ಎಷ್ಟೇ ದೊಡ್ಡ ಗುಂಪು ಒಟ್ಟಾಗಿ ಬಂದರೂ ನಾನು ಬಡವರ ಪರ: ಮೋದಿ
ಮದುರೈ (ತಮಿಳುನಾಡು), ಜನವರಿ 27: ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಅವರು ಎಷ್ಟು ದೊಡ್ಡ ಗುಂಪು ರಚನೆ ಮಾಡಿಕೊಂಡರು ಎಂಬುದು ನನಗೆ ಮುಖ್ಯವಲ್ಲ. ನಾನಂತೂ ಬಡವರ ಪರ ನಿಲ್ಲುವುದನ್ನು ಮುಂದುವರಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಇಲ್ಲಿ ಹೇಳಿದ್ದಾರೆ.
ಆಲ್ ಇಂಡಿಯಾ ಇನ್ ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಗೆ ಶಂಕು ಸ್ಥಾಪನೆ ನೆರವೇರಿಸಿದ ನಂತರ ಸಾರ್ವಜನಿಕ ಸಭೆಯಲ್ಲಿ ಮಾತನಾಡಿ, ಭ್ರಷ್ಟಾಚಾರ ಹಾಗೂ ಸ್ವಜನ ಪಕ್ಷಪಾತದಿಂದ ದೇಶವನ್ನು ಆಚೆಗೆ ತರಲು ಕೇಂದ್ರ ಸರಕಾರ ಪರಿಣಾಮಕಾರಿ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದಿದ್ದಾರೆ.
"ಯಾವುದೇ ವ್ಯಕ್ತಿ ದೇಶವನ್ನು ಕೊಳ್ಳೆ ಹೊಡೆದಿದ್ದರೆ ಅಥವಾ ವಂಚನೆ ಮಾಡಿದ್ದರೆ ಅಂಥವರನ್ನು ನ್ಯಾಯದ ಎದುರಿಗೆ ತಂದು ನಿಲ್ಲಿಸುತ್ತೇವೆ. ಅಂಥವರು ಭಾರತದಲ್ಲಿರಲಿ ಅಥವಾ ವಿದೇಶದಲ್ಲಿರಲಿ" ಎಂದು ವಿಜಯ್ ಮಲ್ಯ, ನೀರವ್ ಮೋದಿ ಮತ್ತು ಮೆಹುಲ್ ಚೋಕ್ಸಿ ವಿಚಾರದಲ್ಲಿ ಮಾತನಾಡಿದ್ದಾರೆ.

ಯಾರೆಲ್ಲ ಸರಕಾರದ ಗುತ್ತಿಗೆಯಲ್ಲಿ, ರಕ್ಷಣಾ ವ್ಯವಹಾರಗಳಲ್ಲಿ ಮತ್ತು ಸಮಾಜ ಕಲ್ಯಾಣ ಯೋಜನೆಗಳಲ್ಲಿ ತಾವು ಲಾಭ ಮಾಡಿಕೊಂಡರೋ ಅಂಥವರು ಈಗ ಅದರ ಪರಿಣಾಮ ಎದುರಿಸುತ್ತಿದ್ದಾರೆ. ಆದ್ದರಿಂದ ಅವರೆಲ್ಲ ಒಟ್ಟಾಗಿ ಬಂದಿದ್ದಾರೆ. ಈ ವಾಚ್ ಮನ್ ನನ್ನು ತೊಲಗಿಸಲು ನಾವೆಲ್ಲ ಒಟ್ಟಾಗಬೇಕು ಎಂದು ಬೇರೆಲ್ಲವನ್ನೂ ಪಕ್ಕಕ್ಕಿರಿಸಿ ಹೇಳುತ್ತಿದ್ದಾರೆ ಎಂದು ಮೋದಿ ಹೇಳಿದ್ದಾರೆ.
ಭಯ ಹಾಗೂ ನಕಾರಾತ್ಮಕ ಆಲೋಚನೆಯಿಂದ ದೊಡ್ಡ ಗುಂಪು ಕಟ್ಟಿಕೊಂಡಿದ್ದಾರೆ. ನರೇಂದ್ರ ಮೋದಿ ಬಡವರ ಜತೆಗೆ ಗಟ್ಟಿಯಾಗಿ ನಿಲ್ಲುವುದು ಸತ್ಯ. ಈ ನಕಾರಾತ್ಮಕ ಶಕ್ತಿಗಳ ಗುಂಪನ್ನು ತಿರಸ್ಕರಿಸಿ ಎಂದು ಮದುರೈನ ಜನರು, ತಮಿಳುನಾಡಿನ ಯುವ ಜನರನ್ನು ನಾನು ಮನವಿ ಮಾಡಿಕೊಳ್ಳುತ್ತೇನೆ ಎಂದಿದ್ದಾರೆ.
ಸಮಾಜದ ಎಲ್ಲ ವರ್ಗದ ಜನರಿಗೆ ಉದ್ಯೋಗಾವಕಾಶಗಳು ಹಾಗೂ ಶಿಕ್ಷಣ ಒದಗಿಸಬೇಕು ಎಂಬ ಬದ್ಧತೆ ಕೇಂದ್ರ ಸರಕಾರಕ್ಕೆ ಇದೆ. ಆ ಸಂಕಲ್ಪದಿಂದಲೇ ಸರಕಾರದ ಉದ್ಯೋಗ ಹಾಗೂ ಶಿಕ್ಷಣದಲ್ಲಿ ಶೇಕಡಾ ಹತ್ತರಷ್ಟು ಮೀಸಲಾತಿ ಜಾರಿಗೆ ತರಲಾಗಿದೆ ಎಂದು ಅವರು ಹೇಳಿ, ತಮಿಳುನಾಡಿನಲ್ಲಿ ಕೆಲವರು ತಮ್ಮ ಸ್ವಹಿತಾಸಕ್ತಿಗಾಗಿ ಅನುಮಾನ ಹಾಗೂ ಅಪನಂಬಿಕೆ ಮೂಡಿಸುತ್ತಿದ್ದಾರೆ. ಇದು ದುರದೃಷ್ಟ ಎಂದು ಮೇಲ್ಜಾತಿಯವರಿಗೆ ಮೀಸಲಾತಿ ವಿಚಾರದಲ್ಲಿ ಮಾತನಾಡಿದ್ದಾರೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ












Click it and Unblock the Notifications