ಹೊಸ ಪಕ್ಷ ಸ್ಥಾಪನೆ ಮಾಡಿದ ಟಿಟಿವಿ ದಿನಕರನ್
ಚೆನ್ನೈ, ಮಾರ್ಚ್ 15 : ಶಶಿಕಲಾ ನಟರಾಜನ್ ಆಪ್ತ ಟಿಟಿವಿ ದಿನಕರನ್ ಹೊಸ ಪಕ್ಷವನ್ನು ಸ್ಥಾಪನೆ ಮಾಡಿದ್ದಾರೆ. ನಟ ರಜನಿಕಾಂತ್, ಕಮಲ್ ಹಾಸನ್ ಹೊಸ ಪಕ್ಷ ಸ್ಥಾಪನೆ ಮಾಡಿದ ಬಳಿಕ ತಮಿಳುನಾಡಿನಲ್ಲಿ ಮತ್ತೊಂದು ರಾಜಕೀಯ ಪಕ್ಷ ಉದಯವಾಗಿದೆ.
ಗುರುವಾರ ಮಧುರೈನಲ್ಲಿ ಟಿಟಿವಿ ದಿನಕರನ್ ಹೊಸ ಪಕ್ಷದ ಹೆಸರು ಘೋಷಣೆ ಮಾಡಿದರು. 'ಅಮ್ಮ ಮಕ್ಕಳ್ ಮುನ್ನೇತ್ರ ಕಳಗಂ' ಎಂಬ ಪಕ್ಷವನ್ನು ಆರ್.ಕೆ.ನಗರದ ಪಕ್ಷೇತರ ಶಾಸಕ ಟಿಟಿವಿ ದಿನಕರನ್ ಸ್ಥಾಪನೆ ಮಾಡಿದ್ದಾರೆ.

ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿ.ಜಯಲಲಿತಾ ಅವರ ಭಾವಚಿತ್ರವನ್ನು ಹೊಂದಿರುವ ಧ್ವಜವನ್ನು ಅಮ್ಮ ಮಕ್ಕಳ್ ಮುನ್ನೇತ್ರ ಕಳಗಂ ಪಕ್ಷ ಒಳಗೊಂಡಿದೆ.
#FLASH Amma Makkal Munetra Kazhagam will be the name of my party: TTV Dinakaran. #TamilNadu pic.twitter.com/Qj076jOSKx
— ANI (@ANI) March 15, 2018
ಹೊಸ ಪಕ್ಷ ಸ್ಥಾಪನೆ ಮಾಡಿದ ಬಳಿಕ ಮಾತನಾಡಿದ ದಿನಕರನ್, 'ಮುಂಬರುವ ಎಲ್ಲಾ ಚುನಾವಣೆಗಳಲ್ಲಿಯೂ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ. ಚುನಾವಣೆಯಲ್ಲಿ ನಾವು ಗೆಲುವು ಸಾಧಿಸಲಿದ್ದೇವೆ' ಎಂದರು.
'ನಮ್ಮ ಪಕ್ಷಕ್ಕೆ ಎರಡು ಎಲೆಯ ಚಿಹ್ನೆಯನ್ನು ಪಡೆಯಲು ನಾವು ಪ್ರಯತ್ನ ಮಾಡಲಿದ್ದೇವೆ. ಅಲ್ಲಿಯ ತನಕ ಪಕ್ಷದ ಚಿಹ್ನೆ ಕುಕ್ಕರ್ ಆಗಿರುತ್ತದೆ' ಎಂದು ಹೇಳಿದರು.
ತಮಿಳುನಾಡು ಮಾಜಿ ಸಿಎಂ ಜೆ.ಜಯಲಲಿತಾ ಅವರ ನಿಧನದಿಂದ ತೆರವಾದ ರಾಧಾಕೃಷ್ಣ ನಗರ (ಆರ್.ಕೆ.ನಗರ) ವಿಧಾನಸಭಾ ಕ್ಷೇತ್ರಕ್ಕೆ ಡಿ.21ರಂದು ಮತದಾನ ನಡೆದಿತ್ತು. ಪಕ್ಷೇತರ ಅಭ್ಯರ್ಥಿಯಾಗಿ ದಿನಕರನ್ ಸ್ಪರ್ಧಿಸಿ, ಜಯಗಳಿಸಿದ್ದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications