ಜಯಲಲಿತಾ ಅವರ ಸ್ಥಿತಿ ಗಂಭೀರ: ಅಪೋಲೋ ಆಸ್ಪತ್ರೆ
ಜಯಲಲಿತಾ ಅವರ ಸ್ಥಿತಿ ಗಂಭೀರವಾಗಿದ್ದು, ಕೃತಕ ಉಸಿರಾಟ ಸಾಧನದ ನೆರವಿನಿಂದ ಚಿಕಿತ್ಸೆ ಮುಂದುವರೆಸಲಾಗಿದೆ ಎಂದು ಅಪೋಲೋ ಆಸ್ಪತ್ರೆ ವಕ್ತಾರರು ಹೇಳಿದ್ದಾರೆ.
ಚೆನ್ನೈ, ಡಿಸೆಂಬರ್ 05: ತಮಿಳುನಾಡಿನ ಮುಖ್ಯಮಂತ್ರಿ ಜೆ ಜಯಲಲಿತಾ ಅವರ ಆರೋಗ್ಯದ ಬಗ್ಗೆ ಅಪೋಲೋ ಆಸ್ಪತ್ರೆ ಸೋಮವಾರ ಮಧ್ಯಾಹ್ನ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ.
ಜಯಲಲಿತಾ ಅವರ ಸ್ಥಿತಿ ಗಂಭೀರವಾಗಿದ್ದು, ಕೃತಕ ಉಸಿರಾಟ ಸಾಧನದ ನೆರವಿನಿಂದ ಚಿಕಿತ್ಸೆ ಮುಂದುವರೆಸಲಾಗಿದೆ ಎಂದು ಅಪೋಲೋ ಆಸ್ಪತ್ರೆ ವಕ್ತಾರರು ಹೇಳಿದ್ದಾರೆ.

ಕಳೆದ 74 ದಿನಗಳಿಂದ ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತಮಿಳುನಾಡು ಸಿಎಂ ಜಯಲಲಿತಾ ಅವರಿಗೆ ಭಾನುವಾರ ಸಂಜೆ ಹೃದಯಾಘಾತವಾಗಿದ್ದು, ಐಸಿಯುನಲ್ಲಿ ತಜ್ಞ ವೈದ್ಯರು ಆರೈಕೆ ಮಾಡುತ್ತಿದ್ದಾರೆ, ಕೃತಕ ಉಸಿರಾಟಕ್ಕೆ ವ್ಯವಸ್ಥೆ ಮಾಡಲಾಗಿದೆ.[ಜಯಾ ಹೃದಯ ಲಬ್ ಡಬ್ ಎನ್ನಲು ಕೃತಕ ಸಾಧನ ಬಳಕೆ]
The Honourable Chief Minister of Tamil Nadu who suffered a cardiac arrest yesterday evening, continues to be very critical. #GodblessAmma
— Apollo Hospitals (@HospitalsApollo) December 5, 2016
ಜತೆಗೆ ECMO ಹಾಗೂ ಇನ್ನಿತರ ಜೀವ ಸಂರಕ್ಷಕ ವ್ಯವಸ್ಥೆ ಕಲ್ಪಿಸಲಾಗಿದೆ. ಲಂಡನ್ನಿನ ವೈದ್ಯ ರಿಚರ್ಡ್ ಹಾಗೂ ಏಮ್ಸ್ ವೈದ್ಯರ ಜತೆ ಸಮಾಲೋಚನೆ ನಡೆಸಲಾಗುತ್ತಿದೆ.
She is on ECMO and other life support systems. The Honourable Chief Minister is being treated and closely monitored by a team of experts.
— Apollo Hospitals (@HospitalsApollo) December 5, 2016
ದೆಹಲಿಯ ಏಮ್ಸ್ ನಿಂದ ನಾಲ್ಕು ಮಂದಿ ತಜ್ಞ ವೈದ್ಯರ ತಂಡ ನಿರಂತರವಾಗಿ ಅಪೋಲೋ ಆಸ್ಪತ್ರೆ ಜತೆ ಸಂಪರ್ಕದಲ್ಲಿದೆ ಎಂದು ಡಾ. ಪ್ರತಾಪ್ ರೆಡ್ಡಿ ಹೇಳಿದ್ದಾರೆ.[ಜಯಾ LIVE : ಮತ್ತೊಂದು ಶಸ್ತ್ರಚಿಕಿತ್ಸೆ ಬಲು ಕಷ್ಟ ಅಂತಿದ್ದಾರೆ ವೈದ್ಯರು]
ಜಯಲಲಿತಾ ಅವರಿಗೆ ಭಾನುವಾರ ಸಂಜೆ ಹೃದಯಾಘಾತವಾದ ಬಳಿಕ ರಾತ್ರಿಯೇ ಆಂಜಿಯೋಪ್ಲಾಸ್ಟಿ ಸರ್ಜರಿ ಮಾಡಲಾಗಿದೆ.68 ವರ್ಷ ವಯಸ್ಸಿನ ಜಯಲಲಿತಾ ಅವರ ಹೃದಯ ಬಡಿತ ಸುಸ್ಥಿತಿಯಲ್ಲಿಡಲು extracorporeal membrane ಸಾಧಕವನ್ನು ಬಳಸಲಾಗಿದೆ.
Despite our best efforts, our beloved CM remains in a grave situation. #GodblessAmma
— Apollo Hospitals (@HospitalsApollo) December 5, 2016
ಸೋಮವಾರದಂದು ECMO ಇನ್ನಿತರ ಜೀವ ಸಂರಕ್ಷಕ ಸಾಧನಗಳನ್ನು ಉಪಯೋಗಿಸಿ, ಹೃದಯ ಹಾಗೂ ಶ್ವಾಸಕೋಶ ಸಮಸ್ಥಿತಿಯಲ್ಲಿ ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳಲಾಗುತ್ತಿದೆ ಎಂದು ಅಪೋಲೋ ಆಸ್ಪತ್ರೆ ವೈದ್ಯರು ಹೇಳಿದ್ದಾರೆ ಎಂದು ಎಐಎಡಿಎಂಕೆ ವಕ್ತಾರೆ ಸರಸ್ವತಿ ಸ್ಪಷ್ಟಪಡಿಸಿದ್ದಾರೆ. [ಮಾರಕ ಶನಿ ತೊಂದರೆಯಿಂದ 'ಅಮ್ಮ' ತಪ್ಪಿಸಿಕೊಳ್ಳೋದು ಕಷ್ಟಕಷ್ಟ!]
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications