ಕೇಂದ್ರಕ್ಕೆ ಯಾವುದೇ ಪತ್ರ ಕಳುಹಿಸಿಲ್ಲ: ತ.ನಾಡು ರಾಜ್ಯಪಾಲರ ಸ್ಪಷ್ಟನೆ
ಶಶಿಕಲಾ ನಟರಾಜನ್ ಅವರಿಗೆ ತಮಿಳುನಾಡಿನಲ್ಲಿ ಸರಕಾರ ರಚಿಸಲು ಅವಕಾಶ ನೀಡುವುದು ಸಾಧ್ಯವಿಲ್ಲ ಎಂದು ವಿದ್ಯಾಸಾಗರ್ ಪತ್ರ ಬರೆದಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಅಂಥ ಯಾವುದೇ ಪತ್ರ ಬರೆದಿಲ್ಲ ಎಂದು ರಾಜಭವನದಿಂದಲೇ ಸ್ಪಷ್ಟನೆ ನೀಡಲಾಗಿದೆ
ಚೆನ್ನೈ, ಫೆಬ್ರವರಿ 11: ತಮಿಳುನಾಡಿನ ರಾಜ್ಯಪಾಲ ವಿದ್ಯಾಸಾಗರ್ ರಾವ್ ಕೇಂದ್ರಕ್ಕೆ ವರದಿ ಸಲ್ಲಿಸಿದ್ದಾರೆ, ಶಶಿಕಲಾ ನಟರಾಜನ್ ಅವರನ್ನು ಸರಕಾರ ರಚಿಸಲು ಆಹ್ವಾನಿಸಲು ಸಾಧ್ಯವಿಲ್ಲ ಎಂದಿದ್ದಾರೆ ಎಂಬೆಲ್ಲ ಸುದ್ದಿ ಹರಿದಾಡಿತ್ತು. ಆ ರೀತಿಯ ಯಾವ ವರದಿಯನ್ನೂ ರಾಜ್ಯಪಾಲರು ಕೇಂದ್ರಕ್ಕೆ ಸಲ್ಲಿಸಿಲ್ಲ ಎಂದು ತಮಿಳುನಾಡಿನ ರಾಜಭವನದಿಂದಲೇ ಪತ್ರಿಕಾ ಪ್ರಕಟಣೆ ನೀಡಲಾಗಿದೆ.
ಅಕ್ರಮ ಆಸ್ತಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನ ತೀರ್ಪು ಬರಬೇಕಾಗಿದೆ. ಆ ಪ್ರಕರಣದಲ್ಲಿ ಶಶಿಕಲಾ ನಟರಾಜನ್ ಅವರು ಕೂಡ ಆರೋಪಿಯಾಗಿದ್ದು, ತೀರ್ಪು ಬರುವವರೆಗೆ ಸರಕಾರ ರಚಿಸಲು ಆಹ್ವಾನ ನೀಡುವುದು ಬೇಡ ಎಂದು ರಾಜ್ಯಪಾಲರು ತೀರ್ಮಾನಿಸಿದ್ದಾರೆ ಎಂಬ ವದಂತಿ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು.[ಎಐಎಡಿಎಂಕೆ ಪ್ರಾಥಮಿಕ ಸದಸ್ಯತ್ವದಿಂದ ಶಶಿಕಲಾ ಉಚ್ಚಾಟನೆ]

ಹಂಗಾಮಿ ಮುಖ್ಯಮಂತ್ರಿ ಒ.ಪನ್ನೀರ್ ಸೆಲ್ವಂ ಹಾಗೂ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಶಶಿಕಲಾ ನಟರಾಜನ್ ಗುರುವಾರವಷ್ಟೇ ರಾಜ್ಯಪಾಲರನ್ನು ಭೇಟಿಯಾಗಿ, ತಮಗೆ ಸರಕಾರ ರಚನೆಗೆ ಅವಕಾಶ ನೀಡಬೇಕು ಎಂದು ಮನವಿ ಮಾಡಿದ್ದರು. ಶಶಿಕಲಾ ನಟರಾಜನ್ ಅವರು ತಮಗೆ ಪಕ್ಷದಲ್ಲಿ ಶಾಸಕರ ಬೆಂಬಲವಿದೆ ಎಂದು ಸಹಿಯುಳ್ಳ ಪತ್ರವನ್ನು ರಾಜ್ಯಪಾಲರಿಗೆ ತೋರಿಸಿದ್ದರು.
No report has been sent still from Governor C Vidyasagar Rao: Raj Bhavan PRO
— ANI (@ANI_news) 10 February 2017
ಈ ವೇಳೆ, ತಮ್ಮ ಬಳಿ ಬಲವಂತವಾಗಿ ರಾಜೀನಾಮೆ ಪಡೆಯಲಾಗಿದೆ. ಆದ್ದರಿಂದ ಅದನ್ನು ವಾಪಸ್ ಪಡೆಯಲು ಅವಕಾಶ ನೀಡಬೇಕು ಎಂದು ಪನ್ನೀರ್ ಸೆಲ್ವಂ ಮನವಿ ಮಾಡಿದ್ದರು. ಆ ನಂತರ ನಡೆದ ಬೆಳವಣಿಗೆಯಲ್ಲಿ ರಾಜ್ಯಪಾಲರು ಕೇಂದ್ರಕ್ಕೆ ಪತ್ರ ಕಳುಹಿಸಿದ್ದಾರೆ. ಶಶಿಕಲಾ ಅವರಿಗೆ ಅವಕಾಶ ನೀಡಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಅದಕ್ಕೆ ಈಗ ರಾಜಭವನದಿಂದಲೇ ಸ್ಫಷ್ಟನೆ ಬಂದಿದೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications