ತಮಿಳುನಾಡಿನ ಚಿದಂಬರಂ ದೇವಾಲಯದ 20 ಅರ್ಚಕರ ವಿರುದ್ದ ಪ್ರಕರಣ ದಾಖಲು
ಚೆನ್ನೈ, ಫೆ 19: ಕಡಲೂರು ಜಿಲ್ಲೆಯಲ್ಲಿರುವ ಚಿದಂಬರಂ ನಟರಾಜ ದೇವಸ್ಥಾನದ ಆವರಣದಲ್ಲಿ ಎಸ್ಸಿ ಮಹಿಳೆಯೊಬ್ಬರು ಪ್ರಾರ್ಥನೆ ಮಾಡುವುದನ್ನು ತಡೆದ ಆರೋಪದಡಿ 20 ಅರ್ಚಕರ ಮೇಲೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಈ ಘಟನೆ ಮಂಗಳವಾರ (ಫೆ 15) ನಡೆದಿದ್ದು, ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಅದೇ ದಿನ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಕಡಲೂರು ಪೊಲೀಸ್ ವರಿಷ್ಠಾಧಿಕಾರಿ ತಿರು ಸಿ.ಶಕ್ತಿ ಗಣೇಶನ್ ಹೇಳಿದ್ದಾರೆ.
"ನಾವು ಅರ್ಚಕರ ವಿರುದ್ದ ಎಸ್ಸಿ/ಎಸ್ಸಿ ಕಾಯ್ದೆಯ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿ ಕೊಂಡಿದ್ದೇವೆ. ಇದು ಖಾಸಗಿ ದೇವಸ್ಥಾನ, ಈ ವೇಳೆ ಭಕ್ತರು ಮತ್ತು ಅರ್ಚಕರ ನಡುವೆ ಕೆಲಕಾಲ ಘರ್ಷಣೆ ನಡೆಯಿತು. ಕೋವಿಡ್ -19 ಕಾರಣ ದೇವಾಲಯದ ಕಮಿಟಿಯು ದೇವಾಲಯದ ಪ್ರವೇಶಕ್ಕೆ ಕೆಲವು ನಿರ್ಬಂಧಗಳನ್ನು ವಿಧಿಸಿದೆ ಎಂದು ಅರ್ಚಕರು ಹೇಳಿದ್ದಾರೆ. ಈ ವಿಚಾರವನ್ನು ಜಿಲ್ಲಾಧಿಕಾರಿಗೂ ತಿಳಿಸಿದ್ದೇವೆ' ಎಂದು ಎಸ್ಪಿ ಗಣೇಶನ್ ಹೇಳಿದ್ದಾರೆ.

ಘಟನೆಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಅವುಗಳಲ್ಲಿ ಒಂದರಲ್ಲಿ, ಒಬ್ಬ ಮಹಿಳೆ ಅಳುತ್ತಿರುವುದನ್ನು ಕಾಣಬಹುದು, ಅವರನ್ನು ದೀಕ್ಷಿತರು ಎಂದು ಕರೆಯಲ್ಪಡುವ ಪುರೋಹಿತರು, ಮತ್ತು ಸ್ಥಳೀಯರ ಗುಂಪು ಸುತ್ತುವರಿದಿರುವುದನ್ನು ಕಾಣಬಹುದಾಗಿತ್ತು. ದೇವಾಲಯಕ್ಕೆ ಪ್ರವೇಶಿಸುವ ವಿಚಾರದಲ್ಲಿ ದೀಕ್ಷಿತರ ಮತ್ತು ಮಹಿಳೆಯರ ನಡುವೆ ತೀವ್ರ ವಾಗ್ವಾದವೂ ನಡೆದಿದೆ.
"ದೇವಸ್ಥಾನದ ಆಡಳಿತ ಮಂಡಳಿ ನಿರ್ಧರಿಸಿದ ಕೋವಿಡ್ ಮಾರ್ಗಸೂಚಿಯಂತೆ, ಅರ್ಚಕರಿಗೆ ಮಾತ್ರ ಪ್ರಾರ್ಥನೆ ಸಲ್ಲಿಸಲು ಅವಕಾಶವಿರುವ ಪ್ರವೇಶವಿರುವ ಪ್ರದೇಶಕ್ಕೆ ತನಗೆ ಪ್ರವೇಶಿಸಲು ಅವಕಾಶ ನೀಡಲಿಲ್ಲ" ಎಂದು ಮಹಿಳೆ ಜಯಶೀಲಾ ಆರೋಪಿಸಿದ್ದಾರೆ.
ಇನ್ನೊಂದು ವಿಡೀಯೊದಲ್ಲಿ, ಮಹಿಳೆ ನಿರ್ಬಂಧಿತ ಪ್ರದೇಶಕ್ಕೆ ಹೋಗಲು ಮೆಟ್ಟಿಲುಗಳನ್ನು ಹತ್ತಲು ಪ್ರಯತ್ನಿಸುತ್ತಿರುವಾಗ ಪುರೋಹಿತರ ಗುಂಪು ಅವಳನ್ನು ಕೂಗುತ್ತಿರುವುದನ್ನೂ ಕಾಣಬಹುದಾಗಿದೆ. ಅರ್ಚಕರು ತನ್ನನ್ನು ಬೆದರಿಸಿ ದೇವಸ್ಥಾನದ ಆವರಣದಿಂದ ವಸ್ತುವನ್ನು ಕದ್ದಿದ್ದಾರೆ ಎಂದು ಸುಳ್ಳು ಆರೋಪ ಹೊರಿಸುತ್ತಿದ್ದಾರೆ ಎಂದು ಮಹಿಳೆ ದೂರು ದಾಖಲಿಸಿದ್ದಾರೆ.
-
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
B Khata: ಬಿ ಖಾತಾದಿಂದ ಎ ಖಾತಾ: ಹಳೆಯ ಗೈಡ್ಲೈನ್ ವ್ಯಾಲ್ಯೂ ವಿಧಿಸಲು ವಿಧಾನಸಭೆಯಲ್ಲಿ ಚರ್ಚೆ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್









Click it and Unblock the Notifications