ನಟ ಶರತ್ ಕುಮಾರ್ ಅವರ ಎಐಎಸ್ಎಂಕೆ ಪಕ್ಷದೊಂದಿಗೆ ಕಮಲ್ ಹಾಸನ್ ಮೈತ್ರಿ
ಚೆನ್ನೈ, ಮಾರ್ಚ್ 04: ತಮಿಳುನಾಡಿನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಸಂಭಾವ್ಯ ಮೈತ್ರಿಗಾಗಿ 'ಸಮಾನ ಮನಸ್ಕ' ಪಕ್ಷಗಳೊಂದಿಗೆ ಮಾತುಕತೆ ನಡೆಸಲಾಗುತ್ತಿದೆ ಎಂದು ಹಿರಿಯ ನಟ ಹಾಗೂ ಮಕ್ಕಳ್ ನೀಧಿ ಮೈಯಂ ಪಕ್ಷದ ಸಂಸ್ಥಾಪಕ ಕಮಲ್ ಹಾಸನ್ ಹೇಳಿದ್ದಾರೆ.
ಏಪ್ರಿಲ್ 6 ರಂದು ನಡೆಯುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ರಾಜ್ಯದ ಹಿತವನ್ನು ಬಯಸುವ ಒಳ್ಳೆಯ ಜನರ ಪಕ್ಷಗಳೊಂದಿಗೆ ಮೈತ್ರಿಗಾಗಿ ಎಂಎನ್ಎಂ ಸಿದ್ಧವಿದೆ. ಇದಕ್ಕಾಗಿ ಸಾಕಷ್ಟು ಪಕ್ಷಗಳ ಜತೆ ಮಾತುಕತೆಯೂ ನಡೆದಿದೆ, ಈಗಾಗಲೇ ಶರತ್ ಕುಮಾರ್ ಅವರ ಎಐಎಸ್ಎಂಕೆ ಪಕ್ಷದೊಂದಿಗೆ ಯಶಸ್ವಿ ಮಾತುಕತೆ ಅಂತ್ಯಗೊಂಡಿದೆ.
ಈಗ ಆ ಪಕ್ಷದೊಂದಿಗೆ ಟಿಕೆಟ್ ಹಂಚಿಕೆ ಕುರಿತು ಮಾತುಕತೆ ನಡೆಯುತ್ತಿದೆ ಎಂದು ಕಮಲ್ ಹಾಸನ್ ಸ್ಪಷ್ಟಪಡಿಸಿದ್ದಾರೆ. ಈ ವಿಚಾರವನ್ನು ಶರತ್ ಕುಮಾರ್ ಕೂಡಾ ಖಾತರಿಪಡಿಸಿದ್ದಾರೆ.

ಹಾಗೆಯೇ ನಮ್ಮ ಮೈತ್ರಿಕೂಟಕ್ಕೆ ಕಮಲ್ ಹಾಸನ್ ಮುಖ್ಯಮಂತ್ರಿ ಅಭ್ಯರ್ಥಿಯಾಗಿರಲಿದ್ದಾರೆ ಎಂದು ಕೂಡಾ ತಿಳಿಸಿದ್ದಾರೆ. ಇನ್ನೊಂದೆಡೆ ಎಂಎನ್ಎಂಗೆ ಮಾಜಿ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ ಅವರ ವೈಜ್ಞಾನಿಕ ಸಲಹೆಗಾರ ವಿ ಪೊನ್ರಾಜ್ ಸೇರ್ಪಡೆಯಾಗಿದ್ದಾರೆ. ಅವರು ಪಕ್ಷದ ಉಪಾಧ್ಯಕ್ಷರಾಗಿರಲಿದ್ದಾರೆ ಎಂದು ಕಮಲ್ ಹಾಸನ್ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿರುವ ಹಾಸನ್, ತಮಿಳರು ಮಾರಾಟಕ್ಕಿಲ್ಲ, ತಮಿಳುನಾಡು ಯುವಕರಿಗೆ ಉದ್ಯೋಗ ನೀಡುವಲ್ಲಿ ಸರ್ಕಾರ ವಿಫಲವಾಗಿದೆ. ಬಿಜೆಪಿ ಹಾಗೂ ಎಐಡಿಎಂಕೆಯ ವೈಫಲ್ಯವೇ ಚುನಾವಣೆಯ ಪ್ರಮುಖ ವಿಷಯವಾಗಿರಲಿದೆ ಎಂದು ತಿಳಿಸಿದ್ದಾರೆ.
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
Prem: ಆಗ ಅಪ್ಪಾಜಿ-ಅಂಬರೀಷಣ್ಣ ಇದ್ರು, ಈಗ ಯಾರಿದ್ದಾರೆ; ಕೆಡಿ ವಿವಾದ ಆದಾಗಲೂ ಯಾರೂ ಸಪೋರ್ಟ್ಗೆ ಬರಲಿಲ್ಲ: ಪ್ರೇಮ್ ಬೇಸರ












Click it and Unblock the Notifications