ಟೆಕ್ಕಿ ಶುಭಶ್ರೀ ಸಾವು, ಅಕ್ರಮ ಬ್ಯಾನರ್, ಕಮಲ್ ಹಾಸನ್ ಮತ್ತು ಮೋದಿ..!
ಚೆನ್ನೈ, ಅಕ್ಟೋಬರ್ 03: ಚೆನ್ನೈಯಲ್ಲಿ ಅಕ್ರಮ ಬ್ಯಾನರ್ ನಿಂದಾಗಿ ಟೆಕ್ಕಿ ಶುಭಶ್ರೀ ದಾರುಣ ಸಾವು ಕಂಡು ತಿಂಗಳಾಗಿಲ್ಲ. ಆದರೆ ಅಕ್ರಮ ಬ್ಯಾನರ್ ಸಂಸ್ಕೃತಿಯನ್ನು ನಿಷೇಧಿಸಬೇಕೆಂಬ ಸ್ಪಷ್ಟ ಸಂದೇಶ ನೀಡಿದ್ದ ಈ ಘಟನೆಯನ್ನು ಧಿಕ್ಕರಿಸಿ, ತಮಿಳುನಾಡು ಸರ್ಕಾರವೇ ಬ್ಯಾನರ್ ಪರವಾಗಿ ಮದ್ರಾಸ್ ಹೈಕೋರ್ಟ್ ಮೊರೆ ಹೋಗಿದೆ.
ಶುಭಶ್ರೀ ಸಾವು, ಅಕ್ರಮ ಬ್ಯಾನರ್ ಮತ್ತು ತಮಿಳುನಾಡು ಸರ್ಕಾರದ ನಡೆ ಎಲ್ಲವುಗಳ ಕುರಿತು ನಟ ಕಮಲ್ ಹಾಸ್ ಟ್ವೀಟ್ ಮಾಡಿದ್ದು, ಪ್ರಧಾನಿ ನರೇಂದ್ರ ಮೊದಿ ಅವರನ್ನೂ ತರಾಟೆಗೆ ತೆಗೆದುಕೊಂಡಿದ್ದಾರೆ. ಅಷ್ಟಕ್ಕೂ ಶುಭಶ್ರೀ ಸಾವಿಗೂ, ಕಮಲ್ ಹಾಸನ್ ಅವರು ನರೇಂದ್ರ ಮೋದಿ ಅವರನ್ನು ತರಾಟೆಗೆ ತೆಗೆದುಕೊಳ್ಳುವುದಕ್ಕೂ ಏನು ಸಂಬಂಧ...?
ಆಗಿದ್ದಿಷ್ಟೆ, ಪ್ರಧಾನಿ ನರೇಂದ್ರ ಮೋದಿಯವರ ಬ್ಯಾನರ್ ಗಳನ್ನೇ ಚೆನ್ನೈ ಮತ್ತು ಹೊರವಲಯಗಳ ರಸ್ತೆಗಳ ಇಕ್ಕೆಲಗಳಲ್ಲೆ ಹಾಕಲು ತಮಿಳುನಾಡು ಸರ್ಕಾರ ಮದ್ರಾಸ್ ಹೈಕೋರ್ಟಿನ ಅನುಮತಿ ಕೇಳಿರುವುದು ಭಾರೀ ವಿವಾದಕ್ಕೆ ಕಾರಣವಾಗಿದೆ.
ಈ ಕುರಿತು ಟ್ವೀಟ್ ಮಾಡಿರುವ ನಟ ಕಮಲ್ ಹಾಸನ್, ಪ್ರಧಾನಿ ನರೇಂದ್ರ ಮೋದಿ ಮತ್ತು ತಮಿಳುನಾಡು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಪ್ರಧಾನಿಗೆ ಕಮಲ್ ಹಾಸನ್ ತರಾಟೆ
"ಗೌರವಾನ್ವಿತ ಪ್ರಧಾನಿಯವರೇ, ತಮಿಳುನಾಡು ಮತ್ತು ತಮಿಳರು ಶುಭಶ್ರೀ ಸಾವಿನ ನಷ್ಟವನ್ನು ಬ್ಯಾನರ್ ಗಳನ್ನು ಬ್ಯಾನ್ ಮಾಡುವ ಮೂಲಕ ತುಂಬಲಯ ಯತ್ನಿಸುತ್ತಿದ್ದರೆ, ತಮಿಳುನಾಡು ಸರ್ಕಾರ ನಿಮ್ಮ(ನರೇಂದ್ರ ಮೋದಿ) ಬ್ಯಾನರ್ ಗಳನ್ನು ಹಾಕಲು ಮದ್ರಾಸ್ ಸರ್ಕಾರದ ಅನುಮತಿ ಕೇಳುತ್ತಿದೆ" ಎಂದು ವ್ಯಂಗ್ಯವಾಗಿ ಕಮಲ್ ಹಾಸ್ ಟ್ವೀಟ್ ಮಾಡಿದ್ದಾರೆ.

ನೀವೇ ಮೊದಲ ಹೆಜ್ಜೆ ಇಡಿ
"ನೀವು(ನರೇಂದ್ರ ಮೋದಿ) ನಿಜಕ್ಕೂ ಈ ಅಕ್ರ ಬ್ಯಾನರ್ ಗಳನ್ನು ನಿಷೇಧಿಸುವಲ್ಲಿ ಮೊದಲ ಹೆಜ್ಜೆ ಇಟ್ಟರೆ ಅದು ನಿಮಗೆ ತಮಿಳರ ಭಾವನೆಗಳ ಮೇಲಿರುವ ಕಾಳಜಿಯನ್ನು ಪ್ರತಿಬಿಂಬಿಸುತ್ತದೆ. ನಿಮಗೆ ಅತೀ ಹೆಚ್ಚು ಜನಪ್ರಿಯತೆಯನ್ನೂ ಅದು ತಂದುಕೊಡುತ್ತದೆ. ಜೈ ಹಿಂದ್" - ಕಮಲ್ ಹಾಸ್

ಮೋದಿ ಬ್ಯಾನರ್ ಹಾಕುತ್ತಿರೋದ್ಯಾಕೆ?
ಅಕ್ಟೋಬರ್ ಕೊನೆಯಲ್ಲಿ ತಮಿಳುನಾಡಿನ ಮಹಾಬಲಿಪುರಂನಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಚೀನಾ ಅಧ್ಯಕ್ಷ ಗ್ಸೈ ಜಿನ್ಪಿಂಗ್ ಅವರು ಭೇಟಿಯಾಗಲಿದ್ದು, ಆದ್ದರಿಂದ ಮೋದಿ ಮತ್ತು ಜಿನ್ಪಿಂಗ್ ಅವರ ಬ್ಯಾನರ್ ಗಳನ್ನು ಚೆನ್ನೈ ಮತ್ತು ಮಹಾಬಲಿಪುರಂನಲ್ಲಿ ಹಾಕಲು ತಮಿಳುನಾಡು ಸರ್ಕಾರ ಮದ್ರಾಸ್ ಹೈಕೋರ್ಟ್ ನ ಅನುಮತಿ ಕೇಳಿದೆ.

ಟೆಕ್ಕಿ ಶುಭಶ್ರೀ ಧಾರುಣ ಸಾವು
ಸೆಪ್ಟೆಂಬರ್ 12 ರಂದು ಸಂಜೆ ಶುಭಶ್ರೀ ಎಂಬ 23 ವರ್ಷ ವಯಸ್ಸಿನ ಸಾಫ್ಟ್ ವೇರ್ ಇಂಜಿನಿಯರ್ ಆಫೀಸಿನಿಂದ ಮನೆಗೆ ಮರಳುತ್ತಿದ್ದ ವೇಳೆಯಲ್ಲಿ ರಸ್ತೆ ಬದಿಯಲ್ಲಿ ಹಾಕಿದ್ದ ಅಕ್ರಮ ಬ್ಯಾನರ್ ಆಕೆಯ ಮೇಲೆ ಬಿದ್ದು, ಅದೇ ಹೊತ್ತಿಗೆ ಟ್ರಕ್ ವೊಂದು ಆಕೆಯ ಮೇಲೆ ಹರಿದ ಪರಿಣಾಮ ದಾರುಣ ಸಾವು ಕಂಡಿದ್ದರು. ಈ ಘಟನೆಯ ನಂತರ ಮದ್ರಾಸ್ ಹೈಕೋರ್ಟ್ ಬ್ಯಾನರ್ ಸಂಸ್ಕೃತಿಗೆ ನಿರ್ಬಂಧ ಹೇರಿತ್ತು. ಆದರೆ ಈಗ ಸರ್ಕಾರವೇ ಬ್ಯಾನರ್ ಹಾಕಲು ಕೋರ್ಟಿನ ಅನುಮತಿ ಕೇಳುತ್ತಿದೆ.
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ? -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ












Click it and Unblock the Notifications