ಕಾವೇರಿ ಡ್ಯಾಂ: ಸುಪ್ರೀಂ ಮೆಟ್ಟಿಲೇರಿದ ತಮಿಳುನಾಡು
ಚೆನ್ನೈ, ನ. 18: ಮೇಕೆದಾಟು ಪ್ರದೇಶದಲ್ಲಿ ಕಾವೇರಿ ನದಿಗೆ ಕರ್ನಾಟಕ ಸರ್ಕಾರದ ಡ್ಯಾಂ ನಿರ್ಮಾಣ ಯೋಜನೆ ವಿರುದ್ಧ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ನಲ್ಲಿ ಮನವಿ ಸಲ್ಲಿಸಿದೆ. [ಮೇಕೆದಾಟುವಿನಲ್ಲಿ ಕುಡಿಯುವ ನೀರಿಗಾಗಿ ಡ್ಯಾಂ]
ಕರ್ನಾಟಕದ ಸರ್ಕಾರದ ಉದ್ದೇಶಿತ ಯೋಜನೆಯು ಕಾವೇರಿ ಐತೀರ್ಪಿನ ಸ್ಪಷ್ಟ ಉಲ್ಲಂಘನೆಯಾಗಿದೆ. ಆದ್ದರಿಂದ ಉದ್ದೇಶಿತ ಯೋಜನೆ ಕೈಬಿಡಲು ಕರ್ನಾಟಕ ಸರ್ಕಾರಕ್ಕೆ ಆದೇಶಿಸಬೇಕೆಂದು ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ಗೆ ಸಲ್ಲಿಸಿರುವ ಮನವಿಯಲ್ಲಿ ಕೋರಲಾಗಿದೆ.

ಡ್ಯಾಂ ವಿರೋಧಿ ಪ್ರತಿಭಟನೆಗೆ ಪಿಎಂಕೆ ಸಾಥ್
ಡ್ಯಾಂ ಯೋಜನೆಗೆ ತಮಿಳುನಾಡಿನಲ್ಲಿ ವಿರೋಧ ಹೆಚ್ಚುತ್ತಿದೆ. ಯೋಜನೆ ವಿರುದ್ಧ ನ. 22ರಂದು ತಮಿಳುನಾಡಿನ ಕಾವೇರಿ ನದಿ ತೀರದ ಜಿಲ್ಲೆಗಳ ರೈತರು ಹಮ್ಮಿಕೊಂಡಿರುವ ಪ್ರತಿಭಟನೆಯಲ್ಲಿ ಭಾಗವಹಿಸಲು ಪಟ್ಟಳಿ ಮಕ್ಕಳ್ ಕಚ್ಚಿ (ಪಿಎಂಕೆ) ನಿರ್ಧರಿಸಿದೆ. [ಮೇಕೆದಾಟು ಡ್ಯಾಂಗೆ ತಮಿಳುನಾಡು ಅಡ್ಡಗಾಲು]

ಪಿಎಂಕೆ ಪಕ್ಷದ ನದಿ ತೀರದ ಜಿಲ್ಲೆಗಳಾದ ನಾಗಪಟ್ಟಿನಂ, ತಿರುವರುರ್ ಹಾಗೂ ತಂಜಾವೂರ್ ಜಿಲ್ಲೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಲಿದ್ದಾರೆ. ತಮಿಳುನಾಡು ರಾಜ್ಯದ ರಾಜಕೀಯ ಪಕ್ಷಗಳೆಲ್ಲವೂ ಒಂದಾದರೆ ಮಾತ್ರ ಯೋಜನೆಗೆ ತಡೆಯೊಡ್ಡಬಹುದು ಎಂದು ಪಿಎಂಕೆ ಸಂಸ್ಥಾಪಕ ರಾಮದೊಸ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಕರ್ನಾಟಕ ಸರ್ಕಾರವು ಮೇಕೆದಾಟು ಪ್ರದೇಶದಲ್ಲಿ ನಿರ್ಮಿಸಲು ಉದ್ದೇಶಿಸಿರುವ 50 ಟಿಎಂಸಿ ಸಾಮರ್ಥ್ಯದ ಎರಡು ಜಲಾಶಯಗಳಿಂದ ತಮಿಳುನಾಡಿನ ನದಿ ತೀರದ ಜಿಲ್ಲೆಗಳು ಮರುಭೂಮಿಯಾಗಿ ಮಾರ್ಪಡುತ್ತವೆ ಎಂದು ಆರೋಪಿಸಿದ್ದಾರೆ. [ಮೇಕೆದಾಟು ಜಲವಿದ್ಯುತ್ ಯೋಜನೆ ಸ್ಥಗಿತವಿಲ್ಲ]
ರಸ್ತೆ, ರೈಲು ತಡೆ: ನಾಗಪಟ್ಟಿನಂ, ತಿರುವರುರ್ ಹಾಗೂ ತಂಜಾವೂರ್ ಜಿಲ್ಲೆಗಳ ರೈತರು ನ. 22ರಂದು ರೈಲು ತಡೆ ಹಾಗೂ ರಸ್ತೆ ತಡೆ ನಡೆಸಲಿದ್ದು, ಸ್ಥಳೀಯ ಪ್ರದೇಶದಲ್ಲಿ ಸಂಪೂರ್ಣ ಬಂದ್ ಆಚರಿಸಲಾಗುವುದು ಎಂದು ರಾಮದೊಸ್ ತಿಳಿಸಿದ್ದಾರೆ.
ರಾಜ್ಯದ ಮತ್ತೊಂದು ಪ್ರಮುಖ ಪಕ್ಷ ಎಂಡಿಎಂಕೆ ಈಗಾಗಲೇ ಪ್ರತಿಭಟನೆಯಲ್ಲಿ ಭಾಗವಹಿಸಲು ನಿರ್ಧರಿಸಿದೆ. ಎಂಡಿಎಂಕೆ ಹಾಗೂ ಪಿಎಂಕೆ ಎರಡೂ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಎನ್ಡಿಎ ಸರ್ಕಾರದ ಅಂಗಪಕ್ಷಗಳು ಎಂಬುದು ಗಮನಾರ್ಹ ಸಂಗತಿ.
-
ಮಾರ್ಚ್ 19ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಔಷಧಿ ಪೂರೈಸುವ ಕೆಸ್ಎಂಸಿಎಲ್ಗೆ ಐಎಎಸ್ ಅಧಿಕಾರಿ ಮುಖ್ಯಸ್ಥ, ಇ-ಔಷಧಿ ಸಾಫ್ಟವೇರ್ ಜಾರಿ: ದಿನೇಶ್ ಗುಂಡೂರಾವ್ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು












Click it and Unblock the Notifications