ತಮಿಳುನಾಡು ಲಾಕ್ ಡೌನ್: ಫೆಬ್ರವರಿ.25ರವರೆಗೂ ಏನಿರುತ್ತೆ ಏನಿರಲ್ಲ?
ಚೆನ್ನೈ, ಜನವರಿ.31: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಿನ್ನೆಲೆ ತಮಿಳುನಾಡಿನಲ್ಲಿ ಲಾಕ್ ಡೌನ್ ಅವಧಿಯನ್ನು ಫೆಬ್ರವರಿ.28ರವರೆಗೂ ವಿಸ್ತರಿಸಲಾಗುವುದು ಎಂದು ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಘೋಷಿಸಿದ್ದಾರೆ.
Recommended Video
ತಮಿಳುನಾಡಿನಲ್ಲಿ ಇದುವರೆಗೂ 8,87,720 ಕೊವಿಡ್-19 ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ಮಹಾಮಾರಿಗೆ ಒಟ್ಟು 7153 ಜನರು ಪ್ರಾಣ ಬಿಟ್ಟಿದ್ದು, ಸೋಂಕಿಗೆ ಚಿಕಿತ್ಸೆ ಪಡೆದ 8,79,278 ಜನರು ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ 1289 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ರಾಜ್ಯವನ್ನು ಕೊರೊನಾವೈರಸ್ ಸೋಂಕುಮುಕ್ತಗೊಳಿಸುವ ನಿಟ್ಟಿನಲ್ಲಿ ಫೆಬ್ರವರಿ.28ರವರೆಗೂ ಲಾಕ್ ಡೌನ್ ವಿಸ್ತರಿಸಲಾಗಿದೆ. ಈ ಅವಧಿಯಲ್ಲಿ ಕೆಲ ನಿಯಮಗಳು ಸಡಿಲಗೊಳಿಸಲಾಗಿದ್ದು, ಶಾಲೆ-ಕಾಲೇಜು ಮತ್ತು ಸಿನಿಮಾ ಮಂದಿರಗಳಲ್ಲಿ ಶೇ.100ರಷ್ಟು ಜನರಿಗೆ ಅವಕಾಶ ನೀಡಲಾಗಿದೆ. ತಮಿಳುನಾಡಿನಲ್ಲಿ ಮುಂದಿನ ಒಂದು ತಿಂಗಳಿನಲ್ಲಿ ಯಾವೆಲ್ಲ ವಲಯಗಳಿಗೆ ಸಂಪೂರ್ಣ ಅನುಮತಿಯಿದೆ. ಯಾವುದಕ್ಕೆಲ್ಲ ನಿರ್ಬಂಧ ಮುಂದುವರಿಸಲಾಗಿದೆ ಎನ್ನುವುದರ ಕುರಿತು ಒಂದು ವರದಿ ಇಲ್ಲಿದೆ ನೋಡಿ.

ತಮಿಳುನಾಡು ಲಾಕ್ ಡೌನ್ ಪ್ರಮುಖ ಅಂಶಗಳು:
- 9 ಮತ್ತು 11ನೇ ತರಗತಿಗಳ ವಿದ್ಯಾರ್ಥಿಗಳಿಗೆ ಹಾಗೂ ಫೆಬ್ರವರಿ. 8ರಿಂದ ಪದವಿಪೂರ್ವ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳ ತರಗತಿ ಪುನರಾರಂಭ.
- ಫೆಬ್ರವರಿ.1ರಿಂದ ಚಿತ್ರಮಂದಿರಗಳಲ್ಲಿ ಶೇ.100ರಷ್ಟು ಜನರಿಗೆ ಅವಕಾಶ
- ರಾಮೇಶ್ವರ ನದಿಯಲ್ಲಿ ಪುಣ್ಯಸ್ನಾನ ಮಾಡುವುದಕ್ಕೆ ಭಕ್ತರಿಗೆ ಅನುಮತಿ
- ದಿನದ 24 ಗಂಟೆಗಳ ಕಾಲ ಪೆಟ್ರೋಲ್ ಬಂಕ್ ಗಳನ್ನು ತೆರೆಯುವುದಕ್ಕೆ ಅವಕಾಶ
- ಈಜುಕೊಳ ಮತ್ತು ಎಕ್ಸಿಬಿಷನ್ ಗಳನ್ನು ಪುನಾರಂಭಿಸುವುದಕ್ಕೆ ಅನುಮತಿ
- ಸಾಮಾಜಿಕ, ರಾಜಕೀಯ, ಮನರಂಜನಾ ಮತ್ತು ಕ್ರೀಡಾ ಕಾರ್ಯಕ್ರಮಗಳಲ್ಲಿ ಶೇ.50ರಷ್ಟು ಜನರು ಸೇರುವುದಕ್ಕೆ ಅವಕಾಶ ನೀಡಲಾಗಿದೆ
ತಮಿಳುನಾಡಿನಲ್ಲಿ ಯಾವುದಕ್ಕೆಲ್ಲ ನಿರ್ಬಂಧ?:
- ಅಂತಾರಾಷ್ಟ್ರೀಯ ವಿಮಾನಗಳ ಸಂಚಾರಕ್ಕೆ ನಿರ್ಬಂಧ ಮುಂದುವರಿಕೆ (ಕೇಂದ್ರ ಸರ್ಕಾರ ಅನುಮತಿ ನೀಡಿರುವ ವಿಮಾನಗಳ ಸಂಚಾರವನ್ನು ಹೊರತುಪಡಿಸಿ)
- ರಾಜ್ಯದಲ್ಲಿ ಅತಿಹೆಚ್ಚು ಕೊವಿಡ್-19 ಪ್ರಕರಣಗಳಿರುವ ಕಂಟೇನ್ಮೆಂಟ್ ಝೋನ್ ಗಳಲ್ಲಿ ನಿರ್ಬಂಧಗಳು ಮುಂದುವರಿಯಲಿವೆ
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications