ನಟ ಶರತ್ ಕುಮಾರ್ ಅವರ ಎಐಎಸ್ಎಂಕೆ ಪಕ್ಷದೊಂದಿಗೆ ಕಮಲ್ ಹಾಸನ್ ಮೈತ್ರಿ
ಚೆನ್ನೈ, ಮಾರ್ಚ್ 04: ತಮಿಳುನಾಡಿನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಸಂಭಾವ್ಯ ಮೈತ್ರಿಗಾಗಿ 'ಸಮಾನ ಮನಸ್ಕ' ಪಕ್ಷಗಳೊಂದಿಗೆ ಮಾತುಕತೆ ನಡೆಸಲಾಗುತ್ತಿದೆ ಎಂದು ಹಿರಿಯ ನಟ ಹಾಗೂ ಮಕ್ಕಳ್ ನೀಧಿ ಮೈಯಂ ಪಕ್ಷದ ಸಂಸ್ಥಾಪಕ ಕಮಲ್ ಹಾಸನ್ ಹೇಳಿದ್ದಾರೆ.
ಏಪ್ರಿಲ್ 6 ರಂದು ನಡೆಯುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ರಾಜ್ಯದ ಹಿತವನ್ನು ಬಯಸುವ ಒಳ್ಳೆಯ ಜನರ ಪಕ್ಷಗಳೊಂದಿಗೆ ಮೈತ್ರಿಗಾಗಿ ಎಂಎನ್ಎಂ ಸಿದ್ಧವಿದೆ. ಇದಕ್ಕಾಗಿ ಸಾಕಷ್ಟು ಪಕ್ಷಗಳ ಜತೆ ಮಾತುಕತೆಯೂ ನಡೆದಿದೆ, ಈಗಾಗಲೇ ಶರತ್ ಕುಮಾರ್ ಅವರ ಎಐಎಸ್ಎಂಕೆ ಪಕ್ಷದೊಂದಿಗೆ ಯಶಸ್ವಿ ಮಾತುಕತೆ ಅಂತ್ಯಗೊಂಡಿದೆ.
ಈಗ ಆ ಪಕ್ಷದೊಂದಿಗೆ ಟಿಕೆಟ್ ಹಂಚಿಕೆ ಕುರಿತು ಮಾತುಕತೆ ನಡೆಯುತ್ತಿದೆ ಎಂದು ಕಮಲ್ ಹಾಸನ್ ಸ್ಪಷ್ಟಪಡಿಸಿದ್ದಾರೆ. ಈ ವಿಚಾರವನ್ನು ಶರತ್ ಕುಮಾರ್ ಕೂಡಾ ಖಾತರಿಪಡಿಸಿದ್ದಾರೆ.

ಹಾಗೆಯೇ ನಮ್ಮ ಮೈತ್ರಿಕೂಟಕ್ಕೆ ಕಮಲ್ ಹಾಸನ್ ಮುಖ್ಯಮಂತ್ರಿ ಅಭ್ಯರ್ಥಿಯಾಗಿರಲಿದ್ದಾರೆ ಎಂದು ಕೂಡಾ ತಿಳಿಸಿದ್ದಾರೆ. ಇನ್ನೊಂದೆಡೆ ಎಂಎನ್ಎಂಗೆ ಮಾಜಿ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ ಅವರ ವೈಜ್ಞಾನಿಕ ಸಲಹೆಗಾರ ವಿ ಪೊನ್ರಾಜ್ ಸೇರ್ಪಡೆಯಾಗಿದ್ದಾರೆ. ಅವರು ಪಕ್ಷದ ಉಪಾಧ್ಯಕ್ಷರಾಗಿರಲಿದ್ದಾರೆ ಎಂದು ಕಮಲ್ ಹಾಸನ್ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿರುವ ಹಾಸನ್, ತಮಿಳರು ಮಾರಾಟಕ್ಕಿಲ್ಲ, ತಮಿಳುನಾಡು ಯುವಕರಿಗೆ ಉದ್ಯೋಗ ನೀಡುವಲ್ಲಿ ಸರ್ಕಾರ ವಿಫಲವಾಗಿದೆ. ಬಿಜೆಪಿ ಹಾಗೂ ಎಐಡಿಎಂಕೆಯ ವೈಫಲ್ಯವೇ ಚುನಾವಣೆಯ ಪ್ರಮುಖ ವಿಷಯವಾಗಿರಲಿದೆ ಎಂದು ತಿಳಿಸಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications