೆ.
-
Gold Rate March 23: ಚಿನ್ನ - ಬೆಳ್ಳಿ ದರ ಭಾರೀ ಕುಸಿತ: ಒಂದೇ ದಿನದಲ್ಲಿ ಶೇ. 4% ಇಳಿಕೆ, ಬಂಗಾರ ಪ್ರಿಯರಿಗೆ ಸಿಹಿ ಸುದ್ದಿ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications