ತಮಿಳುನಾಡಿನಲ್ಲಿ ಪೊಂಗಲ್: ಕೊವಿಡ್-19 ಭೀತಿ ನಡುವೆ ಜಲ್ಲಿಕಟ್ಟು ಸ್ಪರ್ಧೆ
ಚೆನ್ನೈ, ಜನವರಿ.14: ತಮಿಳುನಾಡಿನಲ್ಲಿ ಸಾಂಪ್ರಾದಾಯಕ ಹಬ್ಬವನ್ನು ಭರ್ಜರಿಯಾಗಿ ನಡೆಸಲಾಗುತ್ತಿದೆ. ಕರ್ನಾಟಕದಲ್ಲಿ ಸಂಕ್ರಾಂತಿ ಹಬ್ಬವನ್ನೇ ನೆರೆ ರಾಜ್ಯದಲ್ಲಿ ಪೊಂಗಲ್ ಹಬ್ಬವಾಗಿ ಆಚರಿಸಲಾಗುತ್ತದೆ. ಕೊರೊನಾವೈರಸ್ ನಿಬಂಧನೆಗಳ ನಡುವೆ ಮಧುರೈನ ಅವನಿಯಪುರಂನಲ್ಲಿ ಜಲ್ಲಿಕಟ್ಟು ಸ್ಪರ್ಧೆ ಆಯೋಜಿಸಲಾಗಿದೆ.
ಕೊವಿಡ್-19 ಸೋಂಕು ಹರಡುವಿಕೆ ಆತಂಕದ ನಡುವೆ ಅವನಿಯಪುರಂನಲ್ಲಿ ಮಾಸ್ಕ್ ತೊಟ್ಟು ಜಲ್ಲಿಕಟ್ಟು ಸ್ಪರ್ಧೆ ವೀಕ್ಷಿಸುವುದಕ್ಕೆ ನೂರಾರು ಜನರು ಸೇರಿದ್ದಾರೆ. ಕಳೆದ ವರ್ಷ ತಮಿಳುನಾಡು ಸರ್ಕಾರವು ಕೆಲವು ಷರತ್ತುಗಳೊಂದಿಗೆ ಜಲ್ಲಿಕಟ್ಟು ಸ್ಪರ್ಧೆ ನಡೆಸಲು ಅನುಮತಿ ಪಡೆದುಕೊಂಡಿತ್ತು.
ತಮಿಳುನಾಡಿನ ಅವನಿಯಪುರಂನಲ್ಲಿ ಈ ಬಾರಿ ನಡೆಯುತ್ತಿರುವ ಜಲ್ಲಿಕಟ್ಟು ಸ್ಪರ್ಧೆಯಲ್ಲಿ 150ಕ್ಕೂ ಹೆಚ್ಚು ಜನರು ಸೇರುವಂತಿಲ್ಲ ಎಂದು ನಿರ್ಬಂಧಿಸಲಾಗಿದೆ. ಇನ್ನು, ಜಲ್ಲಿಕಟ್ಟು ಸ್ಪರ್ಧೆಯಲ್ಲಿ ಭಾಗವಹಿಸುವುದಕ್ಕೆ ಇದರ ಶೇ.50ರಷ್ಟು ಜನರಿಗೆ ಮಾತ್ರ ಅನುಮತಿ ನೀಡಲಾಗಿದೆ. ಇದರ ಜೊತೆಗೆ ಜಲ್ಲಿಕಟ್ಟು ಸ್ಪರ್ಧೆಗೆ ತೆರಳುವ ಪ್ರತಿಯೊಬ್ಬರು ಕೊವಿಡ್-19 ನೆಗೆಟಿವ್ ವರದಿಯನ್ನು ತೆಗೆದುಕೊಂಡು ಹೋಗುವುದು ಕಡ್ಡಾಯವಾಗಿದೆ.

ಜಲ್ಲಿಕಟ್ಟು ನಿರ್ಬಂಧಿಸಿದ್ದ ಸುಪ್ರೀಂಕೋರ್ಟ್:
ಕಳೆದ 2014ರಲ್ಲಿ ಜಲ್ಲಿಕಟ್ಟು ಸ್ಪರ್ಧೆ ವಿರುದ್ಧ ಭಾರತೀಯ ಪಶು ಸಂರಕ್ಷಣಾ ಮಂಡಳಿ ಮತ್ತು ಪೇಟಾ ಸಂಸ್ಥೆಗಳು ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ತಮಿಳುನಾಡಿನಲ್ಲಿ ಜಲ್ಲಿಕಟ್ಟು ಸ್ಪರ್ಧೆ ಆಯೋಜಿಸುವುದನ್ನು ನಿಷೇಧಿಸಿ ಆದೇಶ ಹೊರಡಿಸಿತ್ತು.
2017ರ ಜನವರಿಯಲ್ಲಿ ಚೆನ್ನೈನಲ್ಲಿ ಜಲ್ಲಿಕಟ್ಟು ಸ್ಪರ್ಧೆ ಪರವಾಗಿ ಹೋರಾಟ ತೀವ್ರಗೊಂಡಿತು. ತಮಿಳುನಾಡಿನ ಪೊಂಗಲ್ ಹಬ್ಬದಲ್ಲಿ ಜಲ್ಲಿಕಟ್ಟು ಒಂದು ಸಾಂಪ್ರಾದಾಯಕ ಕ್ರೀಡೆ ಎಂದು ರಾಜ್ಯ ಸರ್ಕಾರವು ಸುಪ್ರೀಂಕೋರ್ಟ್ ನಲ್ಲಿ ಮನವಿ ಮಾಡಿಕೊಂಡಿತ್ತು. ತದನಂತರ ಜಲ್ಲಿಕಟ್ಟು ಸ್ಪರ್ಧೆ ಆಯೋಜಿಸುವುದಕ್ಕೆ ಕೆಲವು ಷರತ್ತುಗಳೊಂದಿಗೆ ಅನುಮತಿ ನೀಡಿತು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications