ತ.ನಾಡು ವಿಶ್ವಾಸಮತ, ಅಸಮಾಧಾನ ಇದ್ದರೆ ಕೋರ್ಟ್ ಗೆ ಹೋಗಿ
ತಮಿಳುನಾಡು ವಿಧಾನಸಭೆಯಲ್ಲಿ ಶನಿವಾರ ನಡೆದ ವಿಶ್ವಾಸ ಮತ ಸಾಬೀತು ಪ್ರಕ್ರಿಯೆ ಬಗ್ಗೆ ಒ.ಪನ್ನೀರ್ ಸೆಲ್ವಂ ಬಣ ಹಾಗೂ ಡಿಎಂಕೆ ರಾಜ್ಯಪಾಲರಿಗೆ ದೂರು ನೀಡಿದೆ. ಈ ಬಗ್ಗೆ ಅಸಮಾಧಾನ ಇದ್ದರೆ ನೀವು ಕೋರ್ಟ್ ಗೆ ಹೋಗಬಹುದು ಎಂದು ಅವರು ಸಲಹೆ ನೀಡಿದ್ದಾರೆ
ಚೆನ್ನೈ, ಫೆಬ್ರವರಿ 20: ತಮಿಳುನಾಡು ವಿಧಾನಸಭೆಯಲ್ಲಿ ಶನಿವಾರ ನಡೆದ ವಿಶ್ವಾಸಮತ ಸಾಬೀತಿನ ಬಗ್ಗೆ ರಾಜ್ಯಪಾಲ ವಿದ್ಯಾಸಾಗರ್ ರಾವ್ ವರದಿ ಕೇಳಿದ್ದು, ಮೂಲಗಳ ಪ್ರಕಾರ ಈ ವಿಚಾರದಲ್ಲಿ ಅವರು ಮಧ್ಯಪ್ರವೇಶಿಸುವ ಸಾಧ್ಯತೆ ಇಲ್ಲ. ವಿಶ್ವಾಸ ಮತ ಸಾಬೀತಿನ ವೇಳೆ ನಿಯಮಗಳನ್ನು ಪಾಲಿಸಿಲ್ಲ ಎಂದು ಡಿಎಂಕೆ ಹಾಗೂ ಒ.ಪನ್ನೀರ್ ಸೆಲ್ವಂ ಬಣ ದೂರು ನೀಡಿದೆ.
ಇದೇ ವೇಳೆ ಈ ವಿಚಾರವಾಗಿ ತನಿಖೆ ಮಾಡುವಂತೆ ಸಹ ಕೇಳಲಾಗಿದೆ. ಈ ಬಗ್ಗೆ ದೂರು ನೀಡಲು ತೆರಳಿದ್ದ ನಿಯೋಗಕ್ಕೆ ರಾಜ್ಯಪಾಲರು, ವಿರೋಧ ಪಕ್ಷಗಳು ಹಾಜರಿದ್ದರೂ ರಹಸ್ಯ ಮತದಾನ ಅಂತ ಮಾಡಿದ್ದರೂ ವಿಶ್ವಾಸಮತ ಸಾಬೀತು ಪಡಿಸುತ್ತಿದ್ದರು. ಏಕೆಂದರೆ, ಇ.ಪಳನಿಸ್ವಾಮಿ ಅವರಿಗೆ 122 ಶಾಸಕರ ಬೆಂಬಲವಿತ್ತು. ಆ ಬಗ್ಗೆ ಅನುಮಾನ ಪಡುವ ಅಗತ್ಯವಿಲ್ಲ ಎಂದಿದ್ದಾರೆ.[ತಮಿಳುನಾಡು ಹೈಡ್ರಾಮ: ಸ್ಟಾಲಿನ್ ಸೇರಿ 2,000 ಜನರ ಮೇಲೆ ಎಫ್ಐಆರ್]

ಇದರ ಜತೆಗೆ ಸಭಾಧ್ಯಕ್ಷರು ಕಲಾಪ ಹೇಗೆ ನಡೆಯಬೇಕು ಎಂಬುದನ್ನು ನಿರ್ಧಾರ ಮಾಡುತ್ತಾರೆ. ಈ ಬಗ್ಗೆ ವರದಿ ಕೇಳ್ತೀನಿ, ಆದರೆ ಮಧ್ಯಪ್ರವೇಶ ಮಾಡುವುದಿಲ್ಲ ಎಂದು ರಾಜ್ಯಪಾಲರು ಹೇಳಿದ್ದಾರೆ. ಇಂಥ ವಿಚಾರಗಳ ಬಗ್ಗೆ ಸಭಾಧ್ಯಕ್ಷರು ತೀರ್ಮಾನ ಕೈಗೊಳ್ಳಬೇಕು. ಹೇಗೆ ಮತದಾನ ನಡೆಯಬೇಕು ಎಂದು ನಿರ್ಧರಿಸುವ ಅಧಿಕಾರ ಅವರಿಗೆ ಇರುತ್ತದೆ ಎಂದು ಕೂಡ ವಿದ್ಯಾಸಾಗರ್ ರಾವ್ ಹೇಳಿದ್ದಾರೆ.[ಪಳನಿಸ್ವಾಮಿ ಸಿಎಂ ಆಗಿ ತುಂಬ ಕಾಲ ಉಳಿಯಲ್ಲ ಅನ್ನೋಕೆ ಇಲ್ಲಿವೆ 5 ಕಾರಣ]
ಒಂದು ವೇಳೆ ವಿಶ್ವಾಸ ಮತ ಸಾಬೀತಿನ ಬಗ್ಗೆ ಅಸಮಾಧಾನ ಇದ್ದರೆ ನ್ಯಾಯಾಂಗದ ಮೊರೆ ಹೋಗಿ. ನ್ಯಾಯಾಂಗವು ವರದಿ ತರಿಸಿಕೊಂಡು ವಿಶ್ವಾಸ ಮತ ಸಾಬೀತಿನ ಪ್ರಕ್ರಿಯೆ ನ್ಯಾಯಸಮ್ಮತವಾಗಿದ್ದೇ ಅಲ್ಲವೇ ಎಂಬುದನ್ನು ನಿರ್ಧರಿಸುತ್ತದೆ. ಹೊಸದಾಗಿ ವಿಶ್ವಾಸ ಮತ ಸಾಬೀತಿಗೆ ಕೂಡ ನ್ಯಾಯಾಂಗವು ಸೂಚನೆ ನೀಡಬಹುದು ಎಂದು ಕೂಡ ರಾಜ್ಯಪಾಲರು ನಿಯೋಗಕ್ಕೆ ಹೇಳಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications