ನನ್ನನ್ನು ರಾಜಕೀಯವಾಗಿ ಮುಗಿಸುವ ಷಡ್ಯಂತ್ರದ ಭಾಗವೇ ಐಟಿ ದಾಳಿ: ದಿನಕರನ್
ಚೆನ್ನೈ, ನವೆಂಬರ್ 09: "ನನ್ನನ್ನು ರಾಜಕೀಯವಾಗಿ ಮುಗಿಸುವ ಷಡ್ಯಂತ್ರದ ಭಾಗ ಈ ಐಟಿ ದಾಳಿ" ಎಂದು ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ, ಎಐಎಡಿಎಂಕೆಯಿಂದ ಮೂಲೆಗುಂಪಾಗಿರುವ ಟಿಟಿವಿ ದಿನಕರನ್!
ಇಂದು(ನ.09) ಬೆಳಿಗ್ಗೆ ಚೆನ್ನೈನ ಜಯಾ ಟಿವಿ ಕಚೇರಿ ಸೇರಿದಂತೆ 187 ಕಡೆಗಳಲ್ಲಿ ನಡೆದ ಐಟಿ ದಾಳಿಗೆ ಸಂಬಂಧಿಸಿದಂತೆ ಅವರು ಪ್ರತಿಕ್ರಿಯೆ ನೀಡಿದರು.

"ನನ್ನ ಮನೆಯ ಮೇಲೆ ಯಾವುದೇ ದಾಳಿ ನಡೆದಿಲ್ಲ. ಪಾಂಡಿಚೇರಿಯಲ್ಲಿರುವ ನನ್ನ ಪಾರ್ಮ್ ಹೌಸ್ ವೊಂದರಲ್ಲಿ ದಾಳಿ ನಡೆದಿದೆ. ಇವೆಲ್ಲವೂ ನನ್ನನ್ನು ಮತ್ತು ಶಶಿಕಲಾ ನಟರಾಜನ್ ಅವರನ್ನು ರಾಜಕೀಯದಿಂದ ಕಿತ್ತೆಸೆಯುವ ಷಡ್ಯಂತ್ರದ ಭಾಗವಷ್ಟೆ" ಎಂದಿದ್ದಾರೆ.
ಇಂದು ಬೆಳಿಗ್ಗೆ 6 ಗಂಟೆಗೆ ಜಯಾ ಟಿವಿ ಕಚೇರಿ ಸೇರಿದಂತೆ 187 ಕಡೆಗಳಲ್ಲಿ ಐಟಿ ದಾಳಿ ನಡೆದಿದ್ದು, ಶಶಿಕಲಾ ನಟರಾಜನ್ ಅವರ ಒಡೆತನದ ಸ್ಥಳಗಳಲ್ಲೇ ದಾಳಿ ನಡೆದಿದೆ. ಪ್ರಧಾನಿ ನರೇಂದ್ರ ಮೋದಿಯವರು ಡಿಎಂಕೆ ನಾಯಕ ಕರುಣಾನಿಧಿಯವರನ್ನು ಭೇಟಿ ಮಾಡಿದ ಎರಡು ದಿನಗಳ ನಂತರ ನಡೆದ ಈ ಬೆಳವಣಿಗೆ ಸಾಕಷ್ಟು ಊಹಾಪೋಹಗಳಿಗೆ ಎಡೆ ಮಾಡಿಕೊಟ್ಟಿದೆ.
ಅಪನಗದೀಕರಣದ ಮೊದಲ ವರ್ಷವನ್ನು ಕರಾಳ ದಿನವನ್ನಾಗಿ ಆಅಚರಿಸಲು ಸಿದ್ಧವಾಗಿದ್ದ ಡಿಎಂಕೆ ಮೋದಿ ಭೇಟಿಯ ನಂತರ ತನ್ನ ನಿರ್ಧಾರವನ್ನು ಬದಲಿಸಿಕೊಂಡಿತ್ತು. ಈ ಎಲ್ಲ ಹಠಾತ್ ಬೆಳವಣಿಗೆಗಳು ತಮಿಳುನಾಡಿನ ರಾಜಕೀಯದ ಕುರಿತು ಮತ್ತಷ್ಟು ಕುತೂಹಲವನ್ನುಂಟುಮಾಡಿವೆ.
-
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ












Click it and Unblock the Notifications