ಮೂರು ಬಾರಿ ಸಿಎಂ ಆಗಿದ್ದ ಪನ್ನೀರ್ ಈಗ ಡಿಸಿಎಂ!
ಚೆನ್ನೈ, ಆಗಸ್ಟ್ 14 : ತಮಿಳುನಾಡಿನಲ್ಲಿ ಓ ಪನ್ನೀರ್ ಸೆಲ್ವಂ ಅವರು ಇತಿಹಾಸ ಸೃಷ್ಟಿಸಿದ್ದಾರೆ. 'ಅಮ್ಮ'ನ ಕೃಪಾಕಟಾಕ್ಷದಿಂದ ಮೂರು ಬಾರಿ ಮುಖ್ಯಮಂತ್ರಿ ಹುದ್ದೆ ಅಲಂಕರಿಸಿದ್ದ ಶ್ವೇತವಸ್ತ್ರಧಾರಿ ಪನ್ನೀರ್, ಉಪ ಮುಖ್ಯಮಂತ್ರಿಯಾಗಿ ಕುರ್ಚಿಯನ್ನು ಅಲಂಕರಿಸಿದ್ದಾರೆ.
ಆರು ತಿಂಗಳ ಹಿಂದೆ ಎಐಎಡಿಎಂಕೆ ಇಬ್ಭಾಗವಾದ ನಂತರ ಮುಖ್ಯಮಂತ್ರಿ ಪಟ್ಟಕ್ಕೆ ರಾಜೀನಾಮೆ ಸಲ್ಲಿಸಿದ್ದ 66 ವರ್ಷದ ಪನ್ನೀರ್ ಸೆಲ್ವಂ ಅವರು, ಮುಖ್ಯಮಂತ್ರಿಯಾಗಿರುವ ಕೆ. ಪಳನಿಸ್ವಾಮಿ ಅವರಿಗೆ ಡೆಪ್ಯುಟಿಯಾಗಿ ತಮಿಳುನಾಡಿನಲ್ಲಿ ರಾಜ್ಯಭಾರ ಮಾಡಲಿದ್ದಾರೆ.

ಹಿಂದೆ ಮೂರು ಬಾರಿ ಮುಖ್ಯಮಂತ್ರಿಯಾಗಿದ್ದವರು ಈಗ ಅಧಿಕಾರದ ಆಸೆಯಿಂದಾಗಿ ಕೆಳಭಡ್ತಿ ಪಡೆದುಕೊಂಡು ಉಪ ಮುಖ್ಯಮಂತ್ರಿಯಾಗಿದ್ದಾರೆ ಎಂಬ ಟೀಕಾಸ್ತ್ರಗಳು ಕೇಳಿಬರುತ್ತಿವೆ. ಏನೇ ಆಗಲಿ, ದಿವಂಗತ ಜಯಲಲಿತಾ ಅವರ ಸಮಾಧಿಗೆ ಹೋಗಿ ಆಶೀರ್ವಾದ ಪಡೆದುಕೊಂಡು ಬಂದ ಪನ್ನೀರ್ ಅಮ್ಮನ ಪ್ರೇರಣೆಯಿಂದಲೇ ಉಪ ಮುಖ್ಯಮಂತ್ರಿಯಾಗಿದ್ದೇನೆ ಎಂದು ಹೇಳಿದ್ದಾರೆ.
2001ರಲ್ಲಿ ಜಯಲಲಿತಾ ಅವರು ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಿಲುಕಿ, ಸುಪ್ರೀಂ ಕೋರ್ಟಿನಿಂದ ನಿಷೇಧಕ್ಕೊಳಗಾಗಿದ್ದಾಗ, ಪನ್ನೀರ್ ಸೆಲ್ವಂ ಅವರು ಮೊದಲ ಬಾರಿ ಮುಖ್ಯಮಂತ್ರಿಯಾಗುವ ಸುಯೋಗ ಪಡೆದುಕೊಂಡಿದ್ದರು. ನಂತರ, 2014ರಲ್ಲಿ ಜಯಲಲಿತಾಗೆ ಬೆಂಗಳೂರಿನ ಕೋರ್ಟ್ 4 ವರ್ಷ ಜೈಲು ಶಿಕ್ಷೆ ವಿಧಿಸಿದ್ದಾಗ ಅವರು ಎರಡನೇ ಬಾರಿ ಮುಖ್ಯಮಂತ್ರಿಯಾಗಿದ್ದರು. 2016ರ ಡಿಸೆಂಬರ್ 6ರಂದು ಜಯಲಲಿತಾ ಅವರು ಅಸುನೀಗಿದ ನಂತರ ಪನ್ನೀರ್ ಅವರನ್ನು ಪಟ್ಟದ ಮೇಲೆ ಕೂಡಿಸಲಾಗಿತ್ತು.
ಮೂರು ಬಾರಿಯೂ ಅಲ್ಪಾವಧಿಯ ಮುಖ್ಯಮಂತ್ರಿಯಾಗಿದ್ದ ಪನ್ನೀರ್ ಸೆಲ್ವಂ ಅವರು ಗಟ್ಟಿಗಿತ್ತಿ ಶಶಿಕಲಾ ನಟರಾಜನ್ ವಿರುದ್ಧ ತಿರುಗಿಬಿದ್ದಿದ್ದರು. ನಂತರ ಶಶಿಕಲಾ ನಟರಾಜನ್ ಅವರ ಹಿಂಬಾಲಕ ಪಳನಿಸ್ವಾಮಿ ಜೊತೆ ಕೈಜೋಡಿಸಿದ್ದು, ಎಐಎಡಿಎಂಕೆ ಪಕ್ಷವನ್ನು ಒಗ್ಗೂಡಿಸುವಲ್ಲಿ ಪ್ರಮುಖಪಾತ್ರ ವಹಿಸಿದ್ದಾರೆ. ಉಪ ಮುಖ್ಯಮಂತ್ರಿಯಾಗಿ ಅವರು ಸೋಮವಾರ ಪ್ರಮಾಣವನ್ನೂ ಸ್ವೀಕರಿಸಿದರು.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications