ಕೊಲಂಬೋ ಸ್ಫೋಟಕ್ಕೂ ನಮಗೂ ಸಂಬಂಧವಿಲ್ಲ : ತಮಿಳು ಸಂಘಟನೆ
ಚೆನ್ನೈ, ಏಪ್ರಿಲ್ 23: ಶ್ರೀಲಂಕಾದ ವಿವಿಧೆಡೆ ಭಾನುವಾರದಂದು ಈಸ್ಟರ್ ಸಂಭ್ರಮಾಚರಣೆ ಸಂದರ್ಭದಲ್ಲಿ ಸಂಭವಿಸಿದ ಸರಣಿ ಬಾಂಬ್ ಸ್ಫೋಟ ನಮ್ಮ ಸಂಘಟನೆಗೂ ಯಾವುದೇ ಸಂಬಂಧವಿಲ್ಲ ಎಂದು ತಮಿಳುನಾಡು ತೌಹಿದ್ ಜಮಾತ್(ಟಿಎನ್ ಟಿಜೆ) ಸಂಘಟನೆ ಸ್ಪಷ್ಟಪಡಿಸಿದೆ.
ಕೊಲಂಬೋ ಹಾಗೂ ಇನ್ನಿತರ ಕಡೆಗಳಲ್ಲಿ ಸಂಬಂಧಿಸಿದ ಸ್ಫೋಟಕ್ಕೆ ರಾಷ್ಟ್ರೀಯ ತೌಹಿದ್ ಜಮಾತೆ(ಎನ್ಟಿಜೆ) ಕಾರಣವಿರಬಹುದು ಎಂಬ ಶಂಕೆ ವ್ಯಕ್ತವಾಗಿತ್ತು. ಆದರೆ, ಎನ್ಟಿಜೆಗೂ ಟಿಎನ್ಟಿಜೆಗೂ ಸಂಬಂಧವಿಲ್ಲ ಎಂದು ತಮಿಳುನಾಡು ಮೂಲದ ಸಂಘಟನೆ ಇಂದು ಸ್ಪಷ್ಟಪಡಿಸಿದೆ.
ಶ್ರೀಲಂಕಾದಲ್ಲಿರುವ ತೌಹಿ ಜಮಾತ್ (ಎಸ್ ಎಲ್ಟಿಜೆ) ಹಾಗೂ ತಮಿಳುನಾಡಿನ ಘಟಕ ಟಿಎನ್ಟಿಜೆ ಸಾಮಾಜಿಕ ಕಳಕಳಿಯಿಂದ ಅನೇಕ ಕಾರ್ಯಗಳನ್ನು ಕೈಗೊಳ್ಳುತ್ತಾ ಬಂದಿದೆ.
ವಿಧ್ವಂಸಕ ಕೃತ್ಯ ಎಸಗುವ ಉಗ್ರ ಸಂಘಟನೆಗಳನ್ನು ವಿರೋಧಿಸುತ್ತಾ ಬಂದಿದ್ದೇವೆ ಎಂದು ಟಿಎನ್ಟಿಜೆ ವಕ್ತಾರರು ಹೇಳಿಕೆ ನೀಡಿದ್ದಾರೆ.

ಟಿಎನ್ಟಿಜೆ ಪ್ರಧಾನ ಕಾರ್ಯದರ್ಶಿ ಪ್ರತಿಕ್ರಿಯೆ
ಟಿಎನ್ಟಿಜೆ ಪ್ರಧಾನ ಕಾರ್ಯದರ್ಶಿ ಈ ಬಗ್ಗೆ ಸ್ಪಷ್ಟನೆ ನೀಡಿ, ತೌಹಿದ್ ಎಂಬ ಪದ ಎಲ್ಲಾ ಸಂಘಟನೆಗಳಲ್ಲೂ ಸಮಾನವಾಗಿ ಬಳಕೆಯಲ್ಲಿರುವುದರಿಂದ ಗೊಂದಲ, ಅನುಮಾನ ಮೂಡುವುದು ಸಹಜ ಹಾಗೂ ದುರದೃಷ್ಟಕರ. ಟಿಎನ್ಟಿಜೆ ಯಾವುದೇ ಕಾರಣಕ್ಕೂ ಎಂದಿಗೂ ಉಗ್ರವಾದವನ್ನು ಒಪ್ಪುವುದಿಲ್ಲ ಹಾಗೂ ಬೆಂಬಲಿಸುವುದಿಲ್ಲ. ಅಮಾಯಕರ ಸಾವಿಗೆ ಕಾರಣವಾದ ಸಂಘಟನೆಗೆ ಧಿಕ್ಕಾರವಿರಲಿ ಎಂದು ಹೇಳಿದ್ದಾರೆ.

ತೌಹಿದ್ ಜಮಾತ್ ಸಂಘಟನೆ
ಈ ವಿಧ್ವಂಸಕ ಸಂಬಂಧ 7 ಮಂದಿ ಶಂಕಿತರನ್ನು ಬಂಧಿಸಲಾಗಿದೆ ಎಂದು ಶ್ರೀಲಂಕಾದ ರಕ್ಷಣಾ ಸಚಿವರು ತಿಳಿಸಿದ್ದರು. ಇಸ್ಲಾಮಿಕ್ ಉಗ್ರ ಸಂಘಟನೆ ಐಎಸ್ಐಎಸ್ ಕೃತ್ಯದಂತೆ ತೋರುತ್ತಿದೆ. ತೌಹಿದ್ ಜಮಾತ್ ಸಂಘಟನೆ ಬಗ್ಗೆ ಹೆಚ್ಚಿನ ಸಂಶಯವಿದ್ದು, ತಮಿಳುನಾಡಿನಲ್ಲೂ ತನ್ನ ಅಸ್ತಿತ್ವವನ್ನು ಈ ಸಂಘಟನೆ ಹೊಂದಿದೆ ಎಂದು ತನಿಖಾ ಸಂಸ್ಥೆ ಮೂಲಗಳು ಹೇಳಿದ್ದವು.

ಇಸ್ಲಾಮಿಕ್ ಸಂಘಟನೆ ಕೃತ್ಯ ಎಂಬ ಅನುಮಾನ
ಹತ್ತು ವರ್ಷಗಳ ಹಿಂದೆ ಲಿಬೆರೇಷನ್ ಟಗರ್ಸ್ ಆಫ್ ತಮಿಳ್ ಈಳಂ(ಎಲ್ ಟಿಟಿಇ) ದಾಳಿ ನಡೆದಿದ್ದು ಬಿಟ್ಟರೆ, ಈ ರೀತಿ ದಾಳಿಯನ್ನು ದ್ವೀಪರಾಷ್ಟ್ರ ಕಂಡಿರಲಿಲ್ಲ. ಆದರೆ, ಸರಣಿ ಸ್ಫೋಟದಲ್ಲಿ ಬಳಸಲಾಗಿರುವ ಸ್ಫೋಟಕವಸ್ತುಗಳು ಹಾಗೂ ಸ್ಫೋಟ ಸಂಭವಿಸಿದ ರೀತಿ, ಚರ್ಚ್ ಗುರಿಯನ್ನಾಗಿಸಿರುವುದನ್ನು ಗಮನಿಸಿದರೆ ಇದು ಇಸ್ಲಾಮಿಕ್ ಸಂಘಟನೆ ಕೃತ್ಯ ಎಂದು ಅನುಮಾನ ವ್ಯಕ್ತವಾಗಿದೆ.

ಶ್ರೀಲಂಕಾದ ತೌಹಿದ್ ಜಮಾತ್
ವಹಾಬಿ ಜತೆ ಸಖ್ಯ ಹೊಂದಿರುವ ಶ್ರೀಲಂಕಾ ತೌಹಿದ್ ಜಮಾತ್ (ಎಸ್ಎಲ್ ಟಿಜೆ) ಈಗ ಶ್ರೀಲಂಕಾದ ಪೂರ್ವ ಪ್ರಾಂತ್ಯದಲ್ಲಿ ಸಕ್ರಿಯಾಗಿದ್ದು, ಶರಿಯಾರ್ ಕಾನೂನು, ಮಹಿಳೆಯರಿಗೆ ಬುರ್ಖಾ ಕಡ್ಡಾಯ, ಮೂಲಭೂತವಾದ ಪ್ರಸಾರ ಮಾಡಲು ಹೆಚ್ಚು ಮಸೀದಿ ನಿರ್ಮಾಣ ಹೀಗೆ ಅನೇಕ ಕಾರ್ಯಗಳಲ್ಲಿ ತೊಡಗಿಕೊಂಡಿವೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications