ಚೆನ್ನೈ : ಪರಿಹಾರ ಕಾರ್ಯಾಚರಣೆ ಆರಂಭಿಸಿದ ನೌಕಾಪಡೆ
ಚೆನ್ನೈ, ಡಿಸೆಂಬರ್ 03 : ಭಾರೀ ಮಳೆಯಿಂದಾಗಿ ಉಂಟಾಗಿರುವ ಪ್ರವಾಹದ ಮಧ್ಯೆ ಸಿಲುಕಿರುವ ಚೆನ್ನೈ ಮತ್ತು ಅದರ ಉಪನಗರಗಳ ಜನರನ್ನು ರಕ್ಷಣೆ ಮಾಡಲು ಭಾರತೀಯ ನೌಕಾಪಡೆ ಸಿದ್ಧವಾಗಿದೆ. ಗುರುವಾರ ಬೆಳಗ್ಗೆಯಿಂದಲೇ ನೌಕಾಪಡೆ ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಲಿದೆ.
ನೌಕಾಪಡೆಯ ಸಿ-17ಎಸ್ ವಿಮಾನ ರಕ್ಷಣಾ ಸಾಮಾಗ್ರಗಳನ್ನು ಹೊತ್ತು ಆರಕ್ಕೊನಂ ಬಳಿ ಇರುವ ಐಎನ್ಎಸ್ ರಾಜಾಲಿ ಏರ್ ಸ್ಟೇಷನ್ ತಲುಪಿದೆ. ಆಹಾರ ಸಾಮಾಗ್ರಿ, ಔಷಧಿಗಳು ಏರ್ ಸ್ಟೇಷನ್ ತಲುಪಿದ್ದು, ತಕ್ಷಣ ಕಾರ್ಯಾಚರಣೆ ಆರಂಭವಾಗಲಿದೆ. [ಗ್ಯಾಲರಿ: ಹಚ್ಚಿ ಹೊಡೆಯುತ್ತಿರುವ ಮಳೆಗೆ ತತ್ತರಿಸಿದ ಚೆನ್ನೈ]

ಒನ್ ಇಂಡಿಯಾ ಜೊತೆ ಮಾತನಾಡಿದ ನೌಕಾಪಡೆಯ ವಕ್ತಾರ ಕ್ಯಾಪ್ಟನ್ ಡಿ.ಕೆ.ಶರ್ಮಾ ಅವರು ರಕ್ಷಣಾ ಕಾರ್ಯಾಚರಣೆ ಬಗ್ಗೆ ಮಾಹಿತಿ ನೀಡಿದ್ದು, 'ಗುರುವಾರ ಬೆಳಗ್ಗೆಯಿಂದಲೇ ಕಾರ್ಯಾಚರಣೆ ಆರಂಭಿಸಲಾಗುತ್ತದೆ' ಎಂದು ಹೇಳಿದ್ದಾರೆ. [ಮಳೆಯಿಂದ ಜರ್ಝರಿತ ತಮಿಳುನಾಡಿನ ಇತ್ತೀಚಿನ ವರದಿಗಳು]
'ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್ಡಿಆರ್ಎಫ್) ಸಿಬ್ಬಂದಿಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಲಿದ್ದಾರೆ. ಏರ್ ಇಂಡಿಯಾದ ಎ-320 ವಿಮಾನ ಐಎನ್ಎಸ್ ರಾಜಾಲಿ ಏರ್ ಸ್ಟೇಷನ್ನಲ್ಲಿ ಲ್ಯಾಂಡ್ ಆಗಲು ಬುಧವಾರ ರಾತ್ರಿಯೇ ಪ್ರಾಯೋಗಿಕ ಪರೀಕ್ಷೆ ನಡೆಸಿದೆ' ಎಂದು ಶರ್ಮಾ ತಿಳಿಸಿದ್ದಾರೆ. [ತಮಿಳುನಾಡಿಗೆ 5 ಕೋಟಿ ನೆರವು ಘೋಷಿಸಿದ ಕರ್ನಾಟಕ]
ರಕ್ಷಣಾ ಕಾರ್ಯಾಚರಣೆ ಸವಾಲು : ರಕ್ಷಣಾ ಸಾಮಾಗ್ರಿ, ಆಹಾರಗಳು ಬಂದು ತಲುಪಿವೆ. ಆದರೆ, ಇವುಗಳನ್ನು ಏರ್ ಸ್ಟೇಷನ್ನಿಂದ ಹೊರಗೆ ತೆಗೆದುಕೊಂಡು ಹೋಗಿ ಜನರಿಗೆ ತಲುಪಿಸುವುದು ದೊಡ್ಡ ಸವಾಲಾಗಿದೆ. ಚೆನ್ನೈ ಸಂಪೂರ್ಣವಾಗಿ ಜಲಾವೃತವಾಗಿದ್ದು ರಕ್ಷಣಾ ಸಾಮಾಗ್ರಿಗಳನ್ನು ಎಲ್ಲಿಗೆ ತಲುಪಿಸಬೇಕು? ಎಂದು ರಕ್ಷಣಾ ತಂಡ ಯೋಜನೆ ರೂಪಿಸುತ್ತಿದೆ.
ಆಹಾರ, ಔಷಧ ಮುಂತಾದ ರಕ್ಷಣಾ ಸಾಮಾಗ್ರಿಗಳನ್ನು ಜನರಿಗೆ ತಲುಪಿಸಲು ತಮಿಳುನಾಡು ಸರ್ಕಾರ ಬಸ್ ಮತ್ತು ಇತರ ವಾಹನಗಳ ವ್ಯವಸ್ಥೆಯನ್ನು ಮಾಡುವಂತೆ ನೌಕಾಪಡೆ ಮನವಿ ಮಾಡಿದೆ. ತಕ್ಷಣ ವಾಹನಗಳ ವ್ಯವಸ್ಥೆಯನ್ನು ಸರ್ಕಾರ ಮಾಡಿದರೆ, ನೌಕಾಪಡೆ ಕಾರ್ಯಾಚರಣೆಯನ್ನು ಆರಂಭಿಸುತ್ತದೆ.

ಕರಾವಳಿ ರಕ್ಷಣಾ ಪಡೆ ಬುಧವಾರ ರಾತ್ರಿ ಸುಮಾರು 150 ಜನರನ್ನು ರಕ್ಷಿಸಿದ್ದು ಸುರಕ್ಷಿತ ಪ್ರದೇಶಗಳಿಗೆ ಕಳುಹಿಸಿಕೊಟ್ಟಿದೆ. ಕರಾವಳಿ ರಕ್ಷಣಾ ಪಡೆ ಮತ್ತು ರಾಜ್ಯ ಪೊಲೀಸರ ಜಂಟಿ ತಂಡವನ್ನು ರಕ್ಷಣಾ ಕಾರ್ಯಕ್ಕಾಗಿ ರಚನೆ ಮಾಡಲಾಗಿದೆ. ಕರಾವಳಿ ರಕ್ಷಣಾ ಪಡೆಯ ಬೋಟ್ಗಳು ಜಲಾವೃತ ಪ್ರದೇಶದಲ್ಲಿ ಸಿಲುಕಿರುವ ಜನರಿಗೆ ಆಹಾರ ಪದಾರ್ಥಗಳನ್ನು ತಲುಪಿಸುತ್ತಿವೆ.
-
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ












Click it and Unblock the Notifications