ಇನ್ಫಿ ಟೆಕ್ಕಿ ಸ್ವಾತಿ ಕೊಂದ ರಾಮ ಆತ್ಮಹತ್ಯೆಗೆ ಶರಣು
ಚೆನ್ನೈ, ಸೆ.18: ಇನ್ಫೋಸಿಸ್ ಉದ್ಯೋಗಿ ಸ್ವಾತಿ ಹತ್ಯೆ ಪ್ರಕರಣದ ಏಕೈಕ ಆರೋಪಿ ತಿರುನಲ್ವೇಲಿ ಮೂಲದ ರಾಮ್ ಕುಮಾರ್ ದುರಂತ ಸಾವನ್ನಪ್ಪಿದ್ದಾನೆ. ಇಲ್ಲಿನ ಪುಳಲ್ ಸೆರೆಮನೆಯಲ್ಲಿ ಲೈವ್ ವೈರ್ ಕಡಿದು ವಿದ್ಯುತ್ ಹರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಚೆನ್ನೈನ ನುಂಗಂಬಾಕ್ಕಂ ರೈಲು ನಿಲ್ದಾಣದಲ್ಲಿ ಜೂನ್ 24 ರಂದು ಸ್ವಾತಿ ಹತ್ಯೆ ನಡೆದಿತ್ತು. ಬಂಧಿತ ಆರೋಪಿ ರಾಮ ಕುಮಾರ್ (22) ಈ ಮುಂಚೆ ಕೂಡಾ ಆತ್ಮಹತ್ಯೆಗೆ ಯತ್ನಿಸಿದ್ದ. ಪೊಲೀಸರ ಕಣ್ಣಿಗೆ ಮೊದಲ ಬಾರಿಗೆ ಬಿದ್ದಾಗ ಕುತ್ತಿಗೆ ಕೊಯ್ದುಕೊಂಡು ಆತ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದ್ದ. ಆದರೆ, ಆಗ ಬದುಕುಳಿದಿದ್ದ. [ಹತ್ಯೆಯಾದ ಇನ್ಫಿ ಸ್ವಾತಿಗೆ ಮತ್ತೊಬ್ಬ ಕಪಾಳಮೋಕ್ಷ ಮಾಡಿದ್ದ!]

ಆದರೆ, ಭಾನುವಾರದಂದು ರಾಮ್ ಕುಮಾರ್ ಮೈಮೇಲೆ ವಿದ್ಯುತ್ ಹರಿಸಿಕೊಂಡು ಕುಸಿದು ಬಿದ್ದಿದ್ದಾನೆ. ಪೊಲೀಸರು ತಕ್ಷಣವೇ ಸರ್ಕಾರಿ ರಾಯಪೇಟ್ ಆಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ಕೊಡಿಸಲು ಯತ್ನಿಸಿದ್ದಾರೆ. ಆದರೆ, ರಾಮ್ ಕುಮಾರ್ ನನ್ನು ಉಳಿಸಿಕೊಳ್ಳಲು ಆಗಲಿಲ್ಲ. ರಾಮ್ ಕುಮಾರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಸೋಮವಾರ(ಸೆಪ್ಟೆಂಬರ್ 19) ದಂದು ಕೋರ್ಟಿನಲ್ಲಿ ವಿಚಾರಣೆಗೆ ಬರಲು ನಿಗದಿಯಾಗಿದೆ.
ಮೀನಾಕ್ಷಿಪುರಂನಲ್ಲಿ ಇಂಜಿನಿಯರಿಂಗ್ ಪದವಿ ಪಡೆದಿದ್ದ ರಾಮ್, ಜೂನ್ 24ರಂದು ಸ್ವಾತಿ ಕೆಲಸಕ್ಕೆ ಹೋಗಲು ರೈಲಿಗಾಗಿ ಕಾಯುತ್ತಿದ್ದ ಸಂದರ್ಭದಲ್ಲಿ ಆಕೆಯನ್ನು ಹತ್ಯೆ ಮಾಡಿದ್ದ.
ರಾಮ ಕುಮಾರ್ ಬಂಧನಕ್ಕಾಗಿ 100 ಪೊಲೀಸರ ವಿಶೇಷ ತಂಡ ರಚನೆ ಮಾಡಲಾಗಿತ್ತು, ರೈಲ್ವೆ ಪೊಲೀಸರು, ಸೈಬರ್ ಕ್ರೈಂ ಪೊಲೀಸರು ಆರೋಪಿಯ ಬಂಧನಕ್ಕೆ ಸಹಕಾರ ನೀಡಿದರು. ಹಲವು ಪ್ರದೇಶಗಳ ಸಿಸಿಟಿವಿ ದೃಶ್ಯಾವಳಿಗಳನ್ನು ವಶಕ್ಕೆ ಪಡೆದು, ಜೂನ್ 25ರಂದು ರಾಮ ಕುಮಾರ್ ರೇಖಾ ಚಿತ್ರ ಬಿಡುಗಡೆ ಮಾಡಲಾಗಿತ್ತು. ಕೊನೆಗೆ ಜುಲೈ 1 ರಂದು ಆತನನ್ನು ಬಂಧಿಸಿ ಜೈಲಿಗೆ ಕಳಿಸಲಾಗಿತ್ತು.
-
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ












Click it and Unblock the Notifications