ಅರ್ನಬ್ಗೆ ದಾಳಿ ಬಗ್ಗೆ ಗೌಪ್ಯ ಮಾಹಿತಿ ಸಿಗಲು ಮೋದಿಯೇ ಕಾರಣ; ರಾಹುಲ್ ಗಾಂಧಿ
ಚೆನ್ನೈ, ಜನವರಿ 25: ರಿಪಬ್ಲಿಕ್ ಟಿ.ವಿ. ಮಾಲೀಕ ಅರ್ನಬ್ ಗೋಸ್ವಾಮಿಗೆ ಪುಲ್ವಾಮಾ ದಾಳಿ ಕುರಿತು ಮೊದಲೇ ಮಾಹಿತಿ ಸೋರಿಕೆಯಾಗಲು ಪ್ರಧಾನಿ ನರೇಂದ್ರ ಮೋದಿ ಅವರೇ ಕಾರಣ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಮುಂಬರುವ ತಮಿಳುನಾಡು ವಿಧಾನಸಭೆ ಚುನಾವಣೆಯ ಪ್ರಚಾರದ ಸಲುವಾಗಿ ರಾಹುಲ್ ಗಾಂಧಿ ತಮಿಳುನಾಡಿಗೆ ಮೂರು ದಿನದ ಪ್ರವಾಸದಲ್ಲಿದ್ದಾರೆ.
ತಮ್ಮ ಪ್ರವಾಸದ ಅಂತಿಮ ದಿನವಾದ ಸೋಮವಾರ ರೋಡ್ ಶೋನಲ್ಲಿ ಭಾಗವಹಿಸಿ ಮಾತನಾಡಿದ ಅವರು, "ಪ್ರಧಾನಿ ನರೇಂದ್ರ ಮೋದಿ ಹಾಗೂ ರಕ್ಷಣಾ ಸಚಿವ ಒಳಗೊಂಡಂತೆ ಐವರಿಗೆ ಮಾತ್ರ ದೇಶದ ಸೇನಾ ಯೋಜನೆಗಳ ಕುರಿತು ರಹಸ್ಯ ಮಾಹಿತಿ ಇರುತ್ತದೆ. ಪುಲ್ವಾಮಾ ದಾಳಿ ಕುರಿತು ಈ ಐದು ಜನರಲ್ಲಿ ಮಾತ್ರ ಮಾಹಿತಿ ಇರಬೇಕಿತ್ತು. ಆದರೆ ದಾಳಿ ನಡೆಯುವ ಮೂರು ದಿನಗಳ ಹಿಂದೆಯೇ ಒಬ್ಬ ಪತ್ರಕರ್ತನಿಗೆ ಈ ಮಾಹಿತಿ ಸಿಗುತ್ತದೆ ಎಂದರೆ ಏನರ್ಥ?" ಎಂದು ಪ್ರಶ್ನಿಸಿದ್ದಾರೆ.

"ಪ್ರಧಾನಿ, ರಕ್ಷಣಾ ಸಚಿವ, ರಾಷ್ಟ್ರೀಯ ಭದ್ರತಾ ಸಲಹೆಗಾರ ಹಾಗೂ ವಾಯುಪಡೆಯ ಮುಖ್ಯಸ್ಥ, ಗೃಹ ಸಚಿವರಿಗೆ ಈ ರಹಸ್ಯ ಮಾಹಿತಿ ಇರುತ್ತದೆ. ಇವರ ಹೊರತಾಗಿ ಯಾರಿಗೂ ತಿಳಿಯುವಂತಿಲ್ಲ. ಇಷ್ಟಾದರೂ ಮಾಹಿತಿ ಸೋರಿಕೆಯಾಗಿದೆ. ಆದರೆ ಈ ಬಗ್ಗೆ ಅರ್ನಬ್ ಗೋಸ್ವಾಮಿ ವಿರುದ್ಧ ಏಕೆ ತನಿಖೆ ಆರಂಭಿಸಿಲ್ಲ ಎನ್ನುವುದೇ ದೊಡ್ಡ ಪ್ರಶ್ನೆ. ಇದಕ್ಕೆ ಕಾರಣ, ಈ ಐವರಲ್ಲಿ ಒಬ್ಬರು ಈ ವಿಷಯವನ್ನು ಅರ್ನಬ್ ಗೆ ತಿಳಿಸಿರುವುದು" ಎಂದು ಆರೋಪಿಸಿದ್ದಾರೆ.
ಈ ಬಗ್ಗೆ ಕೂಡಲೇ ತನಿಖೆ ಆರಂಭಿಸಲಿ, ಈ ಐವರಲ್ಲಿ ಯಾರು ಈ ರಹಸ್ಯ ಮಾಹಿತಿಯನ್ನು ಸೋರಿಕೆ ಮಾಡಿದರು ಎಂಬುದೂ ಹೊರಬರಲಿ ಎಂದು ಆಗ್ರಹಿಸಿದರು.
ಈಚೆಗೆ ರಿಪಬ್ಲಿಕ್ ಟಿ.ವಿ. ಮಾಲೀಕ ಅರ್ನಬ್ ಗೋಸ್ವಾಮಿ ಹಾಗೂ ಬಾರ್ಕ್ ಮಾಜಿ ಸಿಇಒ ಪಾರ್ಥೋ ದಾಸ್ ಗುಪ್ತಾ ಅವರ ನಡುವಿನ ವಾಟ್ಸಾಪ್ ಚಾಟ್ ಸೋರಿಕೆಯಾಗಿದ್ದು, ಅದರಲ್ಲಿ ವೈಮಾನಿಕ ದಾಳಿ ಮಾದರಿಯ ದೊಡ್ಡ ದಾಳಿ ನಡೆಯಬಹುದು ಎಂದು ಅರ್ನಬ್ ಉಲ್ಲೇಖಿಸಿದ್ದರು.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications