ತಮಿಳುನಾಡು: ಪೊಲ್ಲಾಚಿಯಿಂದ ಮಂಗಳಮುಖಿ ಕಲ್ಕಿ ಸ್ಪರ್ಧೆ
ಚೆನ್ನೈ,ಮಾ.30: ತಮಿಳುನಾಡಿನ ಖ್ಯಾತ ಲೇಖಕಿ ಹಾಗೂ ಸಿನಿಮಾ ನಟಿ, ಮಂಗಳ ಮುಖಿ, ಕಲ್ಕಿ ಸುಬ್ರಮಣಿಯಂ ಅವರು ಈ ಲೋಕಸಭಾ ಚುನಾವಣಾ ಕಣಕ್ಕಿಳಿದಿದ್ದು ಎಲ್ಲರಲ್ಲೂ ಅಚ್ಚರಿ ಮೂಡಿಸಿದ್ದಾರೆ. ತನ್ನ ಸಮುದಾಯದ ಬಾಂಧವರ ಹಕ್ಕುಗಳ ರಕ್ಷಣೆಗಾಗಿ ನಡೆಸುತ್ತಿರುವ ಹೋರಾಟಕ್ಕೆ ಹೊಸ ಆಯಾಮವನ್ನು ಕೊಡುವ ನಿಟ್ಟಿನಲ್ಲಿ ಸ್ಪರ್ಧಿಸುತ್ತಿದ್ದೇನೆ ಎಂದಿದ್ದಾರೆ.
ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯ ಪೊಲ್ಲಾಚಿ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲು ನಿರ್ಧರಿಸಿರುವ ಕಲ್ಕಿ ಏ.4ರಂದು ನಾಮಪತ್ರ ಸಲ್ಲಿಸಿ, ಅಂದಿನಿಂದಲೇ ಪ್ರಚಾರ ಆರಂಭಿಸಲಿದ್ದಾರೆ. ಈ ಕ್ಷೇತ್ರಕ್ಕೆ ಏ.27ರಂದು ಮತದಾನ ನಡೆಯಲಿದ್ದು ಈ ಮೊದಲು ವಿಲ್ಲುಪುರಂ ಕ್ಷೇತ್ರದಿಂದ ಕಣಕ್ಕಿಳಿಯಲು ನಿರ್ಧರಿಸಿದ್ದಳಾದರೂ ಕೂಡ ಅದು ಮೀಸಲು ಕ್ಷೇತ್ರವಾದ್ದರಿಂದ ಅಲ್ಲಿಂದ ಪೊಲ್ಲಾಚಿಗೆ ತನ್ನ ಕಾರ್ಯಕ್ಷೇತ್ರವನ್ನು ಬದಲಾಯಿಸಿಕೊಂಡಿದ್ದಾರೆ.
ಪೊಲ್ಲಾಚಿ ಕಲ್ಕಿಯ ಸ್ವಂತ ಜಿಲ್ಲೆಯಾಗಿದ್ದು ಈ ಪ್ರದೇಶದ ಬಹುತೇಕ ಭಾಗಗಳು ನನಗೆ ಗೊತ್ತು ಹಾಗೂ ಇಲ್ಲಿನ ಸಮಸ್ಯೆಗಳ ಬಗ್ಗೆಯೂ ತಿಳಿದುಕೊಂಡಿದ್ದೇನೆ ಹಾಗಾಗಿ ಈ ಕ್ಷೇತ್ರವನ್ನೇ ಆಯ್ದುಕೊಂಡೆ ಎಂದು ಕಲ್ಕಿ ಸುಬ್ರಮಣಿಯಂ ಹೇಳಿದ್ದಾರೆ. [ಮೋದಿ ಮಾತನ್ನು ಕನ್ನಡದಲ್ಲಿ ಕೇಳಿರಿ]

ಕಲ್ಕಿ ಸುಬ್ರಮಣಿಯಂ ಅಂತಾರಾಷ್ಟ್ರೀಯ ಸಂಬಂಧಗಳು ಮತ್ತು ಸಾರ್ವಜನಿಕ ಸಂಪರ್ಕ ಕ್ಷೇತ್ರಗಳಲ್ಲಿ ಎರಡು ಸ್ನಾತಕೋತ್ತರ ಪದವೀಧರೆಯಾಗಿದ್ದು, ದೇಶದಲ್ಲಿ ಮಂಗಳಮುಖಿಯರ ಸಮಸ್ಯೆಗಳ ಕುರಿತಂತೆ ಹೋರಾಟ ನಡೆಸುತ್ತಾ ಬಂದಿದ್ದಾರೆ.
ಸಹೋದರಿ ಫೌಂಡೇಷನ್ ಎಂಬ ಸರ್ಕಾರೇತರ ಸಂಸ್ಥೆಯೊಂದನ್ನು ಸ್ಥಾಪಿಸಿ ಆ ಮೂಲಕ ನೂರಾರು ಮಂಗಳಮುಖಿಯರಿಗೆ ಮಾರ್ಗದರ್ಶನ ಹಾಗೂ ಸಂಸ್ಥೆಯ ಇತಿಮಿತಿಯಲ್ಲಿ ಸಹಕಾರ ನೀಡುತ್ತಿರುವ ಸುಬ್ರಮಣಿಯಂ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.
ನಾನು ಮಂಗಳಮುಖಿಯರ ಪರ ಹೋರಾಟ ನಡೆಸುತ್ತಿದ್ದರೂ ಕೂಡ ಕೇವಲ ಅಷ್ಟಕ್ಕೆ ಸೀಮಿತ ವಾಗದೆ ಒಟ್ಟಾರೆ ಸಾರ್ವಜನಿಕ ಸೇವೆಯಲ್ಲಿ ತೊಡಗಿಕೊಂಡಿದ್ದೇನೆ. ಸಾರ್ವಜನಿಕ ಸೇವಾ ಕ್ಷೇತ್ರದಲ್ಲಿ ಮಂಗಳಮುಖಿಯರೂ ಬರುವುದರಿಂದ ಅದನ್ನು ಪ್ರತ್ಯೇಕವಾಗಿ ನಡೆಸುವ ಅಗತ್ಯವಿಲ್ಲ. ಸುಬ್ರಮಣಿಯಂ ಹೋರಾಟದ ಫಲವಾಗಿ ಸರ್ಕಾರ ಮಂಗಳಮುಖಿಯರ ಸಮುದಾಯ ಸಂಕ್ಷೇಮ ಸಮಿತಿಯೊಂದನ್ನು ಸ್ಥಾಪಿಸಿದ್ದು ಏ.15ನ್ನು ಮಂಗಳಮುಖಿಯರ ದಿನ ಎಂದು ಆಚರಿಸಲು ಆದೇಶಿಸಿದೆ.
ನನ್ನ ರೋಲ್ ಮಾಡೆಲ್ ಗಳೆಂದರೆ ಭಾರತದ ಮಾಜಿ ಪ್ರಧಾನಿ ಇಂದಿರಾಗಾಂಧಿ ಹಾಗೂ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಮೇಡಂ. ಇಂದಿರಾಗಾಂಧಿ, ಜಯಲಲಿತಾ ಅಂಥವರನ್ನು ನೋಡಿ ಆಡಳಿತ ನಡೆಸುವ ವಿಧಾನ ಅರಿತಿದ್ದೇನೆ ಜೊತೆಗೆ ಜನತೆಯ ಕಲ್ಯಾಣಕ್ಕಾಗಿ ಅಭಿವೃದ್ಧಿ ಕಾರ್ಯಗಳನ್ನು ಮಾಡಬೇಕೆಂದು ನನ್ನ ಆಸೆ.
ವಿಶೇಷವಾಗಿ ಮಂಗಳಮುಖಿಯರಿಗೆ ಉದ್ಯೋಗ ಒದಗಿಸುವುದು ನನ್ನ ಪ್ರಮುಖ ಗುರಿಯಾಗಿರುತ್ತದೆ. ನಾನು ಸ್ವತಂತ್ರವಾಗಿ ಸ್ಪರ್ಧಿಸುತ್ತಿದ್ದು ಇತರ ರಾಜಕಾರಣಿಗಳಂತೆ ಧನಬಲ, ತೋಳ್ಬಲಗಳನ್ನು ಬಳಸಿಕೊಂಡು ಚುನಾವಣೆ ಗೆಲ್ಲುವ ಇರಾದೆ ನನಗಿಲ್ಲ. ಜನ ನನಗೆ ಮತ ನೀಡುತ್ತಾರೆ ಎಂಬ ಆತ್ಮವಿಶ್ವಾಸವಿದೆ ಎಂದು ಕಲ್ಕಿ ಸುಬ್ರಮಣಿಯಂ ಹೇಳಿದ್ದಾರೆ. (ಪಿಟಿಐ)
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications