ಜಯಲಲಿತಾ ಚಿಕಿತ್ಸೆಗೆ ಯುಕೆಯಿಂದ ಬಂದ ತಜ್ಞ ವೈದ್ಯ
ಚೆನ್ನೈ, ಅಕ್ಟೋಬರ್ 01 : ತೀವ್ರ ಅನಾರೋಗ್ಯಕ್ಕೆ ಒಳಗಾಗಿರುವ ತಮಿಳುನಾಡಿನ ಮುಖ್ಯಮಂತ್ರಿ ಜಯಲಲಿತಾ ಅವರಿಗೆ ನಿಜಕ್ಕೂ ಏನಾಗಿದೆ, ಅವರ ದೇಹಸ್ಥಿತಿ ಹೇಗಿದೆ ಎಂಬ ಬಗ್ಗೆ ಹಲವಾರು ಬಗೆಯ ಊಹಾಪೋಹಗಳು ಹರಿದಾಡುತ್ತಿರುವ ಹೊತ್ತಿನಲ್ಲೇ ಯುನೈಟೆಡ್ ಕಿಂಗಡಂನ ವೈದ್ಯರೊಬ್ಬರು ಅವರ ಪರೀಕ್ಷೆಗಾಗಿ ಚೆನ್ನೈಗೆ ಬಂದಿದ್ದಾರೆ.
ಲಂಡನ್ ಬ್ರಿಜ್ ಆಸ್ಪತ್ರೆಯಲ್ಲಿ ತುರ್ತು ಆರೈಕೆ ತಜ್ಞರಾಗಿರುವ ಡಾ. ರಿಚರ್ಡ್ ಜಾನ್ ಬೇಲ್ ಅವರು ಜಯಲಲಿತಾ ಅವರನ್ನು ಪರೀಕ್ಷಿಸಿದ ಬಳಿಕ, ಅಪೋಲೋ ಆಸ್ಪತ್ರೆಯಲ್ಲಿ ಜಯಲಲಿತಾ ಅವರಿಗೆ ಅತ್ಯುತ್ತಮ ಚಿಕಿತ್ಸೆ ದೊರೆಯುತ್ತಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇನ್ನೂ ಎರಡು ದಿನಗಳ ಕಾಲ ಜಯಲಲಿತಾ ಅವರಿಗೆ ಬೇಲ್ ಅವರು ಚಿಕಿತ್ಸೆ ನೀಡಲಿದ್ದಾರೆ.[ಆರೆಸ್ಸೆಸ್ ನಿಂದ ಜಯಲಲಿತಾ ಸಾವು ಎಂದವಳ ವಿರುದ್ಧ ಎಫ್ ಐಆರ್]

ಈ ನಡುವೆ, ಜಯಲಲಿತಾ ಅವರ ದೇಹಸ್ಥಿತಿಗತಿಯ ಬಗ್ಗೆ ಯಾಕೆ ನಿಜವಾದ ಚಿತ್ರಣ ನೀಡುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಂ ಕರುಣಾನಿಧಿ ಆಗ್ರಹಿಸಿದ್ದಾರೆ. ಅನವಶ್ಯಕವಾಗಿ ಹರಿದಾಡುತ್ತಿರುವ ಊಹಾಪೋಹಗಳಿಗೆ ಇತಿಶ್ರೀ ಹಾಡಿರಿ ಎಂದು ಕರುಣಾನಿಧಿ ಸೇರಿದಂತೆ ಹಲವಾರು ನಾಯಕರು ಸರಕಾರವನ್ನು ಒತ್ತಾಯಿಸುತ್ತಿದ್ದಾರೆ.
ತಮಿಳುನಾಡಿನ ರಾಜ್ಯಪಾಲ ಸಿ ವಿದ್ಯಾಸಾಗರ ಅವರು ಶನಿವಾರ ಅಪೋಲೋ ಆಸ್ಪತ್ರೆಗೆ ಭೇಟಿ ನೀಡಿ, ಜಯಲಲಿತಾ ಅವರ ಆರೋಗ್ಯದ ಬಗ್ಗೆ ತಿಳಿದುಕೊಳ್ಳುವ ಸಾಧ್ಯತೆಯಿದೆ. ಭೇಟಿಯ ನಂತರ ರಾಜ್ಯಪಾಲರು ಅಧಿಕೃತ ಹೇಳಿಕೆ ನೀಡಬಹುದೆಂದು ನಿರೀಕ್ಷಿಸಲಾಗಿದೆ.[ಜಯಲಲಿತಾ ಸಭೆ ನಡೆಸಿದ್ದರ ಫೋಟೋ ಎಲ್ಲಿ: ಕರುಣಾನಿಧಿ]
ಜಯಲಲಿತಾ ಅವರು ಕಳೆದ ಒಂದು ವಾರದಿಂದ ಆಸ್ಪತ್ರೆಗೆ ದಾಖಲಾಗಿದ್ದರೂ ರಾಜ್ಯಪಾಲರು ಏಕೆ ಭೇಟಿ ನೀಡಿ ವಿಚಾರಿಸಿಲ್ಲ ಎಂದು ಕರುಣಾನಿಧಿ ಅವರು ಕೇಳಿದ್ದರು. ಸರಕಾರ ಮಾತ್ರವಲ್ಲ, ಜಯಲಲಿತಾ ಅವರನ್ನು ನೋಡಿಕೊಳ್ಳುತ್ತಿರುವ ವೈದ್ಯರು ಕೂಡ ಆಗಾಗ ಹೇಳಿಕೆ ನೀಡಬೇಕೆಂದು ಆಗ್ರಹಿಸಿದ್ದಾರೆ.
ಜಯಲಲಿತಾ ಅವರು ಬೇಗನೆ ಗುಣವಾಗಲೆಂದು ಅಪೋಲೋ ಆಸ್ಪತ್ರೆ ಮುಂದೆ ಅವರ ಅಭಿಮಾನಿಗಳು ಪೂಜೆ ಸಲ್ಲಿಸಿದರು. ತಮಿಳುನಾಡಿನ ಹಲವಾರು ದೇವಸ್ಥಾನಗಳಲ್ಲಿ ಕೂಡ ಹೋಮಹವನ ಮಾಡಲಾಗುತ್ತಿದೆ.
-
ಗಾಢ ನಿದ್ರೆಗೆ ಜಾರಲು ಇಲ್ಲಿವೆ ಸುಲಭ ಉಪಾಯಗಳು: ಇಂದೇ ಪ್ರಯತ್ನಿಸಿ -
Summer Alert: ಬೇಸಿಗೆಯಲ್ಲಿ ಫ್ರಿಜ್ ನೀರು ಕುಡಿಯುತ್ತಿದ್ದೀರಾ? ಮೊದಲು ಈ ವಿಷಯ ತಿಳಿದುಕೊಳ್ಳಿ -
ವಾಸ್ತು ಮಾತ್ರ ಸಾಲದು! ನಿಮ್ಮ ಜಾತಕವೇ ಯಶಸ್ಸನ್ನು ನಿರ್ಧರಿಸುತ್ತದೆ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ












Click it and Unblock the Notifications